ಈರುಳ್ಳಿ ಮಾರಾಟಕ್ಕೆ ಮೊದ್ಲು ಲೈಸೆನ್ಸ್ ತಗೊಳ್ಳಿ, ಅಕ್ರಮ ದಾಸ್ತಾನು ಮಾಡಿದ್ರೆ ಹುಷಾರ್!

ಮೈಸೂರು: ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಅಕ್ರಮ ದಾಸ್ತಾನು ಮಾಡುವವರ ವಿರುದ್ಧ ತಡೆ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೈಸೂರು ಜಿಲ್ಲೆಯಲ್ಲಿ ಪರವಾನಗಿ ಪಡೆದು ಈರುಳ್ಳಿ ಮಾರಾಟ ಮಾಡಬೇಕು ಎಂದು ಡಿಸಿ ಆದೇಶಿಸಿದ್ದಾರೆ. ಅಗತ್ಯ ವಸ್ತುಗಳ ಪರವಾನಗಿ ಆದೇಶ 1986(ತಿದ್ದುಪಡಿ 2019)ರ ಪ್ರಕಾರ ಲೈಸೆನ್ಸ್ ಪಡೆಯಬೇಕು. ನಗರ ವ್ಯಾಪಾರಿಗಳು ಡಿಸಿ ಕಚೇರಿಯಿಂದ ಲೈಸೆನ್ಸ್ ಪಡೆದೇ ಮಾರಾಟ ಮಾಡಬೇಕು. ತಾಲೂಕಿನಲ್ಲಿ ತಹಶೀಲ್ದಾರ್‌ರಿಂದ ಅನುಮತಿ ಪಡೆಯಬೇಕು. ಸರ್ಕಾರದ ಆದೇಶದಂತೆ ಸಗಟು ವ್ಯಾಪಾರಿಗಳು 250 ಕ್ವಿಂಟಾಲ್ ಈರುಳ್ಳಿ ಮಾತ್ರ ದಾಸ್ತಾನಿನಲ್ಲಿ ಸಂಗ್ರಹಿಸಬೇಕು. ಚಿಲ್ಲರೆ […]

ಈರುಳ್ಳಿ ಮಾರಾಟಕ್ಕೆ ಮೊದ್ಲು ಲೈಸೆನ್ಸ್ ತಗೊಳ್ಳಿ, ಅಕ್ರಮ ದಾಸ್ತಾನು ಮಾಡಿದ್ರೆ ಹುಷಾರ್!
ಸಾಧು ಶ್ರೀನಾಥ್​

Updated on: Dec 10, 2019 | 1:59 PM

ಮೈಸೂರು: ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಅಕ್ರಮ ದಾಸ್ತಾನು ಮಾಡುವವರ ವಿರುದ್ಧ ತಡೆ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೈಸೂರು ಜಿಲ್ಲೆಯಲ್ಲಿ ಪರವಾನಗಿ ಪಡೆದು ಈರುಳ್ಳಿ ಮಾರಾಟ ಮಾಡಬೇಕು ಎಂದು ಡಿಸಿ ಆದೇಶಿಸಿದ್ದಾರೆ. ಅಗತ್ಯ ವಸ್ತುಗಳ ಪರವಾನಗಿ ಆದೇಶ 1986(ತಿದ್ದುಪಡಿ 2019)ರ ಪ್ರಕಾರ ಲೈಸೆನ್ಸ್ ಪಡೆಯಬೇಕು.

ನಗರ ವ್ಯಾಪಾರಿಗಳು ಡಿಸಿ ಕಚೇರಿಯಿಂದ ಲೈಸೆನ್ಸ್ ಪಡೆದೇ ಮಾರಾಟ ಮಾಡಬೇಕು. ತಾಲೂಕಿನಲ್ಲಿ ತಹಶೀಲ್ದಾರ್‌ರಿಂದ ಅನುಮತಿ ಪಡೆಯಬೇಕು. ಸರ್ಕಾರದ ಆದೇಶದಂತೆ ಸಗಟು ವ್ಯಾಪಾರಿಗಳು 250 ಕ್ವಿಂಟಾಲ್ ಈರುಳ್ಳಿ ಮಾತ್ರ ದಾಸ್ತಾನಿನಲ್ಲಿ ಸಂಗ್ರಹಿಸಬೇಕು. ಚಿಲ್ಲರೆ ವ್ಯಾಪಾರಿಗಳು 50 ಕ್ವಿಂಟಾಲ್ ಮಾತ್ರ ದಾಸ್ತಾನು ಮಾಡಬೇಕು.

ಪರವಾನಗಿ ಇಲ್ಲದೆಯೇ ಅದಕ್ಕಿಂತ ಹೆಚ್ಚು ಸಂಗ್ರಹಿಸಿದ್ರೆ ಕಾನೂನು ಕ್ರಮಕೈಗೊಳ್ಳುವುದಾಗಿ ಮೈಸೂರು ಡಿಸಿ ಆದೇಶ ನೀಡಿದ್ದಾರೆ. ಇನ್ನು ಮುಂದೆ ಆಹಾರ ಇಲಾಖೆ ಕೂಡ ಯಾವಾಗ ಬೇಕಾದರು ಈರುಳ್ಳಿ ಅಂಗಡಿಗಳ ಮೇಲೆ ದಾಳಿ ನಡೆಸಬಹುದು. ಹೀಗಾಗಿ ಅಕ್ರಮ ದಾಸ್ತಾನು ಮಾಡಿಕೊಂಡವರಲ್ಲಿ ಆತಂಕ ಸೃಷ್ಟಿಯಾಗಿದೆ.

Published On - 1:27 pm, Tue, 10 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us