ಲಿಮ್ಕಾ ದಾಖಲೆ ನಿರ್ಮಿಸಿದ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿನಂದಿಸಿದ ಸದನ

2022ರಲ್ಲಿ ಲಂಡನ್​ನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಬರೆದಿದ್ದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪರಿಷತ್ ಪ್ರವೇಶಿಸಿ ಇಂದಿಗೆ 43 ವರ್ಷ 201 ದಿನಗಳು ಪೂರ್ಣಗೊಳಿಸುವ ಮೂಲಕ ಲಿಮ್ಕಾ ದಾಖಲೆ ಬರೆದಿದ್ದಾರೆ. ಹೀಗಾಗಿ ಇಡೀ ಸದನವೇ ಹೊರಟ್ಟಿ ಅವರನ್ನು ಅಭಿನಂದಿಸಿದೆ.

ಲಿಮ್ಕಾ ದಾಖಲೆ ನಿರ್ಮಿಸಿದ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿನಂದಿಸಿದ ಸದನ
ಲಿಮ್ಕಾ ದಾಖಲೆ ನಿರ್ಮಿಸಿದ ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಅವರನ್ನು ಅಭಿನಂದಿಸಿದ ಸದನ
Follow us
| Updated By: Rakesh Nayak Manchi

Updated on: Feb 13, 2024 | 10:48 PM

ಬೆಂಗಳೂರು, ಫೆ.13: ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸತತವಾಗಿ 8ನೇ ಬಾರಿಗೆ ವಿಧಾನ ಪರಿಷತ್​ಗೆ ಆಯ್ಕೆಯಾದ ಬಸವರಾಜ ಹೊರಟ್ಟಿ (Basavaraj Horatti) ಅವರ ಹೆಸರು ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್​​ಗೆ (Limca Book of World Records) ಸೇರಿರುವ ಹಿನ್ನೆಲೆ ಹೊರಟ್ಟಿ ಅವರನ್ನು ವಿಧಾನಪರಿಷತ್ ಸದಸ್ಯರು ಅಭಿನಂದನೆ ಸಲ್ಲಿಸಿದರು.

ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಮಾತನಾಡಿ, 1980 ರಿಂದ ಹೊರಟ್ಟಿಯವರು ವಿಧಾನ ಪರಿಷತ್ ಸದಸ್ಯರಾಗಿದ್ದು, ಇವತ್ತಿನ ವರೆಗೆ 43 ವರ್ಷಗಳಿಗೂ ಹೆಚ್ಚಿನ ವರ್ಷಗಳು ಒಂದೇ ಕ್ಷೇತ್ರದ ಪ್ರತಿನಿಧಿಯಾಗಿ ಆಯ್ಕೆಗೊಂಡು ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಅವರ ಹೆಸರು ಲಿಮ್ಕಾ ದಾಖಲೆ ಸೇರಿದೆ ಎಂದರು.

ಇದನ್ನೂ ಓದಿ: ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​​​ ಪಟ್ಟಿಯಲ್ಲಿ ಬಸವರಾಜ ಹೊರಟ್ಟಿ: 2024ನೇ ಸಾಲಿನ ವಾರ್ಷಿಕ ಪುಸ್ತಕ ಪ್ರಕಟ

ವಿಧಾನ ಪರಿಷತ್ ಸದಸ್ಯರಾದ ಉಮಾಶ್ರೀ, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ, ಸಚಿವ ಚೆಲುವರಾಯಸ್ವಾಮಿ, ಸಭಾನಾಯಕ ಭೋಸರಾಜು, ಸದನದ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇನ್ನಿತರರು ಸಭಾಪತಿ ಹೊರಟ್ಟಿ ಅವರಿಗೆ ಅಭಿನಂದನೆ ಸಲ್ಲಿಸಿ ಇವರ ಸಾರ್ವಜನಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಅಪ್ರತಿಮ ಸಾಧನೆಯನ್ನು ಶ್ಲಾಘಿಸಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಭಾಪತಿ, ತಮಗೆ ಸಹಕಾರ ನೀಡಿದ ಎಲ್ಲರನ್ನೂ ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು