AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್ ಪೂರೈಕೆ ವಿಚಾರ: ಮೈಸೂರು, ಚಾಮರಾಜನಗರ ಜಿಲ್ಲಾಡಳಿತಗಳ ಮಧ್ಯೆ ಕೋಲ್ಡ್ ವಾರ್!

ಆಕ್ಸಿಜನ್ ಪೂರೈಕೆಯಾಗಿಲ್ಲ ಎಂದಿರುವ ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್.ರವಿ ಪತ್ರಿಕಾಗೋಷ್ಠಿಯಲ್ಲಿ ಆಕ್ಸಿಜನ್ ಸಮಸ್ಯೆ ಇತ್ತು ಎಂದು ಹೇಳುತ್ತಿದ್ದಾರೆ. ಜೊತೆಗೆ ಭಾನುವಾರ ರಾತ್ರಿ 3 ಗಂಟೆಗೆ ಆಕ್ಸಿಜನ್ ಪೂರೈಕೆ ಮಾಡಿದ್ದಾರೆ. 30 ಸಿಲಿಂಡರ್ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಿದ್ದಾರೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಹೇಳಿದರು.

ಆಕ್ಸಿಜನ್ ಪೂರೈಕೆ ವಿಚಾರ: ಮೈಸೂರು, ಚಾಮರಾಜನಗರ ಜಿಲ್ಲಾಡಳಿತಗಳ ಮಧ್ಯೆ ಕೋಲ್ಡ್ ವಾರ್!
ರೋಹಿಣಿ ಸಿಂಧೂರಿ
sandhya thejappa
|

Updated on: May 04, 2021 | 10:09 AM

Share

ಚಾಮರಾಜನಗರ: ನಿನ್ನೆ (ಮೇ 3) ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಘಟನೆ ಹಲವು ಚರ್ಚೆಗೆ ಗ್ರಾಸವಾಗಿದೆ. 24 ಗಂಟೆಯಲ್ಲಿ 24 ಜನ ಸೋಂಕಿತರು ಆಕ್ಸಿಜನ್ ಸಿಗದೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಜೊತೆಗೆ ಜಿಲ್ಲಾಡಳಿತ ಸರಿಯಾದ ಸಾವಿನ ಸಂಖ್ಯೆಯನ್ನು ಕೊಡಲು ಹಿಂದೇಟು ಹಾಕುತ್ತಿದೆ ಎಂದು ಆರೋಪಿಸುತ್ತಿದ್ದಾರೆ. ಈ ನಡುವೆ ಆಕ್ಸಿಜನ್ ಪೂರೈಕೆ ವಿಚಾರದಲ್ಲಿ ಮೈಸೂರು, ಚಾಮರಾಜನಗರ ಜಿಲ್ಲಾಡಳಿತಗಳ ಮಧ್ಯೆ ಕೋಲ್ಡ್ ವಾರ್ ನಡೆಯುತ್ತಿದ್ದು, ಮೈಸೂರು ಜಿಲ್ಲಾಡಳಿತ  ಪೂರೈಕೆ ಮಾಡಿದ್ದೇವೆ ಎಂದು ಹೇಳುತ್ತಿರುವ 200 ಆಕ್ಸಿಜನ್ ಸಿಲಿಂಡರ್​ ಎಲ್ಲಿಗೆ ಹೋಗಿವೆ ಎಂಬ ಅನುಮಾನ ವ್ಯಕ್ತವಾಗಿದೆ.

ಭಾನುವಾರ ಜಿಲ್ಲೆಗೆ ಆಕ್ಸಿಜನ್ ಪೂರೈಕೆಯಾಗಿಲ್ಲ ಎಂದಿರುವ ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್.ರವಿ ಪತ್ರಿಕಾಗೋಷ್ಠಿಯಲ್ಲಿ ಆಕ್ಸಿಜನ್ ಸಮಸ್ಯೆ ಇತ್ತು ಎಂದು ಹೇಳುತ್ತಿದ್ದಾರೆ. ಜೊತೆಗೆ ಭಾನುವಾರ ರಾತ್ರಿ 3 ಗಂಟೆಗೆ ಆಕ್ಸಿಜನ್ ಪೂರೈಕೆ ಮಾಡಿದ್ದಾರೆ. 30 ಸಿಲಿಂಡರ್ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಿದ್ದಾರೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಹೇಳಿದರು. ಆದರೆ ಮೈಸೂರು ಜಿಲ್ಲಾಡಳಿತ ಭಾನುವಾರ 12 ಗಂಟೆಗೆ 250 ಸಿಲಿಂಡರ್ ಕೊಟ್ಟಿರುವುದಾಗಿ ಹೇಳಿಕೆ ನೀಡಿದೆ.

ನಿನ್ನೆ ಸಂಜೆ ವಾರ್ತಾ ಇಲಾಖೆಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಭಾನುವಾರ 12 ಗಂಟೆಗೆ 250 ಸಿಲಿಂಡರ್ ಕೊಟ್ಟಿರುವುದಾಗಿ ಹೇಳುತ್ತಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಹೇಳಿಕೆಯಿಂದ ಅನುಮಾನ ವ್ಯಕ್ತವಾಗಿದ್ದು, ಮೈಸೂರು ಜಿಲ್ಲಾಧಿಕಾರಿ ಕಳುಹಿಸಿ ಕೊಟ್ಟ ಸಿಲಿಂಡರ್ ಎಲ್ಲಿಗೆ ಹೋದವು? ಅಥವಾ ಮೈಸೂರು ಜಿಲ್ಲಾಧಿಕಾರಿ ತಪ್ಪನ್ನ ಮುಚ್ಚಿ ಹಾಕಲು ಗೂಬೆ ಕೂರಿಸುತ್ತಿದ್ದಾರೆಯೇ? ಎಂಬ ಪ್ರಶ್ನೆಗಳು ಮೂಡಿವೆ. ಈ ಮಧ್ಯೆ ಏಪ್ರಿಲ್ 24 ರಿಂದ ಪ್ರತಿನಿತ್ಯ 200 ಸಿಲಿಂಡರ್ ಕೊಡುತ್ತಿರುವುದಾಗಿ ಮೈಸೂರಿನ ಸರದನ್ ಮತ್ತು ಪದಕಿ ಸಿಲಿಂಡರ್ ಏಜೆನ್ಸಿ ಟಿವಿ9 ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ

ಕೊರೊನಾ ಕಾಟ: ಇನ್ನು ಉಳಿದ ಐಪಿಎಲ್​ ಪಂದ್ಯಗಳೆಲ್ಲವೂ ಸುರಕ್ಷಿತವಾಗಿ ಮುಂಬೈನಲ್ಲೇ? ಏನಿದು ಬಿಸಿಸಿಐ ಚಿಂತನೆ, ಇಲ್ಲಿದೆ ವಿವರ

ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಯಡವಟ್ಟು; ಮಾಯಪ್ಪನ ಶವವನ್ನು ಪಾಯಪ್ಪನ ಕುಂಟುಂಬಸ್ಥರಿಗೆ ಹಸ್ತಾಂತರ

(Cold War is taking place between Mysore and Chamarajanagar District Administration)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?