AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rains ಕುಂದಾನಗರಿಯಲ್ಲಿ ಅಕಾಲಿಕ ಮಳೆ: ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ

Rains: ಕುಂದಾನಗರಿಯಲ್ಲಿ ಇಂದು ಮಧ್ಯಾಹ್ನದಿಂದ ನಗರ ಪ್ರದೇಶ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಕಾಲಿಕ ಮಳೆ ಆಗಿದೆ. ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಈ ನಡುವೆ, ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಲಕ್ಷ್ಮೀನಗರದಲ್ಲಿ ವರದಿಯಾಗಿದೆ.

Rains ಕುಂದಾನಗರಿಯಲ್ಲಿ ಅಕಾಲಿಕ ಮಳೆ: ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ
ಸಿಡಿಲು ಬಡಿತಕ್ಕೆ ಹೊತ್ತಿ ಉರಿದ ತೆಂಗಿನ ಮರ
KUSHAL V
|

Updated on:Feb 18, 2021 | 11:28 PM

Share

ಬೆಳಗಾವಿ: ಕುಂದಾನಗರಿಯಲ್ಲಿ ಇಂದು ಮಧ್ಯಾಹ್ನದಿಂದ ನಗರ ಪ್ರದೇಶ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಕಾಲಿಕ ಮಳೆ ಆಗಿದೆ. ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಈ ನಡುವೆ, ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಲಕ್ಷ್ಮೀನಗರದಲ್ಲಿ ವರದಿಯಾಗಿದೆ. ಸಿಡಿಲು ಬಡಿದು ಲಕ್ಷ್ಮೀನಗರದ ರೇಡೇಕರ್ ಎಂಬುವವರ ಮನೆ ಬಳಿಯಿದ್ದ ತೆಂಗಿನ ಮರ ಹೊತ್ತಿ ಉರಿದಿದೆ. ಅವಘಡದಲ್ಲಿ ತೆಂಗಿನ ಮರ ಸುಟ್ಟು ಕರಕಲಾಗಿದೆ.

ಕೋಟೆನಾಡಿಗೆ ತಂಪೆರೆದ ಮಳೆರಾಯ ಇತ್ತ, ಕೋಟೆನಾಡು ಚಿತ್ರದುರ್ಗದಲ್ಲಿ ಜಿಲ್ಲೆಯಾದ್ಯಂತ ತುಂತುರು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಿಗೆ ಅಕಾಲಿಕ ಮಳೆ ಹರುಷ ತಂದಿದೆ. ಬಿಸಿಲಿನಿಂದ ಕಂಗೆಟ್ಟವರಿಗೆ ವರುಣ ತಂಪೆರೆದಿದ್ದಾನೆ. ಚಿತ್ರದುರ್ಗ ನಗರ ಭಾಗ ಸೇರಿದಂತೆ ಹಿರಿಯೂರು, ಚಳ್ಳಕೆರೆ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲೂಕಿನ ವಿವಿಧೆಡೆ ತುಂತುರು ಮಳೆಯಾಗಿದೆ. ಇನ್ನು, ಜಿಲ್ಲೆಯಾದ್ಯಂತ ಇತರ ಕಡೆ ಮೋಡ ಕವಿದ ವಾತಾವರಣವಿದೆ.

ಸಿಲಿಕಾನ್​ ಸಿಟಿಯಲ್ಲಿ 2 ದಿನಗಳ ಕಾಲ ತುಂತುರು ಮಳೆ ಸಾಧ್ಯತೆ ಅತ್ತ, ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲೂ ಮಳೆರಾಯ ಪ್ರಭಾವ ಬೀರಲಿದ್ದು ಫೆಬ್ರವರಿ 19ರಿಂದ 21ರವರೆಗೆ ನಗರದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಆದರೆ, ನಗರದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಅದರಲ್ಲೂ ಸಾಯಂಕಾಲ ಹಾಗೂ ರಾತ್ರಿ ವೇಳೆ ವರುಣನ ಕಾಟ ಹೆಚ್ಚಾಗಿ ಇರಲಿದೆ.

ಬಂಗಾಳ ಕೊಲ್ಲಿಯಲ್ಲಿ ಹವಾಮಾನ ಚಟುವಟಿಕೆ ಬಿರುಸಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮಳೆರಾಯನ ಪ್ರಭಾವ ಇನ್ನೆರಡು ದಿನಗಳ ಕಾಲ ಜೋರಾಗಿರಲಿದೆ.

ಇತ್ತ, ಹಾವೇರಿ ಜಿಲ್ಲೆಯ ಹಲವೆಡೆ ಗಾಳಿ ಸಹಿತ ಭಾರಿ ಮಳೆಯಾಗಿದೆ. ರಾಣೆಬೆನ್ನೂರು, ಹಿರೇಕೆರೂರು ತಾಲೂಕು ಸೇರಿದಂತೆ ಕೆಲವೆಡೆ ಮಳೆಯಾಗಿದೆ. ಸುಮಾರು ಅರ್ಧ ಗಂಟೆಯ ಕಾಲ‌ ಮಳೆ ಸುರಿದಿದೆ. ಜೊತೆಗೆ, ತುಮಕೂರಿನಲ್ಲಿ ಸಹ ಭಾರಿ ಮಳೆಯಾಗಿದೆ.

ಇದಲ್ಲದೆ, ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ. ಹಾಗಾಗಿ, ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಬಂದ ಭಕ್ತರ ಪರದಾಡುವ ಸ್ಥಿತಿ ಎದುರಾಯ್ತು. ಆದರೂ, ಮಳೆಯಲ್ಲೆ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆದರು

ಅತ್ತ, ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಜಿಲ್ಲೆಯ ಕೆಆರ್‌ಪೇಟೆ, ಶ್ರೀರಂಗಪಟ್ಟಣ, ಮಂಡ್ಯ, ಮದ್ದೂರು ತಾಲೂಕಿನ ಹಲವೆಡೆ ಮಳೆಯಾಗಿದೆ.

ಇದನ್ನೂ ಓದಿ: Bitcoin ಕಿಯೋಸ್ಕ್ ಸ್ಥಾಪಿಸಿದ್ದವರಿಗೆ ರಿಲೀಫ್: ಸೈಬರ್ ಪೊಲೀಸರ FIR ರದ್ದುಪಡಿಸಿದ ಹೈಕೋರ್ಟ್

Published On - 7:17 pm, Thu, 18 February 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!