AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುತ್ತಿರುವ ಕೊರೊನಾ ಸೋಂಕು; ಕೊಡಗು ಜಿಲ್ಲೆಯಲ್ಲಿ ಮತ್ತಷ್ಟು ಕಠಿಣ ನಿಯಮ ಜಾರಿಗೊಳಿಸಿದ ಜಿಲ್ಲಾಧಿಕಾರಿ

ಈ ಹೊಸ ನಿಯಮದ ಅನ್ವಯ ಕೊಡಗು ಜಿಲ್ಲೆಯಲ್ಲಿ ವಾರದಲ್ಲಿ ಐದು ದಿನ ಸಂಪೂರ್ಣ ಲಾಕ್​ಡೌನ್ ಇರುತ್ತದೆ. ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇರುತ್ತದೆ.

ಹೆಚ್ಚುತ್ತಿರುವ ಕೊರೊನಾ ಸೋಂಕು; ಕೊಡಗು ಜಿಲ್ಲೆಯಲ್ಲಿ ಮತ್ತಷ್ಟು ಕಠಿಣ ನಿಯಮ ಜಾರಿಗೊಳಿಸಿದ ಜಿಲ್ಲಾಧಿಕಾರಿ
ಮಡಿಕೇರಿಯ ಮಾರುಕಟ್ಟೆ ದೃಶ್ಯ
Lakshmi Hegde
|

Updated on: May 03, 2021 | 8:27 PM

Share

ಕೊಡಗು: ಕೊರೊನಾ ಸೋಂಕಿನ ಪ್ರಮಾಣ ಉಲ್ಬಣಗೊಳ್ಳುತ್ತಿರುವುದರಿಂದ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ವಹಿಸಲು ಜಿಲ್ಲಾಧಿಕಾರಿ ಮುಂದಾಗಿದ್ದಾರೆ. ಕೊಡಗು ಜಿಲ್ಲೆಯಲ್ಲಿ ದಿನೇದಿನೆ ಕೊವಿಡ್ 19 ಕೇಸ್​ಗಳು ಹೆಚ್ಚೆಚ್ಚು ದಾಖಲಾಗುತ್ತಿರುವುದರಿಂದ ಸಂಪೂರ್ಣ ಲಾಕ್​ಡೌನ್ ಮಾಡಿ ಜಿಲ್ಲಾಧಿಕಾರಿ ಚಾರುಲತಾ ಆದೇಶ ಹೊರಡಿಸಿದ್ದಾರೆ.

ಈ ಹೊಸ ನಿಯಮದ ಅನ್ವಯ ಕೊಡಗು ಜಿಲ್ಲೆಯಲ್ಲಿ ವಾರದಲ್ಲಿ ಐದು ದಿನ ಸಂಪೂರ್ಣ ಲಾಕ್​ಡೌನ್ ಇರುತ್ತದೆ. ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇರುತ್ತದೆ. ಉಳಿದದಿನ ಹಾಲು-ತರಕಾರಿಗಳನ್ನು ಬೆಳಗ್ಗೆ 6ರಿಂದ 10 ಗಂಟೆ ಒಳಗೆ ಖರೀದಿ ಮಾಡಬೇಕಾಗಿದೆ. ಉಳಿದಂತೆ ಮಂಗಳವಾರ ಮತ್ತು ಶುಕ್ರವಾರ ಹೊರತು ಪಡಿಸಿ ಇನ್ಯಾವುದೇ ದಿನ ಯಾವ ಮಳಿಗೆಯನ್ನೂ ತೆರೆಯುವಂತಿಲ್ಲ.

ಸಚಿವ ಸೋಮಣ್ಣನವರೊಂದಿಗೆ ಸಭೆ ಇಂದು ಕೊಡಗು ಉಸ್ತುವಾರಿ ಸಚಿವ ಸೋಮಣ್ಣನವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಡಿಸಿ ಚಾರುಲತಾ ಈ ಆದೇಶ ಹೊರಡಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ವಿ.ಸೋಮಣ್ಣ, ಆಮ್ಲಜನಕದ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ಜಿಲ್ಲೆಯ ಎಲ್ಲಾ ಹಂತದ ಆಸ್ಪತ್ರೆಗಳಲ್ಲಿ ಆಮ್ಲಜನಕದ ದಾಸ್ತಾನು ಸಾಕಷ್ಟು ಇರಲಿ. ಆಗಾಗ ಪರಿಶೀಲಿಸಿ ವರದಿ ನೀಡುತ್ತಿರಿ. ಬರೀ ಆಕ್ಸಿಜನ್ ಅಷ್ಟೇ ಅಲ್ಲ, ಲಸಿಕೆ, ಔಷಧಿಗಳ ಬಗ್ಗೆಯೂ ನಿಗಾ ಇರಲಿ ಎಂದು ಜಿಲ್ಲಾಡಳಿತಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಪತ್ನಿ ಮೃತದೇಹವನ್ನು ಭುಜದ ಮೇಲೆ ಹೊತ್ತು 3 ಕಿ.ಮೀ ನಡೆದುಕೊಂಡು ಹೋದ ಪತಿ!

ಮತ್ತೆ ಹಳ್ಳಿ ಹೈದನಾಗೋಕೆ ರವಿಚಂದ್ರನ್​ ರೆಡಿ; ಆದರೆ ಸಿನಿಮಾ ಶುರುವಾಗೋಕೆ ಎದುರಾಯ್ತು ವಿಘ್ನ

Follow Us
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ