AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದ ಹಿನ್ನೆಲೆ; ಮಂಗಳೂರಿನ ವೈದ್ಯ ಡಾ. ಶ್ರೀನಿವಾಸ ಕಕ್ಕಿಲಾಯ ವಿರುದ್ಧ ಪ್ರಕರಣ ದಾಖಲು

ಡಾ. ಶ್ರೀನಿವಾಸ ಕಕ್ಕಿಲ್ಲಾಯ ಮಂಗಳೂರಿನ ಮಳಿಗೆಯೊಂದರಲ್ಲಿ ಮಾಸ್ಕ್ ಧರಿಸದೇ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದ ಹಿನ್ನೆಲೆ; ಮಂಗಳೂರಿನ ವೈದ್ಯ ಡಾ. ಶ್ರೀನಿವಾಸ ಕಕ್ಕಿಲಾಯ ವಿರುದ್ಧ ಪ್ರಕರಣ ದಾಖಲು
ಡಾ. ಶ್ರೀನಿವಾಸ ಕಕ್ಕಿಲಾಯ
TV9 Web
| Edited By: |

Updated on:Aug 21, 2021 | 10:11 AM

Share

ಮಂಗಳೂರು: ಮಾಸ್ಕ್ ಧರಿಸದ ಕಾರಣ ಮಂಗಳೂರಿನ ವೈದ್ಯ ಡಾ. ಶ್ರೀನಿವಾಸ ಕಕ್ಕಿಲಾಯ ವಿರುದ್ಧ ಪ್ರಕರಣ ದಾಖಲಾಗಿದೆ. ಮಾಸ್ಕ್ ಹಾಕದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರಣ ವೈದ್ಯ ಡಾ. ಶ್ರೀನಿವಾಸ ಕಕ್ಕಿಲಾಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಸಾಂಕ್ರಾಮಿಕ ರೋಗ ತಡೆಗಟ್ಟುವ ಕಾಯ್ದೆ 2020 ರ ಅಡಿಯಲ್ಲಿ ದೂರು ದಾಖಲಾಗಿದೆ.

ಡಾ. ಶ್ರೀನಿವಾಸ ಕಕ್ಕಿಲಾಯ ಮಂಗಳೂರಿನ ಮಳಿಗೆಯೊಂದರಲ್ಲಿ ಮಾಸ್ಕ್ ಧರಿಸದೇ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಳಿಗೆ ಸಿಬ್ಬಂದಿ ಮಾಸ್ಕ್ ಧರಿಸುವಂತೆ ಶ್ರೀನಿವಾಸ ಕಕ್ಕಿಲಾಯರನ್ನು ಒತ್ತಾಯಿಸಿರುವುದು ಕಂಡುಬಂದಿದೆ. ವೈದ್ಯ ಶ್ರೀನಿವಾಸ ಕಕ್ಕಿಲಾಯ ಅದಕ್ಕೆ ಪ್ರತಿಯಾಗಿ ವಾದ ನಡೆಸಿದ್ದಾರೆ. ಈ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಚಾರಣೆಗೆ ಹಾಜರಾದ ಶ್ರೀನಿವಾಸ್ ಕಕ್ಕಿಲಾಯ ಪೊಲೀಸರಿಂದ ನೋಟಿಸ್​ ಜಾರಿ ಬೆನ್ನಲ್ಲೇ ಡಾ. ಶ್ರೀನಿವಾಸ್ ಕಕ್ಕಿಲಾಯ ವಿಚಾರಣೆಗೆ ಹಾಜರಾಗಿದ್ದಾರೆ. ಡಾ.ಶ್ರೀನಿವಾಸ ಕಕ್ಕಿಲಾಯಗೆ ಪೊಲೀಸರು ನೋಟಿಸ್ ನೀಡಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಕದ್ರಿ ಠಾಣೆಗೆ ಕಕ್ಕಿಲಾಯ ಹಾಜರಾಗಿದ್ದಾರೆ. ಸೂಪರ್​ ಮಾರ್ಕೆಟ್​ನಲ್ಲಿ ಮಾಸ್ಕ್​ ಧರಿಸದೇ ವೈದ್ಯ ಆಕ್ರೋಶ ವ್ಯಕ್ತಪಡಿಸಿದ್ದರು. ಸೂಪರ್ ಮಾರ್ಕೆಟ್ ಮಾಲೀಕರ ದೂರಿನಡಿ ಕೇಸ್ ದಾಖಲಾಗಿತ್ತು. ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಮಂಗಳೂರಿನ ಸೂಪರ್​ ಮಾರ್ಕೆಟ್​ನಲ್ಲಿ ಘಟನೆ ನಡೆದಿತ್ತು.

ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯ ಕೊರೊನಾ ಎರಡನೇ ಅಲೆ ಬಿಗಡಾಯಿಸುತ್ತಿದ್ದಂತೆ ಭಾರತದಲ್ಲಿ ಮಾಸ್ಕ್, ಸ್ಯಾನಿಟೈಜರ್, ಸಾಮಾಜಿಕ ಅಂತರದ ಬಗ್ಗೆ ಎಚ್ಚರಿಕೆಯ ಮಾತುಗಳು ಕೇಳಿಬರಲಾರಂಭಿಸಿದವು. ಅದರರ್ಥ ಕೊರೊನಾ ದೇಶದಲ್ಲಿ ಸಂಪೂರ್ಣ ಕಡಿಮೆ ಆಗುವ ಮುನ್ನವೇ ಜನ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆತುಬಿಟ್ಟಿದ್ದು, ಎರಡನೇ ಅಲೆ ಶುರುವಾದಾಗ ಮತ್ತೆ ನೆನಪಿಸಬೇಕಾದ ಅನಿವಾರ್ಯತೆ ಎದುರಾಯಿತು. ಇದರ ನಡುವೆಯೇ ಲಸಿಕೆ ತೆಗೆದುಕೊಂಡರೆ ಕೊರೊನಾದಿಂದ ತಕ್ಕಮಟ್ಟಿಗೆ ಬಚಾವಾಗಬಹುದು ಎಂದು ತಜ್ಞರು ಭರವಸೆ ನೀಡಿರುವರಾದರೂ ಅದು ಕೊರೊನಾ ಬಾರದಂತೆ ರಕ್ಷಾ ಕವಚ ಅಲ್ಲ ಎಂಬುದನ್ನೂ ಒತ್ತಿ ಹೇಳಿದ್ದರು.

ಈ ಬಗ್ಗೆ ಎಚ್ಚರಿಕೆಯ ಮಾತುಗಳನ್ನಾಡಿರುವ ಏಮ್ಸ್ ನಿರ್ದೇಶಕ ಡಾ.ರಣ್​ದೀಪ್ ಗುಲೇರಿಯಾ, ಕೊರೊನಾ ವೈರಾಣು ನಿಯಮಿತವಾಗಿ ರೂಪಾಂತರಗೊಳ್ಳುತ್ತಿದೆ. ಈಗ ನೀಡಲಾಗುತ್ತಿರುವ ಲಸಿಕೆ ಮುಂಬರುವ ರೂಪಾಂತರಿಯನ್ನು ಮಣಿಸಲು ಎಷ್ಟು ಸಶಕ್ತ ಎಂಬುದರ ಬಗ್ಗೆ ಇನ್ನೂ ಖಚಿತತೆ ಇಲ್ಲ. ಹೀಗಾಗಿ ಲಸಿಕೆ ತೆಗೆದುಕೊಂಡರೂ ಮಾಸ್ಕ್​ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ್ದರು.

ಎರಡು ಡೋಸ್ ಕೊರೊನಾ ಲಸಿಕೆ ಪಡೆದ ಕೂಡಲೇ ವೈರಾಣುವಿನಿಂದ ಸಂಪೂರ್ಣ ಸುರಕ್ಷತೆ ಹೊಂದಿದ್ದೇವೆ ಎಂದು ಭಾವಿಸುವುದು ಬೇಡ. ಕೊರೊನಾ ರೂಪಾಂತರವಾಗುತ್ತಿರುವುದನ್ನು ನೋಡಿದರೆ ಮುಂದಿನ ಮಾದರಿಗಳು ಯಾವ ರೀತಿ ವರ್ತಿಸಲಿವೆ ಎಂದು ಹೇಳಲಾಗದು. ಹೀಗಾಗಿ ಯಾವುದೇ ಕಾರಣಕ್ಕೂ ಮೈಮರೆಯುವಂತಿಲ್ಲ. ಇನ್ನೂ ದೊಡ್ಡ ಗಂಡಾಂತರ ಎದುರಾಗಬಾರದೆಂದರೆ ಎಚ್ಚರಿಕೆಯಿಂದ ಇರಲೇಬೇಕು ಎಂದು ತಜ್ಞರು ಹೇಳಿದ್ದರು.

ಇದನ್ನೂ ಓದಿ: ಎರಡು ಡೋಸ್​ ಲಸಿಕೆ ಪಡೆದರೂ ಮಾಸ್ಕ್​ ಕಡ್ಡಾಯ, ಭಾರತದಲ್ಲಿ ಸದ್ಯಕ್ಕಿಲ್ಲ ವಿನಾಯಿತಿ: ಡಾ. ರಣ್​ದೀಪ್ ಗುಲೇರಿಯಾ

2 ರಿಂದ 18 ವರ್ಷದ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಿಕೆ; 10 ದಿನದಲ್ಲಿ ಪ್ರಯೋಗ ಆರಂಭ: ನೀತಿ ಆಯೋಗ ಸದಸ್ಯ

Published On - 3:43 pm, Wed, 19 May 21

Follow Us
TV9 Web
TV9 Web

TV9 Kannada

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ