AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ‌ ದಾಖಲೆ ಸೃಷ್ಟಿ ಆರೋಪ, ಇಂಡಿ ಕಾಂಗ್ರೆಸ್ ಶಾಸಕ ಪಾಟೀಲ್ ವಿರುದ್ಧ ದೂರು

ವಿಜಯಪುರ: ನಕಲಿ‌ ದಾಖಲೆ ಸೃಷ್ಟಿ ಆರೋಪಿಸಿ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ವಿರುದ್ಧ ದೂರು ದಾಖಲಾಗಿದೆ. ಇಂಡಿ ಮಾಜಿ ಶಾಸಕ ಬಿಜೆಪಿಯ ಡಾ. ಸಾರ್ವಭೌಮ‌ ಬಗಲಿ ಅವರ ಪುತ್ರ ಸಂಕೇತ ಬಗಲಿ ಎಂಬುವವರು ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಹಾಗೂ ಬೆಂಬಲಿಗರಾದ ಎಂ‌.ಆರ್.ಪಾಟೀಲ್, ಜೆಟ್ಟೆಪ್ಪ ರವಳಿ ವಿರುದ್ಧ ದೂರು ದಾಖಲಿಸಿದ್ದಾರೆ. 10 ತಿಂಗಳ ಹಿಂದೆ ನಡೆದ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮಾಡುವಲ್ಲಿ ಅಕ್ರಮ ದಾಖಲೆ […]

ನಕಲಿ‌ ದಾಖಲೆ ಸೃಷ್ಟಿ ಆರೋಪ, ಇಂಡಿ ಕಾಂಗ್ರೆಸ್ ಶಾಸಕ ಪಾಟೀಲ್ ವಿರುದ್ಧ ದೂರು
ಸಾಧು ಶ್ರೀನಾಥ್​
|

Updated on:Dec 27, 2019 | 12:13 PM

Share

ವಿಜಯಪುರ: ನಕಲಿ‌ ದಾಖಲೆ ಸೃಷ್ಟಿ ಆರೋಪಿಸಿ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ವಿರುದ್ಧ ದೂರು ದಾಖಲಾಗಿದೆ. ಇಂಡಿ ಮಾಜಿ ಶಾಸಕ ಬಿಜೆಪಿಯ ಡಾ. ಸಾರ್ವಭೌಮ‌ ಬಗಲಿ ಅವರ ಪುತ್ರ ಸಂಕೇತ ಬಗಲಿ ಎಂಬುವವರು ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಹಾಗೂ ಬೆಂಬಲಿಗರಾದ ಎಂ‌.ಆರ್.ಪಾಟೀಲ್, ಜೆಟ್ಟೆಪ್ಪ ರವಳಿ ವಿರುದ್ಧ ದೂರು ದಾಖಲಿಸಿದ್ದಾರೆ.

10 ತಿಂಗಳ ಹಿಂದೆ ನಡೆದ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮಾಡುವಲ್ಲಿ ಅಕ್ರಮ ದಾಖಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 2019 ಫೆಬ್ರುವರಿ 24 ಕ್ಕೆ ಚುನಾವಣೆ ನಿಗದಿಯಾಗಿತ್ತು. ನಾಮಪತ್ರ ಸಲ್ಲಿಕೆಯ ಕೊನೆಯ‌ ದಿನವಾಗಿದ್ದ ಫೆಬ್ರುವರಿ 18 ರಂದು ಅವಿರೋಧ ಆಯ್ಕೆ ಘೋಷಿಸಬೇಕಿತ್ತು.

ಆದರೆ ಅದರ ಬದಲಾಗಿ ಫೆಬ್ರುವರಿ 19 ರಂದು ಅವಿರೋಧ ಆಯ್ಕೆ ಘೋಷಣೆ ಆಗಿತ್ತು. ಎದುರಾಳಿ ಗುಂಪಿನ ಸಂಕೇತ ಬಗಲಿ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ವಾಪಸ್ ಪಡೆಯುವಂತೆ ಒತ್ತಡ ಹಾಕಿದ್ದರು. ವಾಪಸ್ ಪಡೆಯದ ಕಾರಣ ಸೂಚಕರ ಸಹಿ ಫೋರ್ಜರಿ ಮಾಡಿದ್ದಾರೆ ಎಂದು ಸಂಕೇತ ಬಗಲಿ ಆರೋಪಿಸಿದ್ದಾರೆ. ನಾಮಪತ್ರ ವಾಪಸ್ ತೆಗೆಯದೆ ಇದ್ದರೂ ಸಹ ಅವರ ಸೂಚಕ ಡಾ. ಸಂತೋಷ ಬಗಲಿ ಹೆಸರಲ್ಲಿ ಫೋರ್ಜರಿ ಸಹಿ‌ ಮಾಡಿ ನಾಮಪತ್ರ ವಾಪಸ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ‌ ಕುರಿತು ಇಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Published On - 11:45 am, Fri, 27 December 19

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ