AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒರಿಜಿನಲ್ ಅಂತ ನಕಲಿ 2nd PU ಪ್ರಶ್ನೆಪತ್ರಿಕೆ ಹರಿಬಿಟ್ಟಿದ್ದ ಕಿಡಿಗೇಡಿಗಳು: ಯೂಟ್ಯೂಬ್ ಚಾನೆಲ್ ವಿರುದ್ಧ ದೂರು

ದ್ವಿತೀಯ ಪಿಯು ಪ್ರಿಪರೇಟರಿ ಪ್ರಶ್ನೆ ಪತ್ರಿಕೆ ನಕಲಿ ಲೀಕ್ ಪ್ರಕರಣದ ತನಿಖೆ ನಡೆಯುತ್ತಿದೆ. ಕಿಡಿಗೇಡಿಗಳು ನಕಲಿ ಪ್ರಶ್ನೆ ಪತ್ರಿಕೆಗಳನ್ನು ಸೃಷ್ಟಿಸಿ, YouTube ಚಾನೆಲ್ ಮೂಲಕ ಹರಿಬಿಟ್ಟು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿದ್ದಾರೆ. ಈ ಕುರಿತು ಪಿಯು ಮಂಡಳಿಯ ಜಂಟಿ ನಿರ್ದೇಶಕರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಒರಿಜಿನಲ್ ಅಂತ ನಕಲಿ 2nd PU ಪ್ರಶ್ನೆಪತ್ರಿಕೆ ಹರಿಬಿಟ್ಟಿದ್ದ ಕಿಡಿಗೇಡಿಗಳು: ಯೂಟ್ಯೂಬ್ ಚಾನೆಲ್ ವಿರುದ್ಧ ದೂರು
ಪ್ರಶ್ನೆಪತ್ರಿಕೆ ಲೀಕ್
Vinay Kashappanavar
| Edited By: |

Updated on:Jan 12, 2026 | 10:32 PM

Share

ಬೆಂಗಳೂರು, ಜನವರಿ 12: ದ್ವೀತಿಯ ಪಿಯುಸಿ (2nd PUC) ವಾರ್ಷಿಕ ಪರೀಕ್ಷೆಗೆ ದಿನಗಣನೆ ಶುರುವಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಪ್ರಿಪರೇಟರಿ ಎಕ್ಸಾಂ ನಡೆಸಲಾಗುತ್ತಿದೆ. ಪರೀಕ್ಷೆ ಆರಂಭ ಬೆನ್ನಲ್ಲೇ ಪ್ರಶ್ನೆ ಪತ್ರಿಕೆ ಲೀಕ್​ ಹಾವಳಿ ಕೂಡ ಜೋರಾಗಿದೆ. ಶಿಕ್ಷಣ ಇಲಾಖೆ ವೈಫಲ್ಯವನ್ನೇ ಖದೀಮರು ಬಂಡವಾಳ ಮಾಡಿಕೊಂಡಿದ್ದಾರೆ. ಕೆಎಸ್​​ಇಎಬಿ (KSEAB) ತಯಾರು ಮಾಡಿದ ಪ್ರಶ್ನೆ ಪತ್ರಿಕೆ ರೀತಿಯೇ ಹೋಲುವಂತೆ ಪ್ರಶ್ನೆಪತ್ರಿಕೆ ತಯಾರಿಸಿದ್ದಾರೆ. ಆ ಮೂಲಕ ನಕಲಿ ಪ್ರಶ್ನೆಪತ್ರಿಕೆ ಹರಿಬಿಟ್ಟು ಇದೇ ಒರಿಜಿನಲ್ ಅಂತ ಬಿಂಬಿಸಿದ್ದಾರೆ. ಸದ್ಯ ಈ ಬಗ್ಗೆ ಬೆಂಗಳೂರು ನಾರ್ತ್ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯೂಟ್ಯೂಬ್ ಖಾತೆ ವಿರುದ್ಧ ದೂರು

ಪಿಯು ಮಂಡಳಿಯ ಜಂಟಿ ನಿರ್ದೇಶಕರು NiranjanShetty@NiranjanShetty9581 ಯೂಟ್ಯೂಬ್ ಚಾನೆಲ್ ವಿರುದ್ಧ ಬೆಂಗಳೂರು ನಾರ್ತ್ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್​ಐಆರ್​ ದಾಖಲಾಗಿದೆ. ನಕಲಿ ಪ್ರಶ್ನೆಪತ್ರಿಕೆ ಹರಿಬಿಟ್ಟು ಇದು ಒರಿಜಿನಲ್​​, ಇದರ ಪ್ರತಿ ಬೇಕಾದಲ್ಲಿ ಫಾಲೋ, ಸಬ್ಸ್ಕ್ರೈಬ್ ಮಾಡಿ ಅಂತ ಲಿಂಕ್ ಶೇರ್ ಮಾಡಿದ್ದಾರೆ. ಕೇವಲ ಯೂಟ್ಯೂಬ್ ಸಬ್ಸ್ಕ್ರೈಬ್ ಗೋಸ್ಕರ ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆ ಅಂತ ಬಿಂಬಿಸಿದ್ದಾರೆ. ಈ ರೀತಿ ಸುಳ್ಳು ಸುದ್ದಿ ಹರಡಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಲಾಗಿದೆ.

ಪೋಷಕರಿಗೆ ಆತಂಕ ಬೇಡ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ: ಭರತ್. ಎಸ್

ದ್ವಿತೀಯ ಪಿಯು ಪ್ರಿಪರೇಟರಿ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕ ಭರತ್. ಎಸ್​ ಪ್ರತಿಕ್ರಿಯಿಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಯಾರು ಲೀಕ್ ಮಾಡಿದ್ದಾರೆಂದು ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್: ಮುಖ್ಯೋಪಾಧ್ಯಾಯರು ಸೇರಿ 8 ಮಂದಿ ಅರೆಸ್ಟ್

ಕೆಲವೊಂದು ಹಳೆಯ ಪ್ರಶ್ನೆ ಪತ್ರಿಕೆಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಫೇಕಾಗಿ ಲೀಕ್‌ ಮಾಡುತ್ತಿದ್ದಾರೆ. ಅವರ ಬಗ್ಗೆಯೂ ಹದ್ದಿನ ಕಣ್ಣಿಟ್ಟಿದ್ದೇವೆ. ಪೋಷಕರಿಗೆ ಆತಂಕ ಬೇಡ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ. ತನಿಖೆ ನಡೆಯುತ್ತಿರುವ ಹಿನ್ನೆಲೆ ನಾವು ಏನೂ ಮಾತನಾಡಲ್ಲ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:31 pm, Mon, 12 January 26

Follow Us
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ