AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSSನಿಂದಲೇ ಅಪರಾಧ ಪ್ರಕರಣಗಳು ಹೆಚ್ಚಳ ಎಂದ ಸಿದ್ದರಾಮಯ್ಯ ವಿರುದ್ಧ ಕೋರ್ಟ್​ನಲ್ಲಿ ಖಾಸಗಿ ದೂರು

‘ಆರ್‌ಎಸ್‌ಎಸ್‌ನಿಂದಲೇ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಆರ್‌ಎಸ್‌ಎಸ್‌ನವರ ದ್ವೇಷ ರಾಜಕಾರಣ, ಹಿಂಸಾ ರಾಜಕಾರಣವೇ ಗಲಭೆ ಹಾಗೂ ಅಪರಾಧಗಳಿಗೆ ಕಾರಣ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​ ಮೇಲಿನ ಚರ್ಚೆ ವೇಳೆ ಸದನದೊಳಗೆ ಗಂಭೀರ ಆರೋಪ ಮಾಡಿದ್ದರು. ಇದೀಗ ಇದು ಅವರಿಗೆ ಸಂಕಷ್ಟ ತಂದಿಟ್ಟಿದೆ.

RSSನಿಂದಲೇ ಅಪರಾಧ ಪ್ರಕರಣಗಳು ಹೆಚ್ಚಳ ಎಂದ ಸಿದ್ದರಾಮಯ್ಯ ವಿರುದ್ಧ ಕೋರ್ಟ್​ನಲ್ಲಿ ಖಾಸಗಿ ದೂರು
ಸಿಎಂ ಸಿದ್ದರಾಮಯ್ಯ
Ramesha M
| Edited By: |

Updated on: Mar 19, 2025 | 7:21 PM

Share

ಬೆಂಗಳೂರು, (ಮಾರ್ಚ್ 19): ಆರ್‌ಎಸ್‌ಎಸ್‌ನಿಂದಲೇ  (RSS) ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆರೋಪ ಮಾಡಿದ್ದು, ಈ ಹೇಳಿಕೆ ವಿರುದ್ಧ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ (BJP) ಸಿಡಿದೆದಿದ್ದು, ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದಿವೆ. ಸಾಲದಕ್ಕೆ ಇದೀಗ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ದಾಖಲಿಸಲಾಗಿದೆ. ಕಿರಣ್.ಎಸ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದು, ಬಿಎನ್ಎಸ್ ಸೆಕ್ಷನ್ 299,352,356(2)ಅಡಿ ಕ್ರಮಕ್ಕೆ ಮನವಿ ಮಾಡಿದ್ದಾರೆ.

ಆರ್​ಎಸ್​ಎಸ್ ಬಗ್ಗೆ ಸಿಎಂ ಹೇಳಿದ್ದನು?

ಮೊದಲಿಗೆ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬ ರಾಜ್ಯಪಾಲರ ಮಾತು ಸರಿಯಿದೆ. ಕಳೆದ ಸರ್ಕಾರದ ಅವಧಿಗಿಂತ ಕೊಲೆ, ಕೊಲೆ ಯತ್ನ, ದರೋಡೆ, ಕಳ್ಳತನ, ಅತ್ಯಾಚಾರ ಎಲ್ಲಾ ಪ್ರಕರಣಗಳೂ ನಮ್ಮ ಸರ್ಕಾರದ ಅವಧಿಯಲ್ಲಿ ಕಡಿಮೆಯಾಗಿವೆ ಎಂದು 2022 ಹಾಗೂ 2024 ನೇ ಸಾಲಿನ ಅಪರಾಧ ಪ್ರಕರಣಗಳನ್ನು ಅಂಕಿ-ಅಂಶಗಳ ಸಹಿತ ಬಿಚ್ಚಿಟ್ಟರು. ಅಲ್ಲದೆ ಮಂಗಳೂರಿನಲ್ಲಿ 75 ಕೋಟಿ ರು. ಡ್ರಗ್ಸ್‌ ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದೇವೆ. ನೀವೇ ನಮ್ಮ ಪೊಲೀಸರಿಗೆ ಅಭಿನಂದನೆ ಹೇಳಿದ್ದೀರಿ. ನಾವು ಅಧಿಕಾರಕ್ಕೆ ಬಂದ ಮೇಲೆ ಅಪರಾಧಗಳನ್ನು ಎಷ್ಟು ತಗ್ಗಿಸಲು ಸಾಧ್ಯವೋ ಅಷ್ಟು ಮಾಡಿದ್ದೇವೆ. ಹಾಗಂತ ನಮಗಿನ್ನೂ ತೃಪ್ತಿಯಾಗಿಲ್ಲ. ಇನ್ನೂ ಇಳಿಕೆ ಮಾಡುವ ಉದ್ದೇಶವಿದೆ. ಆದರೆ ಅಪರಾಧಗಳನ್ನು ಮಾಡುವುದೇ ನೀವು. ನಿಮ್ಮ ಆರ್‌ಎಸ್‌ಎಸ್‌ನವರಿಂದಲೇ ಅಪರಾಧಗಳು ಹೆಚ್ಚಾಗುತ್ತಿವೆ ಎಂದು ಹೇಳಿದ್ದರು.

‘ಆರ್‌ಎಸ್‌ಎಸ್‌ನಿಂದಲೇ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಆರ್‌ಎಸ್‌ಎಸ್‌ನವರ ದ್ವೇಷ ರಾಜಕಾರಣ, ಹಿಂಸಾ ರಾಜಕಾರಣವೇ ಗಲಭೆ ಹಾಗೂ ಅಪರಾಧಗಳಿಗೆ ಕಾರಣ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಂಭೀರ ಆರೋಪವು ಸೋಮವಾರ ವಿಧಾನಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಗಿತ್ತು. ಅಲ್ಲದೇ ಆರ್‌ಎಸ್‌ಎಸ್‌ ಕುರಿತ ಮುಖ್ಯಮಂತ್ರಿ ಅವರ ಹೇಳಿಕೆಯನ್ನು ಕಡತದಿಂದ ತೆಗೆಯಬೇಕು ಎಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದಿದ್ದರು.

ಇದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ‘ನನ್ನ ಮಾತಿಗೆ ನಾನು ಬದ್ಧ. ಆರ್‌ಎಸ್‌ಎಸ್‌ನವರಿಗೆ ಹೆದರುವ ಪ್ರಶ್ನೆಯೇ ಇಲ್ಲ. ಅವರನ್ನು ಎದುರಿಸಲು ಸಿದ್ಧ’ ಎಂದು ಸವಾಲು ಹಾಕಿದ್ದರು. ಇದು ಬಿಜೆಪಿ ನಾಯಕರ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿಯಿತು. ಮುಖ್ಯಮಂತ್ರಿಗಳಿಗೆ ವಯಸ್ಸಾಗಿದೆ. ಹೀಗಾಗಿ ನೆನಪಿನ ಶಕ್ತಿ ಕಳೆದುಕೊಂಡು ಮಾತನಾಡಿದ್ದಾರೆ. ಅವರ ಹೇಳಿಕೆ ಕಡತದಿಂದ ತೆಗೆಯಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಕಾಂಗ್ರೆಸ್‌ ಪಾಕಿಸ್ತಾನ ಏಜೆಂಟ್‌, ಜೈ ಶ್ರೀರಾಮ್‌, ಆರ್‌ಎಸ್‌ಎಸ್‌ ಜಿಂದಾಬಾದ್‌ ಎಂದು ಘೋಷಣೆಗಳನ್ನು ಕೂಗಿದ್ದರು.

ಇದರಿಂದ ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ವಾಗ್ವಾದ ತಾರಕಕ್ಕೇರಿ ಕಲಾಪವನ್ನು ಹತ್ತು ನಿಮಿಷಗಳ ಕಾಲ ಮುಂದೂಡಲಾಗಿತ್ತು. ಬಳಿಕವೂ ಜಗ್ಗದ ಸಿದ್ದರಾಮಯ್ಯ ಅವರು, ‘ಯಾವುದೇ ಕಾರಣಕ್ಕೂ ಆರ್‌ಎಸ್‌ಎಸ್‌ ಕುರಿತ ಹೇಳಿಕೆ ಹಿಂಪಡೆಯುವುದಿಲ್ಲ. ನಾನು ಇರುವುದನ್ನೇ ಹೇಳಿದ್ದೇನೆ’ ಎಂದು ಪಟ್ಟು ಹಿಡಿದ ಕಾರಣ ಮತ್ತೊಮ್ಮೆ ಕಲಾಪ ಮುಂದೂಡಿ ಸಂಧಾನಸಭೆ ನಡೆಸಲಾಗಿತ್ತು. ನಂತರ ಸ್ಪೀಕರ್‌ ಯು.ಟಿ. ಖಾದರ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್‌ಎಸ್‌ಎಸ್‌ ಕುರಿತ ಹೇಳಿಕೆ ಹಾಗೂ ಕಾಂಗ್ರೆಸ್‌ ಪಾಕಿಸ್ತಾನ್‌ ಏಜೆಂಟ್‌ ಎಂಬ ಪದಗಳನ್ನು ಕಡತದಿಂದ ತೆಗೆಯುವುದಾಗಿ ಹೇಳಿ ಕಲಾಪ ಸುಗಮವಾಗಿ ನಡೆಸಲು ಸಹಕರಿಸುವಂತೆ ಕೋರಿದ್ದರು. ಇದರಿಂದ ವಿವಾದ ತಣ್ಣಗಾಗಿತ್ತು.

ವಿಧಾನಸಭೆ ಕಲಾಪದಲ್ಲಿ ಏನೋ ತಣ್ಣಗಾಗಿದೆ. ಆದರೆ, ಹೊರಗಡೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರೆಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?