AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಉದ್ಯಮಕ್ಕೆ ಪೂರಕ ವಾತಾವರಣ, ಫಾಕ್ಸ್​ಕಾನ್ ಕಂಪನಿಗೆ 300 ಎಕರೆ ಭೂಮಿ ನೀಡಿಕೆ: ಸಚಿವ ಎಂಬಿ ಪಾಟೀಲ್​​

ರಾಜ್ಯದಲ್ಲಿ ಸಮರ್ಪಕವಾಗಿ ಬದಲಾವಣೆ ತರಲು ನಿರ್ಧರಿಸಲಾಗಿದೆ. ಕರ್ನಾಟಕಕ್ಕೆ ಇನ್ನೊಂದು ಫಾಕ್ಸ್​ಕಾನ್ ಘಟಕ ಕೂಡ ಆಗಮಿಸುತ್ತಿದ್ದು, 300 ಎಕರೆ ಭೂಮಿ ನೀಡಲಾಗಿದೆ‌ ಎಂದು ಬೃಹತ್​ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​ ತಿಳಿಸಿದರು.

ರಾಜ್ಯದಲ್ಲಿ ಉದ್ಯಮಕ್ಕೆ ಪೂರಕ ವಾತಾವರಣ, ಫಾಕ್ಸ್​ಕಾನ್ ಕಂಪನಿಗೆ 300 ಎಕರೆ ಭೂಮಿ ನೀಡಿಕೆ: ಸಚಿವ ಎಂಬಿ ಪಾಟೀಲ್​​
ಬೃಹತ್ & ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್
Follow us
Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on:Jul 22, 2023 | 3:25 PM

ಬೆಂಗಳೂರು, ಜುಲೈ 22: ಕರ್ನಾಟಕಕ್ಕೆ ಇನ್ನೊಂದು ಫಾಕ್ಸ್​ಕಾನ್ (Foxconn) ಘಟಕ ಕೂಡ ಆಗಮಿಸುತ್ತಿದ್ದು, 300 ಎಕರೆ ಭೂಮಿ ನೀಡಲಾಗಿದೆ‌ ಎಂದು ಬೃಹತ್​ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (M B Patil)​ ತಿಳಿಸಿದರು. ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭ ಅವರು ಮಾತನಾಡಿ, ರಾಜ್ಯದಲ್ಲಿ ಸಮರ್ಪಕವಾಗಿ ಬದಲಾವಣೆ ತರಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಸಿಂಗಲ್ ವಿಂಡೋ ಕ್ಲಿಯರೆನ್ಸ್ ತರಲು ನಾವು ಬದ್ಧ

ಕೈಗಾರಿಕೆಗಳಿಗೆ ಸಿಂಗಲ್ ವಿಂಡೋ ಕ್ಲಿಯರೆನ್ಸ್ ತರಲು ನಾವು ಬದ್ಧ. ಶೀಘ್ರದಲ್ಲೇ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು. ಕೆಐಎಡಿಬಿನಲ್ಲಿನ ವ್ಯಾಜ್ಯ ಹಾಗೂ ಸಮಸ್ಯೆಗಳನ್ನು ಪರಿಹರಿಸಲು ಕ್ರಮಕೈಗೊಳ್ಳಲಾಗುವುದು. ಆಟೋಮೊಬೈಲ್, ಏರೋಸ್ಪೇಸ್, ಎಲೆಕ್ಟ್ರಾನಿಕ್ ಹಾಗೂ ಫಾರ್ಮಸಿ ಸ್ಪರ್ಧಾತ್ಮಕ ಮಾರ್ಕೆಟ್​​ನಲ್ಲಿ ಹೆಚ್ಚು ಸ್ಟೀಲ್ ಕೈಗಾರಿಕೆ ರಾಜ್ಯಕ್ಕೆ ಬರಲು ಮುಂದಾಗಿದ್ದು, ಯಾವ ರೀತಿ ಹೆಜ್ಜೆ ಇಡಬೇಕೆಂದು ಯೋಚಿಸಿ ದಿಟ್ಟ ಕ್ರಮ ಕೈಗೊಳ್ಳುತ್ತೇವೆ.

ಇದನ್ನೂ ಓದಿ: ಎನ್​ಆರ್​ಐಗಳಿ​​ಗಾಗಿ ಒಂದು ಪ್ರತ್ಯೇಕ ಇಲಾಖೆ ತೆರೆಯಲು ನಾವು ಸಿದ್ಧ: ಡಿಕೆ ಶಿವಕುಮಾರ್​

ರಾಜ್ಯದಲ್ಲಿ ಉದ್ಯಮಕ್ಕೆ ಪೂರಕ ವಾತಾವರಣವಿದೆ. ಗ್ರೀನ್ ಹೈಡ್ರೋಜನ್ ಕೈಗಾರಿಕೆಗಳ ಸ್ಥಾಪನೆಗೂ ಯೋಜನೆ ಸಿದ್ಧವಾಗಿದೆ. ಟಾಟಾ ಟೆಕ್ ಎಂಎಸ್ಎಂಇ ಸ್ಥಾಪನೆಗಾಗಿ ಸರ್ಕಾರ ಆಸಕ್ತಿ ತೋರಿದೆ. ಟಾಟಾ 70%, ಸರ್ಕಾರ ಶೇ.30ರಷ್ಟು ಬಂಡವಾಳ ಹೂಡಿಕೆ ಮಾಡಲಿದ್ದು, ಇಡೀ ವಿಶ್ವದಲ್ಲೇ ರಫ್ತು ವಿಚಾರದಲ್ಲಿ ಗುರುತಿಸಿಕೊಳ್ಳಲು ಉತ್ಸುಕರಾಗಿದ್ದೇವೆ ಎಂದು ಹೇಳಿದರು.

ಕೈಗಾರಿಕೆ ಬೆಳವಣಿಗೆ ಆಗಬೇಕೆಂಬುದು ಸಚಿವ ಎಂ.ಬಿ.ಪಾಟೀಲ್​​ ಆಸೆ: ಸಿಎಂ ಸಿದ್ಧರಾಮಯ್ಯ

ಸಿಎಂ ಸಿದ್ಧರಾಮಯ್ಯ ಮಾತನಾಡಿ, ಕರ್ನಾಟಕದಲ್ಲಿ ಕೈಗಾರಿಕೆ ಬೆಳೆವಣಿಗೆ ಹೊಂದಬೇಕು ಎಂಬುವುದು ಎಂಬಿ ಪಾಟೀಲ್ ಆಸೆ. ಅವರಿಗೆ ಮತ್ತು ಉದ್ಯಮಿಗಳಿಗೆ ನಮ್ಮ ಬೆಂಬಲ‌ ಸದಾ ಇರುತ್ತೆ. ಕೈಗಾರಿಕೆ ಬೆಳವಣಿಗೆ ಆಗಬೇಕು ಅಂತ ನಾವು ಈ ಹಿಂದೆ ಸಿಎಂ ಆಗಿದ್ದಾಗ ಕೌಶಲ್ಯ ಅಭಿವೃದ್ಧಿ ಇಲಾಖೆಯನ್ನ ಪ್ರಾರಂಭ ಮಾಡಿದೆ. ಈಗ ಮತ್ತೆ ನಾವು ಶಕ್ತಿ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಆಲ್ಕೊಹಾಲಿನ ನಂತರ ಹಾಲಿನ ಬೆಲೆಯನ್ನೂ ಏರಿಸಿದೆ, ಜನರ ಬದುಕೇ ಹಾಲಾಹಲವಾಗಿದೆ -ಕಾಂಗ್ರೆಸ್ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಆಕ್ರೋಶ

ಕೈಗಾರಿಕೆ ಬೆಳೆದರೆ ನಿರುದ್ಯೋಗ ಸಮಸ್ಯೆ ಬಗೆಹರಿಯುತ್ತೆ. ಜಿಡಿಪಿ ಬೆಳೆದರೆ ರಾಜ್ಯ ಬೆಳೆಯುವುದಕ್ಕೆ ಸಹಾಯ ಆಗುತ್ತೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೂಡ ಚೆನ್ನಾಗಿ ಇಟ್ಟಿಕೊಳ್ಳಬೇಕು. ಆಗ ಹೂಡಿಕೆ ಚೆನ್ನಾಗಿ ಬರುತ್ತೆ, ರಾಜ್ಯ ಬೆಳವಣಿಗೆ ಆಗುತ್ತೆ. ಡಿಮ್ಯಾಂಡ್ ಇರುವ ಉದ್ಯಮಗಳನ್ನ ಕಾಂಗ್ರೆಸ್ ಸರ್ಕಾರ ಮಾಡಲಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:23 pm, Sat, 22 July 23

ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?