AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಕಾಫಿ‌ ಎಸ್ಟೇಟ್ ಮ್ಯಾನೇಜರ್ ಅನುಮಾನಾಸ್ಪದ ಸಾವು, ಹೆಣ್ಣು ಕೊಟ್ಟ ಮಾವನನ್ನೇ ಹತ್ಯೆಗೈದ ಅಳಿಯ

ಕಳೆದ ಎರಡು ದಿನದಿಂದ ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಕಾಫಿ ಎಸ್ಟೇಟ್​ ಮ್ಯಾನೇಜರ್​​ ಶವವಾಗಿ ಪತ್ತೆಯಾಗಿದ್ದಾರೆ. ಮತ್ತೊಂದೆಡೆ ಮಗಳಿಗೆ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನೆ ಮಾಡಲು ಬಂದಿದ್ದ ವ್ಯಕ್ತಿ ಕೊಲೆಯಾಗಿದ್ದಾನೆ. ಇನ್ನು ಚಳ್ಳಕೆರೆಯ ಬಿಇಓ ಕಚೇರಿ ಬಳಿ ಮರಕ್ಕೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಮೂರು ಪ್ರತ್ಯೇಕ ಘಟನೆಗಳ ವಿವರ ಈ ಕೆಳಗಿನಂತಿದೆ.

ಪ್ರತ್ಯೇಕ ಘಟನೆ: ಕಾಫಿ‌ ಎಸ್ಟೇಟ್ ಮ್ಯಾನೇಜರ್  ಅನುಮಾನಾಸ್ಪದ ಸಾವು, ಹೆಣ್ಣು ಕೊಟ್ಟ ಮಾವನನ್ನೇ ಹತ್ಯೆಗೈದ ಅಳಿಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 17, 2023 | 10:03 AM

Share

ಚಿಕ್ಕಮಗಳೂರು, (ಆಗಸ್ಟ್ 17): ಕಳೆದ ಎರಡು ದಿನದಿಂದ ನಾಪತ್ತೆಯಾಗಿದ್ದ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಖಾನ್ಗುಡ್ಡ ಕಾಫಿ ಎಸ್ಟೇಟ್(coffee estate) ಮ್ಯಾನೇಜರ್ ಶವವಾಗಿ ಪತ್ತೆಯಾಗಿದ್ದಾರೆ. N.R ಪುರ ತಾಲೂಕಿನ ಬಾಳೆಹೊನ್ನೂರಿನ ನಿರ್ಜನ ಪ್ರದೇಶದ ಕೆರೆಯೊಂದರಲ್ಲಿ ಕಾಫಿ‌ ಎಸ್ಟೇಟ್ ಮ್ಯಾನೇಜರ್ ಶವ ಪತ್ತೆಯಾಗಿದೆ. ಕಾಶಿ ಬೊಪ್ಪಯ್ಯ(59) ಎನ್ನುವವರ ಶವ ಕರೆಯಲ್ಲಿ ಪತ್ತೆಯಾಗಿದೆ. ಕೆರೆಯ ಬಳಿ ಕಾಶಿ ಬೊಪ್ಪಯ್ಯ ಚಪ್ಪಲಿ ,ಪರ್ಸ್ ಪತ್ತೆ ಜೀಪ್ ಇದ್ದು, ಇದರ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಕೊಡಗು ಸಮೀಪದ ಟಿ. ಶೆಟ್ಟಿಗೇರಿ ಗ್ರಾಮದವರಾದ ಕಾಶಿ ಬೊಪ್ಪಯ್ಯ. ಕಳೆದ ಮೂರು ವರ್ಷಗಳಿಂದ ಬಾಳೆಹೊನ್ನೂರು ಸಮೀಪದ ಖಾನ್ಗುಡ್ಡ ಕಾಫಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಮೃತಪಟ್ಟಿದ್ದು, ಅಚ್ಚರಿಗೆ ಕಾರಣವಾಗಿದೆ. ಕೊಲೆ ಮಾಡಿ ಕೆರೆಗೆ ಎಸೆದಿದ್ದಾರೆ ಎಂದು ಕಾಶಿ ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದು, ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕೋಲಾರ: ಅಳಿಯನಿಂದ ಮಾವನ ಕೊಲೆ

ಕೋಲಾರ: ಅಳಿಯನೇ ಹೆಣ್ಣು ಕೊಟ್ಟ ಮಾವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರದ ಷಹಿದ್ ನಗರದಲ್ಲಿ ನಡೆದಿದೆ. ಷಹಿದ್ ನಗರದ ಬಾಬು ಷರೀಫ್ ಕೊಲೆಯಾದ ವ್ಯಕ್ತಿ. ಅಳಿಯ ತಬರೇಜ್ ಪಾಷಾ ಹಾಗೂ ಜಬೀನಾ ತಾಜ್ ಸೇರಿಕೊಂಡು ಬಾಬು ಷರೀಫ್​ನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಬಾಬು ಷರೀಫ್ ತನ್ನಮಗಳನ್ನು ತಬರೇಜ್ ಪಾಷಾಗೆ ಕೊಟ್ಟು ಮದುವೆ ಮಾಡಿದ್ದ. ಆದ್ರೆ, ತಬರೇಜ್ ಪಾಷಾ ಹೆಂಡ್ತಿಗೆ ನಿತ್ಯ ಕಿರುಕುಳ ನೀಡುತ್ತಿದ್ದ. ಮಗಳಿಗೆ ಆಗುತ್ತಿರುವ ಕಿರುಕುಳವನ್ನು ನೋಡಲಾಗದೇ ತಂದೆ ಬಾಬು ಷರೀಫ್ ಈ ಬಗ್ಗೆ ಅಳಿಯನಿಗೆ ಪ್ರಶ್ನೆ ಮಾಡಲು ಹೋಗಿದ್ದಾನೆ. ಆ ವೇಳೆ ಅಳಿಯ ತಬರೇಜ್ ಪಾಷಾ ಕೊಲೆ ಮಾಡಿದ್ದಾನೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ವೃದ್ಧೆಗೆ ವಂಚಿಸಿ ಮೂರುವರೆ ಕೋಟಿ ರೂ. ದೋಚಿದ್ದ ಖದೀಮರ ಗ್ಯಾಂಗ್ ಅರೆಸ್ಟ್

ಚಳ್ಳಕೆರೆ ಬಿಇಓ ಕಚೇರಿ ಬಳಿ ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಬಿಇಒ ಕಚೇರಿ ಆವರಣದಲ್ಲಿ ವ್ಯಕ್ತಿಯೋರ್ವ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರವಿಕುಮಾರ್(40) ಆತ್ಮಹತ್ಯೆ ಮಾಡಿಕೊಂಡ ಕೂಲಿ ಕಾರ್ಮಿಕ. ಮೃತ ರವಿಕುಮಾರ್ ದಾವಣಗೆರೆ ಜಿಲ್ಲೆ‌ಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದ ನಿವಾಸಿಯಾಗಿದ್ದು, ಚಳ್ಳಕೆರೆ ಪಟ್ಟಣದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ. ಆದ್ರೆ, ಅದೇನಾಗಿತ್ತೋ ಏನೋ ರವಿಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ರವಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:02 am, Thu, 17 August 23

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ