AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ “ಸಿದ್ದ”: ಬಿಜೆಪಿ ಕಿಡಿ

ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಎಫ್‌ಐಆರ್ ಹಾಕಿರುವುದರಲ್ಲಿ ವಿಶೇಷವಾಗಿ ಇಬ್ಬರು ಕೇರಳ ಮೂಲದ ವ್ಯಕ್ತಿಗಳ ಹೆಸರಿದ್ದು, ಅವರು ಎಸ್‌ಡಿಪಿಐಗೆ ಸೇರಿದವರು ಎಂಬ ಅನುಮಾನವಿದೆ. ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಕರ್ನಾಟಕದ ಶಾಂತಿಯನ್ನು ಕದಡಲು ಸದಾ "ಸಿದ್ದ"ವಾಗಿವೆ. ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ನಾಸೀರ್ ಮತ್ತು ಯೂಸೂಫ್​ಗೆ ಕರ್ನಾಟಕದ ನಾಗಮಂಗಲದಲ್ಲಿ ಏನು ಕೆಲಸ ಎಂದು ಬಿಜೆಪಿ ಪ್ರಶ್ನಿಸಿದೆ.

ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ ಸಿದ್ದ: ಬಿಜೆಪಿ ಕಿಡಿ
ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ "ಸಿದ್ದ": ಬಿಜೆಪಿ ಕಿಡಿ
ಗಂಗಾಧರ​ ಬ. ಸಾಬೋಜಿ
|

Updated on: Sep 15, 2024 | 10:03 PM

Share

ಬೆಂಗಳೂರು, ಸೆಪ್ಟೆಂಬರ್​​ 15: ಮಂಡ್ಯ (Mandya Violence) ಜಿಲ್ಲೆಯ ನಾಗಮಂಗಲ ಗಲಭೆ ಹಿಂದೆ ನಿಷೇಧಿತ ಪಿಎಫ್​ಐ ಸಂಘಟನೆ ಕೈವಾಡ ಇದೆ ಎನ್ನಲಾಗುತ್ತಿದೆ. ಅರೆಸ್ಟ್ ಆಗಿರುವ 76 ಆರೋಪಿಗಳ ಪೈಕಿ, A 44ಯೂಸೂಫ್, A 61ನಾಸೀರ್ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ ಕಿಡಿಕಾರಿದೆ. ಸಿಎಂ ಸಿದ್ದರಾಮಯ್ಯ ಅವರೆ, ನಿಮ್ಮ ಓಲೈಕೆ ರಾಜಕಾರಣವನ್ನು ಸ್ವಲ್ಪ ಬದಿಗಿಟ್ಟು, ಕನ್ನಡಿಗರ ಹಿತದೃಷ್ಟಿಯಿಂದ ನಾಗಮಂಗಲ ಗಲಭೆ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಆಗ್ರಹಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಕರ್ನಾಟಕದ ಶಾಂತಿಯನ್ನು ಕದಡಲು ಸದಾ “ಸಿದ್ದ”ವಾಗಿವೆ. ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ನಾಸೀರ್ ಮತ್ತು ಯೂಸೂಫ್​ಗೆ ಕರ್ನಾಟಕದ ನಾಗಮಂಗಲದಲ್ಲಿ ಏನು ಕೆಲಸ ಎಂದು ಪ್ರಶ್ನಿಸಿದೆ.

ಬಿಜೆಪಿ ಟ್ವೀಟ್​ 

ಹಳೇ ಮೈಸೂರು ಭಾಗದಲ್ಲಿ ಕನ್ನಡಿಗರ ನೆಮ್ಮದಿ ಕೆಡಿಸಲು ದೊಡ್ಡದೊಂದು ಷಡ್ಯಂತ್ರ ರೂಪುಗೊಂಡಿರುವುದು ನಾಗಮಂಗಲದಲ್ಲಿ ನಡೆದ ಘಟನೆಯಿಂದ ಸಾಬೀತಾಗಿದೆ. ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿದರೆ ಮಾತ್ರ ಕರ್ನಾಟಕದಲ್ಲಿ ಮುಂದಾಗುವ ಅನಾಹುತಗಳನ್ನು ತಪ್ಪಿಸಬಹುದು ಎಂದು ಹೇಳಿದೆ.

ಇದನ್ನೂ ಓದಿ: ನಾಗಮಂಗಲ ಗಲಭೆಯಲ್ಲಿ ನಿಷೇಧಿತ PFI ಸದಸ್ಯರು ಭಾಗಿ?, ಇನ್ಸ್‌ಪೆಕ್ಟರ್ ಅಮಾನತು

ಸಿಎಂ ಸಿದ್ದರಾಮಯ್ಯ ಅವರೆ, ನಿಮ್ಮ ಓಲೈಕೆ ರಾಜಕಾರಣವನ್ನು ಸ್ವಲ್ಪ ಬದಿಗಿಟ್ಟು, ಕನ್ನಡಿಗರ ಹಿತದೃಷ್ಟಿಯಿಂದ ನಾಗಮಂಗಲ ಗಲಭೆ ಪ್ರಕರಣವನ್ನು ಎನ್ಐಎಗೆ ವಹಿಸಿ ಎಂದು ಬಿಜೆಪಿ ಆಗ್ರಹಿಸಿದೆ.

ಇದನ್ನೂ ಓದಿ: ಅಮಾಯಕರನ್ನು ಬಂಧಿಸಿರುವುದು‌ ನಿಜ, ಚಾರ್ಜ್​ಶೀಟ್​​ನಲ್ಲಿ ‌ಅವರ ಹೆಸರು ಕೈಬಿಡಲು ಸೂಚನೆ: ಚಲುವರಾಯಸ್ವಾಮಿ

ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಎಫ್‌ಐಆರ್ ಹಾಕಿರುವುದರಲ್ಲಿ ವಿಶೇಷವಾಗಿ ಇಬ್ಬರು ಕೇರಳ ಮೂಲದ ವ್ಯಕ್ತಿಗಳ ಹೆಸರಿದ್ದು, ಅವರು ಎಸ್‌ಡಿಪಿಐಗೆ ಸೇರಿದವರು ಎಂಬ ಅನುಮಾನವಿದೆ. ಕೇರಳ ಮೂಲದವರಿಗೆ ನಾಗಮಂಗಲದಲ್ಲಿ ಏನು ಕೆಲಸ? ಇಡೀ ಪ್ರಕರಣವೇ ಪೂರ್ವ ಯೋಜಿತ ಎಂಬ ಶಂಕೆ ಇದರಿಂದ ಸ್ಪಷ್ಟವಾಗುತ್ತದೆ. ಈ ಪ್ರಕರಣವನ್ನು ಸರ್ಕಾರ ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು