AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗೋರಿಪಾಳ್ಯ ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ

ಬೆಂಗಳೂರಿನ ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ್ದ ಹೈಕೋರ್ಟ್​ ನ್ಯಾಯಾಧೀಶ ವಿ ಶ್ರೀಶಾನಂದ ಅವರನ್ನು ಸುಪ್ರಿಂಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ. ಹೈಕೋರ್ಟ್​ ನ್ಯಾಯಾಧೀಶ ವಿ ಶ್ರೀಶಾನಂದ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು.

ಬೆಂಗಳೂರು ಗೋರಿಪಾಳ್ಯ ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಸುಪ್ರೀಂಕೋರ್ಟ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Sep 25, 2024 | 1:02 PM

Share

ಬೆಂಗಳೂರು, ಸೆಪ್ಟೆಂಬರ್​ 25: ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ್ದ ಹೈಕೋರ್ಟ್ (High Court)​ ನ್ಯಾಯಾಧೀಶ ವಿ ಶ್ರೀಶಾನಂದ (V Shrishand) ಅವರನ್ನು ಸುಪ್ರಿಂಕೋರ್ಟ್ (Supreme Court)​ ತರಾಟೆಗೆ ತೆಗೆದುಕೊಂಡಿದೆ. “ನೀವು ಭಾರತದ ಯಾವುದೇ ಭಾಗವನ್ನು “ಪಾಕಿಸ್ತಾನ” ಅಂತ ಕರೆಯುವಂತಿಲ್ಲ. ಇದು ದೇಶದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ. ನಿಮ್ಮ ಹೇಳಿಕೆಯನ್ನು ಸಮ್ಮತಿಸುವುದಿಲ್ಲ. ನಿಮ್ಮ ಕ್ಷಮೆಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ” ಎಂದು ಸುಪ್ರೀಂಕೋರ್ಟ್​ ಹೇಳಿದೆ.

ಹೈಕೋರ್ಟ್​ ನ್ಯಾಯಾಧೀಶರು ಹೇಳಿದ್ದೇನು?

ಪ್ರಕರಣದ ವಿಚಾರಣೆಯೊಂದರ ವೇಳೆ, ‘‘ಮೈಸೂರು ರಸ್ತೆ ಮೇಲ್ಸೇತುವೆ ಬಳಿ ಹೋಗಿ ನೋಡಿ, ಪ್ರತಿ ಆಟೊ ರಿಕ್ಷಾದಲ್ಲಿ 10 ಮಂದಿ ಇರುತ್ತಾರೆ. ಅಲ್ಲಿ ಯಾವುದೂ ಅನ್ವಯವಾಗುವುದಿಲ್ಲ. ಯಾಕೆಂದರೆ ಕೆಆರ್​​ ಮಾರುಕಟ್ಟೆ ಮತ್ತು ಗೋರಿಪಾಳ್ಯವರೆಗೆ ಮೈಸೂರು ರೋಡ್ ಫ್ಲೈಓವರ್ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ. ನೀವು ಎಂಥವನೇ ಸ್ಟ್ರಿಕ್ಟ್ ಅಧಿಕಾರಿಗಳನ್ನು ಅಲ್ಲಿಗೆ ಹಾಕಿ, ಹಿಡಿದರೆ ನೋಡ್ತೀನಿ’’ ಎಂದು ನ್ಯಾಯಾಧೀಶರು ಹೇಳಿದ್ದರು.

ಇದನ್ನೂ ಓದಿ:  ‘ಸಂಜೆ 250 ಕೊಡು, ಇಲ್ಲಾಂದ್ರೆ ಶೆಡ್ಡಿಗ್ ಬಾ’, ಆಟೋ ಚಾಲಕರ ಸಮಸ್ಯೆಯನ್ನು ಎಳೆಎಳೆಯಾಗಿ ವಿವರಿಸಿದ ಕರ್ನಾಟಕ ಹೈಕೋರ್ಟ್​

ನ್ಯಾಯಾಧೀಶರು ಹೇಳಿಕೆ ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಇದಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು, ವಿಚಾರಣೆ ನಡೆಸಿ, ಹೈಕೋರ್ಟ್​ ನ್ಯಾಯಾಧೀಶರನ್ನು ತರಾಟೆಗೆ ತೆಗೆದುಕೊಂಡಿತು.

ಸುಪ್ರೀಂಕೋರ್ಟ್​ ಸ್ವಯಂಪ್ರೇರಿತ ಪ್ರಕರಣ ಕೈಗೆತ್ತಿಕೊಳ್ಳುತ್ತಿದ್ದಂತೆ ನ್ಯಾಯಾಧೀಶ ಅವರು ವಿ ಶ್ರೀಶಾನಂದ ಕ್ಷಮೆಯಾಚಿಸಿದರು. ಸುಪ್ರೀಂಕೋರ್ಟ್​ ನ್ಯಾಯಾಧೀಶರ ಕ್ಷಮೆಯನ್ನು ಸ್ವೀಕರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:19 pm, Wed, 25 September 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ