AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರನ್ನು ಗಡ ಗಡ ನಡುಗಿಸುತ್ತಿರುವ ಚಳಿ: ಮುಂದಿನ ವಾರ ಇನ್ನಷ್ಟು ಏರಿಕೆ!

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬೆಳಿಗ್ಗೆ, ಸಂಜೆಯಾದ್ರೆ ಸಾಕು ಚುಮು ಚುಮು ಚಳಿ ಹೆಚ್ಚಾಗಿದ್ದು. ಎಲ್ಲಿ ನೋಡಿದ್ರು ಸ್ವೆಟರ್ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ‌‌‌. ಹಾಗಾದರೆ, ಈ ಬಾರಿಯ ಚಳಿಗಾಲ ಹೇಗಿರುತ್ತೆ ಅಂತೀರಾ ಈ ಸ್ಟೋರಿ ನೋಡಿ.

ಬೆಂಗಳೂರಿಗರನ್ನು  ಗಡ ಗಡ ನಡುಗಿಸುತ್ತಿರುವ ಚಳಿ: ಮುಂದಿನ ವಾರ ಇನ್ನಷ್ಟು ಏರಿಕೆ!
ಪ್ರಾತಿನಿಧಿಕ ಚಿತ್ರ
Vinayak Hanamant Gurav
| Edited By: |

Updated on: Nov 19, 2024 | 8:36 PM

Share

ಬೆಂಗಳೂರು, (ನವೆಂಬರ್ 19): ಸಿಲಿಕಾನ್ ಸಿಟಿಯಲ್ಲಿ ನಾಲ್ಕೈದು ದಿನಗಳಿಂದ ವಿಪರೀತ ಚಳಿಯ ಅನುಭವ ಆಗುತ್ತಿದ್ದು, ಇಡೀ ದೇಹ ಗಡ ಗಡ ನಡುಗುವಂತಹ ಸ್ಥಿತಿ ಬಂದಿದೆ. ಊಟಿಯ ರೀತಿಯಲ್ಲಿ ಬೆಂಗಳೂರು ಬದಲಾಗ್ತಿದೆ. ಸಾಮಾನ್ಯವಾಗಿ ನವೆಂಬರ್ ಕೊನೆವಾರ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಚಳಿಗಾಲ ಶುರುವಾಗಿ ಶಿವರಾತ್ರಿ ಅಂದ್ರೆ ಫೆಬ್ರವರಿವರೆಗೂ ಚಳಿಯ ಅನುಭವವಿರುತ್ತದೆ. ಆದರೆ ಈ ಬಾರಿ ಸತತವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ಹವಾಮಾನ ಪರಿಸ್ಥಿತಿ ಬದಲಾಗಿದ್ದು, ಈ ಬಾರಿ ಅಧಿಕ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ ಈ ಪರಿಸ್ಥಿತಿಗೆ ಮುಖ್ಯ ಕಾರಣ ಫೆಸಿಫಿಕ್ ಮಹಾಸಾಗರದಲ್ಲಿ ಮೇಲ್ಮೈ ಉಷ್ಣಾಂಶವು ಕಡಿಮೆ ಇರಲಿದ್ದು, ಇದಕ್ಕೆ ಲಾ-ನಿನ್ ಪರಿಸ್ಥಿತಿ ಎಂದು ಕರೆಯುತ್ತಾರೆ. ಈ ಲಾ-ನಿನ್ ಪರಿಸ್ಥಿತಿಯಿಂದ ಚಳಿಗಾಲವು ಮಾರ್ಚ್ ವರೆಗೂ ಮುಂದುವರೆಯುತ್ತದೆ. ಜೊತೆಗೆ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ 8ರಿಂದ 10ಡಿಗ್ರಿ ಸೆಲ್ಸಿಯಸ್ ಕನಿಷ್ಟ ಉಷ್ಣಾಂಶ ಹಾಗೂ ಬೆಂಗಳೂರಲ್ಲಿ 12ರಿಂದ 14ಡಿಗ್ರಿ ಸೆಲ್ಸಿಯಸ್ ಕನಿಷ್ಟ ಉಷ್ಣಾಂಶ ಇರಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ಇನ್ನೂ ಚಳಿಗಾಲ ಆರಂಭಕ್ಕೂ ಮುನ್ನವೇ ಚಳಿ ಹೆಚ್ಚಾಗಿದ್ದು, ವಾತಾವರಣ ಬದಲಾವಣೆಯಿಂದ ನಮ್ ಬೆಂಗಳೂರು ಮಂದಿ ಈಗಾಗಲೇ ಸ್ವೆಟರ್, ಸ್ಕಾರ್ಫ್, ಮಪ್ಲರ್, ಜರ್ಕಿನ್ ಹಾಗೂ ದೊಡ್ಡ ದೊಡ್ಡ ಕಂಬಳಿಯ ಮೊರೆ ಹೋಗಿದ್ದಾರೆ. ಅಷ್ಟೇ ಅಲ್ಲದೇ ಮಾರ್ಕೆಟ್‌ಗೆ ಸ್ವೇಟರ್ ಗಳು ಲಗ್ಗೆ ಇಟ್ಟಿವೆ. ಈ ಬಾರಿ ಚಳಿಗಾಲದಲ್ಲಿ ನಸುಕಿನ ಜಾವ 4 ಗಂಟೆಯಿಂದ ಬೆಳಗ್ಗೆ 8ಗಂಟೆಯವರೆಗೂ ಶೀತದ ವಾತವರಣ ಇರುತ್ತಿರುವುದಿರಿಂದ ಶೀತ -ಜ್ವರ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಉಸಿರಾಟ, ಎಲುಬು ಕೀಲು ನೋವು ಇರುವವರು ಆದಷ್ಟು ಬೆಚ್ಚಗೆ ಇರುವಂತೆ ಮತ್ತು ಚಳಿಗಾಲ ಮುಗಿಯೋ ವರೆಗೆ ಉಗುರು ಬೆಚ್ಚಗಿನ ನೀರು ಬಿಸಿ ಆಹಾರ ಸೇವಿಸುವಂತೆ ಹವಾಮಾನ ಇಲಾಖೆ ತಜ್ಞರು ಸೂಚನೆ ನೀಡಿದ್ದಾರೆ.

ಒಟ್ಟಿನಲ್ಲಿ ಈ ಬಾರಿ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಬಿಸಿಲು, ಮಳೆಗಾಲದಲ್ಲಿ ಹೆಚ್ಚಾಗಿ ಮಳೆ ಹಾಗೂ ಇದೀಗ ಚಳಿಗಾಲ ಆರಂಭಕ್ಕೂ ಮುನ್ನ ಚಳಿ ಶುರುವಾಗಿದ್ದು, ಜನರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸೋದು ಸೂಕ್ತ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ