AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಬಿಟ್ಟುಕೊಟ್ರೂ SIM ಬಿಡೆನು: ಖಾಕಿಗಳ ಕಿತ್ತಾಟದಲ್ಲಿ ಜನರ ಕಷ್ಟ ಕೇಳೋರು ಯಾರು?

ಅಧಿಕಾರ ಬಿಟ್ಟುಕೊಟ್ರೂ ಸಿದ್ದರಾಜು ತಮ್ಮ ಅಧಿಕೃತ ಮೊಬೈಲ್​ ಸಿಮ್ ಕಾರ್ಡ್​ನ ಹಸ್ತಾಂತರಿಸಿಲ್ಲ ಎಂದು ಹೇಳಲಾಗಿದೆ. ಜೊತೆಗೆ, ಕಳೆದ 2 ತಿಂಗಳಿಂದ ಆ ನಂಬರ್ ಸ್ವಿಚ್ ಆಫ್​ ಕೂಡ ಆಗಿದೆಯಂತೆ.

ಅಧಿಕಾರ ಬಿಟ್ಟುಕೊಟ್ರೂ SIM ಬಿಡೆನು: ಖಾಕಿಗಳ ಕಿತ್ತಾಟದಲ್ಲಿ ಜನರ ಕಷ್ಟ ಕೇಳೋರು ಯಾರು?
ದೇವನಹಳ್ಳಿ ಪೊಲೀಸ್​ ಠಾಣೆ
KUSHAL V
| Edited By: |

Updated on: Nov 30, 2020 | 11:11 AM

Share

ದೇವನಹಳ್ಳಿ: ಇಬ್ಬರು ಖಾಕಿ ಅಧಿಕಾರಿಗಳು ಶೀತಲ ಸಮರದಿಂದ ಸಾರ್ವಜನಿಕರು ಕಷ್ಟ ಅನುಭವಿಸುತ್ತಿರುವ ಘಟನೆ ದೇವನಹಳ್ಳಿ ಪಟ್ಟಣ ಪೊಲೀಸ್​ ಠಾಣೆಯಲ್ಲಿ ಬೆಳಕಿಗೆ ಬಂದಿದೆ.

ಹೌದು, ಕಳೆದ ಒಂದೂವರೆ ವರ್ಷದಿಂದ ದೇವನಹಳ್ಳಿ ಪೊಲೀಸ್​ ಠಾಣೆಯಲ್ಲಿ ಇನ್​ಸ್ಪೆಕ್ಟರ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದರಾಜುರನ್ನು ಕಳೆದ ಎರಡು ತಿಂಗಳ ಹಿಂದೆ ಕೆ.ಜಿ.ಹಳ್ಳಿ ಗಲಾಟೆ ಬಂದೋಬಸ್​ಗೆಂದು ನಿಯೋಜಿಸಲಾಗಿತ್ತು. ಜೊತೆಗೆ, ದೇವನಹಳ್ಳಿ ಠಾಣೆಗೆ ಪ್ರಭಾರ ಇನ್​ಸ್ಪೆಕ್ಟರ್​ ಆಗಿ ಮೊಹಮ್ಮದ್ ರಫೀಕ್​ರನ್ನ ಹಿರಿಯ ಅಧಿಕಾರಿಗಳು ನೇಮಕ ಮಾಡಿದ್ದರು.

ಆದರೆ, ಅಧಿಕಾರ ಬಿಟ್ಟುಕೊಟ್ರೂ ಸಿದ್ದರಾಜು ತಮ್ಮ ಅಧಿಕೃತ ಮೊಬೈಲ್​ ಸಿಮ್ ಕಾರ್ಡ್​ನ ಹಸ್ತಾಂತರಿಸಿಲ್ಲ ಎಂದು ಹೇಳಲಾಗಿದೆ. ಜೊತೆಗೆ, ಕಳೆದ 2 ತಿಂಗಳಿಂದ ಆ ನಂಬರ್ ಸ್ವಿಚ್ ಆಫ್​ ಕೂಡ ಆಗಿದೆಯಂತೆ. ಇತ್ತ, ಸಿಮ್ ಬಗ್ಗೆ ಕೇಳಿದ್ರೆ ನಾನು ಆವತ್ತೇ ಮೊಹಮ್ಮದ್ ರಫೀಕ್​ಗೆ ಕೊಟ್ಟಿದ್ದೀ‌ನಿ ಎಂದು ಇನ್​​ಸ್ಪೆಕ್ಟರ್ ಸಿದ್ದರಾಜು ಹೇಳುತ್ತಿದ್ದಾರೆ. ಆದ್ರೆ ನನಗೆ ಸಿಮ್ ಕೊಟ್ಟೇ ಇಲ್ಲ.. ಅವರ‌ ಬಳಿಯೇಯಿದೆ ಅಂತಾ ಇನ್​ಸ್ಪೆಕ್ಟರ್​ ರಫೀಕ್​ ವಾದ.

ಈ ನಡುವೆ, ಜನ ತಮ್ಮ ಸಂಕಷ್ಟ ಹೇಳಿಕೊಳ್ಳಲು ಠಾಣೆಯ ಅಧಿಕೃತ ಮೊಬೈಲ್​ ನಂಬರ್​ಗೆ ಕರೆ ಮಾಡಿದ್ರೆ ನೋ ರೆಸ್ಪಾನ್ಸ್. ಹಾಗಾಗಿ, ನಮ್ಮ ಗೋಳು ಕೇಳೋರು ಯಾರು ಎಂದು ಸ್ಥಳೀಯರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಇಬ್ಬರು ಅಧಿಕಾರಿಗಳ ಶೀತಲ ಸಮರದ ನಡುವೆ ಸಿಲುಕಿ ನಾವು ಕಷ್ಟ ಅನುಭವಿಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಒಂದೇ ಸಬ್​ ರಿಜಿಸ್ಟ್ರಾರ್ ಕುರ್ಚಿಗಾಗಿ.. ಒಂದೇ ರೂಂನಲ್ಲಿ 2 ಚೇರ್​ ಹಾಕಿ ಕುಳಿತ ಅಧಿಕಾರಿಗಳು!

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ