AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ದಾಖಲಾಗಿತ್ತು ದೂರು: ಕೇಸ್ ಕೊಟ್ಟು ಹಿಂದೆ ಸರಿದಿದ್ದ ದೂರುದಾರೆ!

ಅತ್ಯಾಚಾರ ಪ್ರಕರಣದಲ್ಲಿ ಎಸ್​ಐಟಿ ಕಸ್ಟಡಿಯಲ್ಲಿರುವ ಶಾಸಕ ಮುನಿರತ್ನರನ್ನು ನಿರಂತರವಾಗಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಆದರೆ, ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ದೂರು ದಾಖಲಾಗಿದ್ದರೂ ಎಫ್​ಐಆರ್ ದಾಖಲಾಗಿರಲಿಲ್ಲ ಎನ್ನಲಾಗಿದೆ. ಅಷ್ಟಲ್ಲದೇ, ದಾರುದಾರೆ ಕೂಡ ವಿಚಾರಣೆಗೆ ಹಾಜರಾಗಿರಲಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದ್ದು, ಸಾಕಷ್ಟು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ

ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ದಾಖಲಾಗಿತ್ತು ದೂರು: ಕೇಸ್ ಕೊಟ್ಟು ಹಿಂದೆ ಸರಿದಿದ್ದ ದೂರುದಾರೆ!
ಮುನಿರತ್ನ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 02, 2024 | 7:31 AM

Share

ಬೆಂಗಳೂರು, ಅಕ್ಟೋಬರ್ 2: ಒಂದಲ್ಲ ಎರಡಲ್ಲ, ಮೂರು ಪ್ರಕರಣಗಳಲ್ಲಿ ಆರೋಪಿಯಾಗಿರುವ ಆರ್​ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಈಗ ಎಸ್​ಐಟಿ ಕಸ್ಟಡಿಯಲ್ಲಿದ್ದಾರೆ. ಅತ್ಯಾಚಾರ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳ ವಿಚಾರಣೆ ಎದುರಿಸುತ್ತಿದ್ದಾರೆ. ಸಂತ್ರಸ್ತೆಯ ಆರೋಪಗಳೆಲ್ಲ ಸುಳ್ಳು ಅಂತ ತಮ್ಮನ್ನು ತಾವು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ, ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ಅತ್ಯಾಚಾರ ಆರೋಪದ ಬಗ್ಗೆ ದೂರು ನೀಡಲಾಗಿತ್ತು ಎಂಬ ವಿಚಾರ ಬಯಲಾಗಿದೆ.

ಶಾಸಕ ಮುನಿರತ್ನ ವಿರುದ್ದ ಜೂನ್​​ನಲ್ಲೇ ದೂರು ದಾಖಲಾಗಿತ್ತು. ಜೂನ್​​ನಲ್ಲಿಯೇ ಶಾಸಕ ಮುನಿರತ್ನ ವಿರುದ್ಧ ಸಂತ್ರಸ್ತ ಮಹಿಳೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರನ್ನು ಅರ್ಜಿಯಾಗಿ ಪಡೆದುಕೊಂಡಿದ್ದ ಪೊಲೀಸರು ಅರ್ಜಿ ಸಂಬಂಧ ವಿಚಾರಣೆಗೆ ಸಾಕ್ಷಿ ನೀಡುವಂತೆ ದೂರುದಾರೆಗೆ ತಿಳಿಸಿದ್ದರು. ಈ ಸಂಬಂಧ ದೂರುದಾರೆಗೆ ನೋಟಿಸ್ ನೀಡಲಾಗಿತ್ತು. ಆದ್ರೆ ದೂರುದಾರೆ ಪೊಲೀಸರ ಮುಂದೆಯೇ ಹಾಜಾರಾಗಿರಲಿಲ್ಲ. ಹೀಗಾಗಿ ಪೊಲೀಸರು ವಿಚಾರಣೆಯನ್ನು ಹಾಗೇಯೇ ಬಿಟ್ಟಿದ್ದರು. ಈಗ ಮತ್ತೆ ಅದೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರಿಂದ ಕೇಸ್ ದಾಖಲು ಮಾಡಿ ಅರೆಸ್ಟ್ ಮಾಡಲಾಗಿತ್ತು. ಆದರೆ ಈ ವಿಚಾರವಾಗಿ ಕೆಲ‌ ಪ್ರಶ್ನೆಗಳಿಗೆ ಉತ್ತರ ಸಿಗುತ್ತಿಲ್ಲ.

ಇದನ್ನೂ ಓದಿ: ಜಾತಿ ನಿಂದನೆ, ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಎಸ್​ಐಟಿ ದಾಳಿ

ಸಂತ್ರಸ್ತೆ ಈ ಹಿಂದೆ ದೂರು ಕೊಟ್ಟಿದ್ದರೂ ಆಗ ಪೊಲೀಸರು ಎಫ್​ಐಆರ್ ದಾಖಲಿಸಿರಲಿಲ್ಲ. ಹೀಗಾಗಿ ದೂರು‌ ಕೊಟ್ಟರೂ ಯಾಕೆ ಪೊಲೀಸರು ಎಫ್​ಐಆರ್ ದಾಖಲಿಸಿಲ್ಲ ಎಂಬ ಪ್ರಶ್ನೆ ಮೂಡಿದೆ. ಅಷ್ಟಲ್ಲದೇ, ಮಹಿಳೆ ಮೂರು ತಿಂಗಳ ಹಿಂದೆ ದೂರು ನೀಡಿ ಹಿಂದೆ ಸರಿದಿದ್ದು ಯಾಕೆ ಎಂಬ ಪ್ರಶ್ನೆ ಉದ್ಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ