AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರನ್ನು ಗಡ ಗಡ ನಡುಗಿಸುತ್ತಿರುವ ಚಳಿ: ಮುಂದಿನ ವಾರ ಇನ್ನಷ್ಟು ಏರಿಕೆ!

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬೆಳಿಗ್ಗೆ, ಸಂಜೆಯಾದ್ರೆ ಸಾಕು ಚುಮು ಚುಮು ಚಳಿ ಹೆಚ್ಚಾಗಿದ್ದು. ಎಲ್ಲಿ ನೋಡಿದ್ರು ಸ್ವೆಟರ್ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ‌‌‌. ಹಾಗಾದರೆ, ಈ ಬಾರಿಯ ಚಳಿಗಾಲ ಹೇಗಿರುತ್ತೆ ಅಂತೀರಾ ಈ ಸ್ಟೋರಿ ನೋಡಿ.

ಬೆಂಗಳೂರಿಗರನ್ನು  ಗಡ ಗಡ ನಡುಗಿಸುತ್ತಿರುವ ಚಳಿ: ಮುಂದಿನ ವಾರ ಇನ್ನಷ್ಟು ಏರಿಕೆ!
ಪ್ರಾತಿನಿಧಿಕ ಚಿತ್ರ
Vinayak Hanamant Gurav
Vinayak Hanamant Gurav| Edited By: |

Updated on: Nov 19, 2024 | 8:36 PM

Share

ಬೆಂಗಳೂರು, (ನವೆಂಬರ್ 19): ಸಿಲಿಕಾನ್ ಸಿಟಿಯಲ್ಲಿ ನಾಲ್ಕೈದು ದಿನಗಳಿಂದ ವಿಪರೀತ ಚಳಿಯ ಅನುಭವ ಆಗುತ್ತಿದ್ದು, ಇಡೀ ದೇಹ ಗಡ ಗಡ ನಡುಗುವಂತಹ ಸ್ಥಿತಿ ಬಂದಿದೆ. ಊಟಿಯ ರೀತಿಯಲ್ಲಿ ಬೆಂಗಳೂರು ಬದಲಾಗ್ತಿದೆ. ಸಾಮಾನ್ಯವಾಗಿ ನವೆಂಬರ್ ಕೊನೆವಾರ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಚಳಿಗಾಲ ಶುರುವಾಗಿ ಶಿವರಾತ್ರಿ ಅಂದ್ರೆ ಫೆಬ್ರವರಿವರೆಗೂ ಚಳಿಯ ಅನುಭವವಿರುತ್ತದೆ. ಆದರೆ ಈ ಬಾರಿ ಸತತವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ಹವಾಮಾನ ಪರಿಸ್ಥಿತಿ ಬದಲಾಗಿದ್ದು, ಈ ಬಾರಿ ಅಧಿಕ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ ಈ ಪರಿಸ್ಥಿತಿಗೆ ಮುಖ್ಯ ಕಾರಣ ಫೆಸಿಫಿಕ್ ಮಹಾಸಾಗರದಲ್ಲಿ ಮೇಲ್ಮೈ ಉಷ್ಣಾಂಶವು ಕಡಿಮೆ ಇರಲಿದ್ದು, ಇದಕ್ಕೆ ಲಾ-ನಿನ್ ಪರಿಸ್ಥಿತಿ ಎಂದು ಕರೆಯುತ್ತಾರೆ. ಈ ಲಾ-ನಿನ್ ಪರಿಸ್ಥಿತಿಯಿಂದ ಚಳಿಗಾಲವು ಮಾರ್ಚ್ ವರೆಗೂ ಮುಂದುವರೆಯುತ್ತದೆ. ಜೊತೆಗೆ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ 8ರಿಂದ 10ಡಿಗ್ರಿ ಸೆಲ್ಸಿಯಸ್ ಕನಿಷ್ಟ ಉಷ್ಣಾಂಶ ಹಾಗೂ ಬೆಂಗಳೂರಲ್ಲಿ 12ರಿಂದ 14ಡಿಗ್ರಿ ಸೆಲ್ಸಿಯಸ್ ಕನಿಷ್ಟ ಉಷ್ಣಾಂಶ ಇರಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ಇನ್ನೂ ಚಳಿಗಾಲ ಆರಂಭಕ್ಕೂ ಮುನ್ನವೇ ಚಳಿ ಹೆಚ್ಚಾಗಿದ್ದು, ವಾತಾವರಣ ಬದಲಾವಣೆಯಿಂದ ನಮ್ ಬೆಂಗಳೂರು ಮಂದಿ ಈಗಾಗಲೇ ಸ್ವೆಟರ್, ಸ್ಕಾರ್ಫ್, ಮಪ್ಲರ್, ಜರ್ಕಿನ್ ಹಾಗೂ ದೊಡ್ಡ ದೊಡ್ಡ ಕಂಬಳಿಯ ಮೊರೆ ಹೋಗಿದ್ದಾರೆ. ಅಷ್ಟೇ ಅಲ್ಲದೇ ಮಾರ್ಕೆಟ್‌ಗೆ ಸ್ವೇಟರ್ ಗಳು ಲಗ್ಗೆ ಇಟ್ಟಿವೆ. ಈ ಬಾರಿ ಚಳಿಗಾಲದಲ್ಲಿ ನಸುಕಿನ ಜಾವ 4 ಗಂಟೆಯಿಂದ ಬೆಳಗ್ಗೆ 8ಗಂಟೆಯವರೆಗೂ ಶೀತದ ವಾತವರಣ ಇರುತ್ತಿರುವುದಿರಿಂದ ಶೀತ -ಜ್ವರ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಉಸಿರಾಟ, ಎಲುಬು ಕೀಲು ನೋವು ಇರುವವರು ಆದಷ್ಟು ಬೆಚ್ಚಗೆ ಇರುವಂತೆ ಮತ್ತು ಚಳಿಗಾಲ ಮುಗಿಯೋ ವರೆಗೆ ಉಗುರು ಬೆಚ್ಚಗಿನ ನೀರು ಬಿಸಿ ಆಹಾರ ಸೇವಿಸುವಂತೆ ಹವಾಮಾನ ಇಲಾಖೆ ತಜ್ಞರು ಸೂಚನೆ ನೀಡಿದ್ದಾರೆ.

ಒಟ್ಟಿನಲ್ಲಿ ಈ ಬಾರಿ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಬಿಸಿಲು, ಮಳೆಗಾಲದಲ್ಲಿ ಹೆಚ್ಚಾಗಿ ಮಳೆ ಹಾಗೂ ಇದೀಗ ಚಳಿಗಾಲ ಆರಂಭಕ್ಕೂ ಮುನ್ನ ಚಳಿ ಶುರುವಾಗಿದ್ದು, ಜನರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸೋದು ಸೂಕ್ತ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ