AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ದಾಖಲಾಗಿತ್ತು ದೂರು: ಕೇಸ್ ಕೊಟ್ಟು ಹಿಂದೆ ಸರಿದಿದ್ದ ದೂರುದಾರೆ!

ಅತ್ಯಾಚಾರ ಪ್ರಕರಣದಲ್ಲಿ ಎಸ್​ಐಟಿ ಕಸ್ಟಡಿಯಲ್ಲಿರುವ ಶಾಸಕ ಮುನಿರತ್ನರನ್ನು ನಿರಂತರವಾಗಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಆದರೆ, ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ದೂರು ದಾಖಲಾಗಿದ್ದರೂ ಎಫ್​ಐಆರ್ ದಾಖಲಾಗಿರಲಿಲ್ಲ ಎನ್ನಲಾಗಿದೆ. ಅಷ್ಟಲ್ಲದೇ, ದಾರುದಾರೆ ಕೂಡ ವಿಚಾರಣೆಗೆ ಹಾಜರಾಗಿರಲಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದ್ದು, ಸಾಕಷ್ಟು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ

ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ದಾಖಲಾಗಿತ್ತು ದೂರು: ಕೇಸ್ ಕೊಟ್ಟು ಹಿಂದೆ ಸರಿದಿದ್ದ ದೂರುದಾರೆ!
ಮುನಿರತ್ನ
Follow us
Prajwal Kumar NY
| Updated By: Ganapathi Sharma

Updated on: Oct 02, 2024 | 7:31 AM

ಬೆಂಗಳೂರು, ಅಕ್ಟೋಬರ್ 2: ಒಂದಲ್ಲ ಎರಡಲ್ಲ, ಮೂರು ಪ್ರಕರಣಗಳಲ್ಲಿ ಆರೋಪಿಯಾಗಿರುವ ಆರ್​ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಈಗ ಎಸ್​ಐಟಿ ಕಸ್ಟಡಿಯಲ್ಲಿದ್ದಾರೆ. ಅತ್ಯಾಚಾರ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳ ವಿಚಾರಣೆ ಎದುರಿಸುತ್ತಿದ್ದಾರೆ. ಸಂತ್ರಸ್ತೆಯ ಆರೋಪಗಳೆಲ್ಲ ಸುಳ್ಳು ಅಂತ ತಮ್ಮನ್ನು ತಾವು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ, ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ಅತ್ಯಾಚಾರ ಆರೋಪದ ಬಗ್ಗೆ ದೂರು ನೀಡಲಾಗಿತ್ತು ಎಂಬ ವಿಚಾರ ಬಯಲಾಗಿದೆ.

ಶಾಸಕ ಮುನಿರತ್ನ ವಿರುದ್ದ ಜೂನ್​​ನಲ್ಲೇ ದೂರು ದಾಖಲಾಗಿತ್ತು. ಜೂನ್​​ನಲ್ಲಿಯೇ ಶಾಸಕ ಮುನಿರತ್ನ ವಿರುದ್ಧ ಸಂತ್ರಸ್ತ ಮಹಿಳೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರನ್ನು ಅರ್ಜಿಯಾಗಿ ಪಡೆದುಕೊಂಡಿದ್ದ ಪೊಲೀಸರು ಅರ್ಜಿ ಸಂಬಂಧ ವಿಚಾರಣೆಗೆ ಸಾಕ್ಷಿ ನೀಡುವಂತೆ ದೂರುದಾರೆಗೆ ತಿಳಿಸಿದ್ದರು. ಈ ಸಂಬಂಧ ದೂರುದಾರೆಗೆ ನೋಟಿಸ್ ನೀಡಲಾಗಿತ್ತು. ಆದ್ರೆ ದೂರುದಾರೆ ಪೊಲೀಸರ ಮುಂದೆಯೇ ಹಾಜಾರಾಗಿರಲಿಲ್ಲ. ಹೀಗಾಗಿ ಪೊಲೀಸರು ವಿಚಾರಣೆಯನ್ನು ಹಾಗೇಯೇ ಬಿಟ್ಟಿದ್ದರು. ಈಗ ಮತ್ತೆ ಅದೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರಿಂದ ಕೇಸ್ ದಾಖಲು ಮಾಡಿ ಅರೆಸ್ಟ್ ಮಾಡಲಾಗಿತ್ತು. ಆದರೆ ಈ ವಿಚಾರವಾಗಿ ಕೆಲ‌ ಪ್ರಶ್ನೆಗಳಿಗೆ ಉತ್ತರ ಸಿಗುತ್ತಿಲ್ಲ.

ಇದನ್ನೂ ಓದಿ: ಜಾತಿ ನಿಂದನೆ, ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಎಸ್​ಐಟಿ ದಾಳಿ

ಸಂತ್ರಸ್ತೆ ಈ ಹಿಂದೆ ದೂರು ಕೊಟ್ಟಿದ್ದರೂ ಆಗ ಪೊಲೀಸರು ಎಫ್​ಐಆರ್ ದಾಖಲಿಸಿರಲಿಲ್ಲ. ಹೀಗಾಗಿ ದೂರು‌ ಕೊಟ್ಟರೂ ಯಾಕೆ ಪೊಲೀಸರು ಎಫ್​ಐಆರ್ ದಾಖಲಿಸಿಲ್ಲ ಎಂಬ ಪ್ರಶ್ನೆ ಮೂಡಿದೆ. ಅಷ್ಟಲ್ಲದೇ, ಮಹಿಳೆ ಮೂರು ತಿಂಗಳ ಹಿಂದೆ ದೂರು ನೀಡಿ ಹಿಂದೆ ಸರಿದಿದ್ದು ಯಾಕೆ ಎಂಬ ಪ್ರಶ್ನೆ ಉದ್ಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ