AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ವಿದ್ಯಾಕಾಶಿ ಕರಿಯರ್ ಅಕಾಡೆಮಿಯಿಂದ ಪರೀಕ್ಷೆ, ದಾಳಿ ನಡೆಸಿ ಪರೀಕ್ಷೆ ನಿಲ್ಲಿಸಿದ ಪೊಲೀಸರು

ಕೊರೊನಾದ 2ನೇ ಅಲೆಯ ಭೀಕರತೆಯ ನಡುವೆಯೂ ವಿದ್ಯಾಕಾಶಿ ಕರಿಯರ್ ಅಕಾಡೆಮಿ ಸಂಸ್ಥೆ ಬೇಜವಾಬ್ದಾರಿತನದಿಂದ ವರ್ತಿಸಿದೆ. ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಿದೆ. ಱಂಕ್ ಬಂದವರಿಗೆ ಬಹುಮಾನ ನೀಡುವುದಾಗಿ ಪ್ರಚಾರ ಮಾಡಿ ಪರೀಕ್ಷೆ ಆಯೋಜನೆ ಮಾಡಿದೆ. ಇದನ್ನು ತಿಳಿದ ನೂರಾರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಒಟ್ಟುಗೂಡಿದ್ದಾರೆ.

ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ವಿದ್ಯಾಕಾಶಿ ಕರಿಯರ್ ಅಕಾಡೆಮಿಯಿಂದ ಪರೀಕ್ಷೆ, ದಾಳಿ ನಡೆಸಿ ಪರೀಕ್ಷೆ ನಿಲ್ಲಿಸಿದ ಪೊಲೀಸರು
ಧಾರವಾಡದ ವಿದ್ಯಾಕಾಶಿ ಕರಿಯರ್ ಅಕಾಡೆಮಿ
Follow us
ಆಯೇಷಾ ಬಾನು
|

Updated on: Apr 18, 2021 | 2:33 PM

ಧಾರವಾಡ: ಮಾಹಾಮಾರಿ ಕೊರೊನಾ ಜನರನ್ನು ಬೆನ್ನುಬಿಡದೆ ಕಾಡುತ್ತಿದೆ. ನಿರ್ಲಕ್ಷ್ಯವಹಿಸುತ್ತಿರುವವರನ್ನು ಹುಡುಕಿ ಹುಡುಕಿ ದೇಹ ಸೇರುತ್ತಿದೆ. ಹೀಗಾಗಿ ಸರ್ಕಾರ ಸಹ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ತರಗತಿ ಪರೀಕ್ಷೆಗಳನ್ನು ಮುಂದೂಡುತ್ತಿದೆ. ಮುಂದಿನ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಕಾಳಜಿಗಾಗಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಆದ್ರೆ ಸರ್ಕಾರದ ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ಧಾರವಾಡದ ಶ್ರೀನಗರ ವೃತ್ತದ ಬಳಿಯ ವಿದ್ಯಾಕಾಶಿ ಕರಿಯರ್ ಅಕಾಡೆಮಿ ಪರೀಕ್ಷೆ ಆಯೋಜನೆ ಮಾಡಿದೆ. ಱಂಕ್ ಬಂದವರಿಗೆ ಬಹುಮಾನ ನೀಡುವುದಾಗಿ ಪ್ರಚಾರ ಮಾಡಿದೆ. ಹೀಗಾಗಿ ಧಾರವಾಡ ಉಪನಗರ ಠಾಣೆ ಪೊಲೀಸರು ಸಂಸ್ಥೆ ಮೇಲೆ ದಾಳಿ ನಡೆಸಿ ಪರೀಕ್ಷೆ ನಿಲ್ಲಿಸಿದ್ದಾರೆ.

ಕೊರೊನಾದ 2ನೇ ಅಲೆಯ ಭೀಕರತೆಯ ನಡುವೆಯೂ ವಿದ್ಯಾಕಾಶಿ ಕರಿಯರ್ ಅಕಾಡೆಮಿ ಸಂಸ್ಥೆ ಬೇಜವಾಬ್ದಾರಿತನದಿಂದ ವರ್ತಿಸಿದೆ. ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಿದೆ. ಱಂಕ್ ಬಂದವರಿಗೆ ಬಹುಮಾನ ನೀಡುವುದಾಗಿ ಪ್ರಚಾರ ಮಾಡಿ ಪರೀಕ್ಷೆ ಆಯೋಜನೆ ಮಾಡಿದೆ. ಇದನ್ನು ತಿಳಿದ ನೂರಾರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಒಟ್ಟುಗೂಡಿದ್ದಾರೆ. ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಮರೆತು ಸ್ಯಾನಿಟೈಸರ್ ಬಳಸದೇ ಪರೀಕ್ಷೆ ಬರೆಯಲು ಒಳಗಡೆ ನುಗ್ಗಿದ್ದಾರೆ. ಇನ್ನು ಪರೀಕ್ಷೆ ಆಯೋಜಿಸಿದ ಸಂಸ್ಥೆ ಸಹ ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಂಡಿಲ್ಲ. ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದೆ.

competitive exam

ಪರೀಕ್ಷೆ ಬರೆಯಲು ಬಂದಿರುವ ನೂರಾರು ವಿದ್ಯಾರ್ಥಿಗಳು

ಸದ್ಯ ಮಹಾನಗರ‌ ಪಾಲಿಕೆ ಸಿಬ್ಬಂದಿ ಹಾಗೂ ಉಪನಗರ ಠಾಣಾ ಪೊಲೀಸರು ಸಂಸ್ಥೆ ಮೇಲೆ ದಾಳಿ ನಡೆದಿ ಪರೀಕ್ಷೆ ನಿಲ್ಲಿಸಿದ್ದಾರೆ. ಇನ್ನು ಸ್ಪರ್ಧಾತ್ಮಕ ಮಾದರಿ ಪರೀಕ್ಷೆ ನಡೆಸಲಾಗುತ್ತಿದ್ದು ಮೊದಲ ಬಹುಮಾನ ರೂ 75,000/-, ಎರಡನೇ ಬಹುಮಾನ ರೂ 50,000/-, ಮೂರನೇ ಬಹುಮಾನ ರೂ 25,000/- ಎಂದು ಸಂಸ್ಥೆ ಘೋಷಣೆ ಮಾಡಿತ್ತು. ಕೊರೊನಾದಿಂದ ರಾಜ್ಯದಲ್ಲಿ ನೂರಾರು ಜನ ಮೃತಪಡುತ್ತಿದ್ದಾರೆ. ಹಾಗೂ ಕೊರೊನಾ ಸಾವಿರಾರು ಜನರ ದೇಹ ಸೇರುತ್ತಿದೆ. ಸೋಂಕಿಗೆ ಕಡಿವಾಣ ಹಾಕಲು ಸರ್ಕಾರ ಪ್ರಯತ್ನಪಡುತ್ತಿದೆ. ಈ ಮಧ್ಯೆ ಕೆಲ ಸಂಸ್ಥೆಗಳು ವಿದ್ಯಾರ್ಥಿಗಳ ಜೀವದ ಜೊತೆ ಆಟವಾಡುತ್ತಿದೆ.

competitive exam

ಪ್ರಶ್ನೆ ಪತ್ರಿಕೆಗಳು

ಇದನ್ನೂ ಓದಿ:Viral Video: ಬಿಯರ್​ ಬಾಟಲಿ ಮುಚ್ಚಳ ತೆಗೆಯಲು ಸಿಂಪಲ್​ ವಿಧಾನ; ಕಾಲಲ್ಲಿ ಶೂ ಇದ್ದರೆ ಸಾಕು !

ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ