Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ “ಸಿದ್ದ”: ಬಿಜೆಪಿ ಕಿಡಿ

ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಎಫ್‌ಐಆರ್ ಹಾಕಿರುವುದರಲ್ಲಿ ವಿಶೇಷವಾಗಿ ಇಬ್ಬರು ಕೇರಳ ಮೂಲದ ವ್ಯಕ್ತಿಗಳ ಹೆಸರಿದ್ದು, ಅವರು ಎಸ್‌ಡಿಪಿಐಗೆ ಸೇರಿದವರು ಎಂಬ ಅನುಮಾನವಿದೆ. ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಕರ್ನಾಟಕದ ಶಾಂತಿಯನ್ನು ಕದಡಲು ಸದಾ "ಸಿದ್ದ"ವಾಗಿವೆ. ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ನಾಸೀರ್ ಮತ್ತು ಯೂಸೂಫ್​ಗೆ ಕರ್ನಾಟಕದ ನಾಗಮಂಗಲದಲ್ಲಿ ಏನು ಕೆಲಸ ಎಂದು ಬಿಜೆಪಿ ಪ್ರಶ್ನಿಸಿದೆ.

ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ ಸಿದ್ದ: ಬಿಜೆಪಿ ಕಿಡಿ
ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ "ಸಿದ್ದ": ಬಿಜೆಪಿ ಕಿಡಿ
Follow us
ಗಂಗಾಧರ​ ಬ. ಸಾಬೋಜಿ
|

Updated on: Sep 15, 2024 | 10:03 PM

ಬೆಂಗಳೂರು, ಸೆಪ್ಟೆಂಬರ್​​ 15: ಮಂಡ್ಯ (Mandya Violence) ಜಿಲ್ಲೆಯ ನಾಗಮಂಗಲ ಗಲಭೆ ಹಿಂದೆ ನಿಷೇಧಿತ ಪಿಎಫ್​ಐ ಸಂಘಟನೆ ಕೈವಾಡ ಇದೆ ಎನ್ನಲಾಗುತ್ತಿದೆ. ಅರೆಸ್ಟ್ ಆಗಿರುವ 76 ಆರೋಪಿಗಳ ಪೈಕಿ, A 44ಯೂಸೂಫ್, A 61ನಾಸೀರ್ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ ಕಿಡಿಕಾರಿದೆ. ಸಿಎಂ ಸಿದ್ದರಾಮಯ್ಯ ಅವರೆ, ನಿಮ್ಮ ಓಲೈಕೆ ರಾಜಕಾರಣವನ್ನು ಸ್ವಲ್ಪ ಬದಿಗಿಟ್ಟು, ಕನ್ನಡಿಗರ ಹಿತದೃಷ್ಟಿಯಿಂದ ನಾಗಮಂಗಲ ಗಲಭೆ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಆಗ್ರಹಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಕರ್ನಾಟಕದ ಶಾಂತಿಯನ್ನು ಕದಡಲು ಸದಾ “ಸಿದ್ದ”ವಾಗಿವೆ. ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ನಾಸೀರ್ ಮತ್ತು ಯೂಸೂಫ್​ಗೆ ಕರ್ನಾಟಕದ ನಾಗಮಂಗಲದಲ್ಲಿ ಏನು ಕೆಲಸ ಎಂದು ಪ್ರಶ್ನಿಸಿದೆ.

ಬಿಜೆಪಿ ಟ್ವೀಟ್​ 

ಹಳೇ ಮೈಸೂರು ಭಾಗದಲ್ಲಿ ಕನ್ನಡಿಗರ ನೆಮ್ಮದಿ ಕೆಡಿಸಲು ದೊಡ್ಡದೊಂದು ಷಡ್ಯಂತ್ರ ರೂಪುಗೊಂಡಿರುವುದು ನಾಗಮಂಗಲದಲ್ಲಿ ನಡೆದ ಘಟನೆಯಿಂದ ಸಾಬೀತಾಗಿದೆ. ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿದರೆ ಮಾತ್ರ ಕರ್ನಾಟಕದಲ್ಲಿ ಮುಂದಾಗುವ ಅನಾಹುತಗಳನ್ನು ತಪ್ಪಿಸಬಹುದು ಎಂದು ಹೇಳಿದೆ.

ಇದನ್ನೂ ಓದಿ: ನಾಗಮಂಗಲ ಗಲಭೆಯಲ್ಲಿ ನಿಷೇಧಿತ PFI ಸದಸ್ಯರು ಭಾಗಿ?, ಇನ್ಸ್‌ಪೆಕ್ಟರ್ ಅಮಾನತು

ಸಿಎಂ ಸಿದ್ದರಾಮಯ್ಯ ಅವರೆ, ನಿಮ್ಮ ಓಲೈಕೆ ರಾಜಕಾರಣವನ್ನು ಸ್ವಲ್ಪ ಬದಿಗಿಟ್ಟು, ಕನ್ನಡಿಗರ ಹಿತದೃಷ್ಟಿಯಿಂದ ನಾಗಮಂಗಲ ಗಲಭೆ ಪ್ರಕರಣವನ್ನು ಎನ್ಐಎಗೆ ವಹಿಸಿ ಎಂದು ಬಿಜೆಪಿ ಆಗ್ರಹಿಸಿದೆ.

ಇದನ್ನೂ ಓದಿ: ಅಮಾಯಕರನ್ನು ಬಂಧಿಸಿರುವುದು‌ ನಿಜ, ಚಾರ್ಜ್​ಶೀಟ್​​ನಲ್ಲಿ ‌ಅವರ ಹೆಸರು ಕೈಬಿಡಲು ಸೂಚನೆ: ಚಲುವರಾಯಸ್ವಾಮಿ

ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಎಫ್‌ಐಆರ್ ಹಾಕಿರುವುದರಲ್ಲಿ ವಿಶೇಷವಾಗಿ ಇಬ್ಬರು ಕೇರಳ ಮೂಲದ ವ್ಯಕ್ತಿಗಳ ಹೆಸರಿದ್ದು, ಅವರು ಎಸ್‌ಡಿಪಿಐಗೆ ಸೇರಿದವರು ಎಂಬ ಅನುಮಾನವಿದೆ. ಕೇರಳ ಮೂಲದವರಿಗೆ ನಾಗಮಂಗಲದಲ್ಲಿ ಏನು ಕೆಲಸ? ಇಡೀ ಪ್ರಕರಣವೇ ಪೂರ್ವ ಯೋಜಿತ ಎಂಬ ಶಂಕೆ ಇದರಿಂದ ಸ್ಪಷ್ಟವಾಗುತ್ತದೆ. ಈ ಪ್ರಕರಣವನ್ನು ಸರ್ಕಾರ ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ