ಮುಂದಿನ ಜನವರಿಯಲ್ಲಿ 45 ಲಕ್ಷ ರೈತರಿಗೆ ಪಹಣಿ ಹಾಗೂ ಆರ್ಟಿಸಿಯನ್ನು ಉಚಿತವಾಗಿ ರೈತರ ಮನೆಗಳಿಗೆ ವಿತರಣೆ ಮಾಡುತ್ತೇವೆ ಎಂದರು.
ಪರಿಹಾರದ ಮೊತ್ತ ಹೆಚ್ಚಿಸಲು ಜಮೀರ್ ಅಹಮದ್ ಆಗ್ರಹ
ಎಪಿಎಲ್ ಕಾರ್ಡ್ದಾರರಿಗೂ ಪರಿಹಾರ ನೀಡಬೇಕು ಎಂದು ಜಮೀರ್ ಅಹಮದ್ ಒತ್ತಾಯಿಸಿದರು. ಕೊರೊನಾದಿಂದ ಬಲಿಯಾದ ಬಿಪಿಎಲ್ ಕಾರ್ಡ್ದಾರರಿಗೆ ಮಾತ್ರ ಪರಿಹಾರ ನೀಡಲಾಗುತ್ತಿದೆ. ಈ ಪರಿಹಾರವನ್ನು ಎಪಿಎಲ್ ಕಾರ್ಡ್ದಾರರಿಗೂ ವಿಸ್ತರಿಸಬೇಕು ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ನನ್ನ (ಚಾಮರಾಜಪೇಟೆ) ಕ್ಷೇತ್ರದಲ್ಲಿ 119 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಈಗ 69 ಕುಟುಂಬಗಳಿಗೆ ಮಾತ್ರ ಪರಿಹಾರ ಹಣ ಸಿಗುತ್ತಿದೆ. ಮೃತಪಟ್ಟ ಎಲ್ಲ ಕುಟುಂಬಗಳಿಗೂ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು. ಬಿಪಿಎಲ್ ಕಾರ್ಡುದಾರರಿಗೆ ಒಂದು ಲಕ್ಷ, ಎಪಿಎಲ್ ಕಾರ್ಡುದಾರರಿಗೆ ಐವತ್ತು ಸಾವಿರ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಎಪಿಎಲ್ ಕಾರ್ಡುದಾರರಿಗೂ ಒಂದು ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಜಮೀರ್ ಅಹ್ಮದ್ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.
ಇದನ್ನೂ ಓದಿ: ಅಮೆರಿಕದಲ್ಲಿ ಒಮಿಕ್ರಾನ್ ಹೆಚ್ಚಳ; ನ್ಯೂಯಾರ್ಕ್ ಆಸ್ಪತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದಾರೆ ಮಕ್ಕಳು
ಇದನ್ನೂ ಓದಿ: ಒಮಿಕ್ರಾನ್, ಕೊರೊನಾ ಭೀತಿ ನಡುವೆ ಮತ್ತೊಂದು ಆತಂಕ; ಕಣ್ಣು ಬಿಡುವ ಮುನ್ನವೇ ಉಸಿರು ಚೆಲ್ಲುತಿವೆ ನವಜಾತ ಶಿಶುಗಳು