AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಬಿಟ್ಟುಕೊಟ್ರೂ SIM ಬಿಡೆನು: ಖಾಕಿಗಳ ಕಿತ್ತಾಟದಲ್ಲಿ ಜನರ ಕಷ್ಟ ಕೇಳೋರು ಯಾರು?

ಅಧಿಕಾರ ಬಿಟ್ಟುಕೊಟ್ರೂ ಸಿದ್ದರಾಜು ತಮ್ಮ ಅಧಿಕೃತ ಮೊಬೈಲ್​ ಸಿಮ್ ಕಾರ್ಡ್​ನ ಹಸ್ತಾಂತರಿಸಿಲ್ಲ ಎಂದು ಹೇಳಲಾಗಿದೆ. ಜೊತೆಗೆ, ಕಳೆದ 2 ತಿಂಗಳಿಂದ ಆ ನಂಬರ್ ಸ್ವಿಚ್ ಆಫ್​ ಕೂಡ ಆಗಿದೆಯಂತೆ.

ಅಧಿಕಾರ ಬಿಟ್ಟುಕೊಟ್ರೂ SIM ಬಿಡೆನು: ಖಾಕಿಗಳ ಕಿತ್ತಾಟದಲ್ಲಿ ಜನರ ಕಷ್ಟ ಕೇಳೋರು ಯಾರು?
ದೇವನಹಳ್ಳಿ ಪೊಲೀಸ್​ ಠಾಣೆ
KUSHAL V
| Edited By: ಸಾಧು ಶ್ರೀನಾಥ್​|

Updated on: Nov 30, 2020 | 11:11 AM

Share

ದೇವನಹಳ್ಳಿ: ಇಬ್ಬರು ಖಾಕಿ ಅಧಿಕಾರಿಗಳು ಶೀತಲ ಸಮರದಿಂದ ಸಾರ್ವಜನಿಕರು ಕಷ್ಟ ಅನುಭವಿಸುತ್ತಿರುವ ಘಟನೆ ದೇವನಹಳ್ಳಿ ಪಟ್ಟಣ ಪೊಲೀಸ್​ ಠಾಣೆಯಲ್ಲಿ ಬೆಳಕಿಗೆ ಬಂದಿದೆ.

ಹೌದು, ಕಳೆದ ಒಂದೂವರೆ ವರ್ಷದಿಂದ ದೇವನಹಳ್ಳಿ ಪೊಲೀಸ್​ ಠಾಣೆಯಲ್ಲಿ ಇನ್​ಸ್ಪೆಕ್ಟರ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದರಾಜುರನ್ನು ಕಳೆದ ಎರಡು ತಿಂಗಳ ಹಿಂದೆ ಕೆ.ಜಿ.ಹಳ್ಳಿ ಗಲಾಟೆ ಬಂದೋಬಸ್​ಗೆಂದು ನಿಯೋಜಿಸಲಾಗಿತ್ತು. ಜೊತೆಗೆ, ದೇವನಹಳ್ಳಿ ಠಾಣೆಗೆ ಪ್ರಭಾರ ಇನ್​ಸ್ಪೆಕ್ಟರ್​ ಆಗಿ ಮೊಹಮ್ಮದ್ ರಫೀಕ್​ರನ್ನ ಹಿರಿಯ ಅಧಿಕಾರಿಗಳು ನೇಮಕ ಮಾಡಿದ್ದರು.

ಆದರೆ, ಅಧಿಕಾರ ಬಿಟ್ಟುಕೊಟ್ರೂ ಸಿದ್ದರಾಜು ತಮ್ಮ ಅಧಿಕೃತ ಮೊಬೈಲ್​ ಸಿಮ್ ಕಾರ್ಡ್​ನ ಹಸ್ತಾಂತರಿಸಿಲ್ಲ ಎಂದು ಹೇಳಲಾಗಿದೆ. ಜೊತೆಗೆ, ಕಳೆದ 2 ತಿಂಗಳಿಂದ ಆ ನಂಬರ್ ಸ್ವಿಚ್ ಆಫ್​ ಕೂಡ ಆಗಿದೆಯಂತೆ. ಇತ್ತ, ಸಿಮ್ ಬಗ್ಗೆ ಕೇಳಿದ್ರೆ ನಾನು ಆವತ್ತೇ ಮೊಹಮ್ಮದ್ ರಫೀಕ್​ಗೆ ಕೊಟ್ಟಿದ್ದೀ‌ನಿ ಎಂದು ಇನ್​​ಸ್ಪೆಕ್ಟರ್ ಸಿದ್ದರಾಜು ಹೇಳುತ್ತಿದ್ದಾರೆ. ಆದ್ರೆ ನನಗೆ ಸಿಮ್ ಕೊಟ್ಟೇ ಇಲ್ಲ.. ಅವರ‌ ಬಳಿಯೇಯಿದೆ ಅಂತಾ ಇನ್​ಸ್ಪೆಕ್ಟರ್​ ರಫೀಕ್​ ವಾದ.

ಈ ನಡುವೆ, ಜನ ತಮ್ಮ ಸಂಕಷ್ಟ ಹೇಳಿಕೊಳ್ಳಲು ಠಾಣೆಯ ಅಧಿಕೃತ ಮೊಬೈಲ್​ ನಂಬರ್​ಗೆ ಕರೆ ಮಾಡಿದ್ರೆ ನೋ ರೆಸ್ಪಾನ್ಸ್. ಹಾಗಾಗಿ, ನಮ್ಮ ಗೋಳು ಕೇಳೋರು ಯಾರು ಎಂದು ಸ್ಥಳೀಯರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಇಬ್ಬರು ಅಧಿಕಾರಿಗಳ ಶೀತಲ ಸಮರದ ನಡುವೆ ಸಿಲುಕಿ ನಾವು ಕಷ್ಟ ಅನುಭವಿಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಒಂದೇ ಸಬ್​ ರಿಜಿಸ್ಟ್ರಾರ್ ಕುರ್ಚಿಗಾಗಿ.. ಒಂದೇ ರೂಂನಲ್ಲಿ 2 ಚೇರ್​ ಹಾಕಿ ಕುಳಿತ ಅಧಿಕಾರಿಗಳು!

Follow Us
KUSHAL V
KUSHAL V
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ