AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ “ಸಿದ್ದ”: ಬಿಜೆಪಿ ಕಿಡಿ

ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಎಫ್‌ಐಆರ್ ಹಾಕಿರುವುದರಲ್ಲಿ ವಿಶೇಷವಾಗಿ ಇಬ್ಬರು ಕೇರಳ ಮೂಲದ ವ್ಯಕ್ತಿಗಳ ಹೆಸರಿದ್ದು, ಅವರು ಎಸ್‌ಡಿಪಿಐಗೆ ಸೇರಿದವರು ಎಂಬ ಅನುಮಾನವಿದೆ. ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಕರ್ನಾಟಕದ ಶಾಂತಿಯನ್ನು ಕದಡಲು ಸದಾ "ಸಿದ್ದ"ವಾಗಿವೆ. ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ನಾಸೀರ್ ಮತ್ತು ಯೂಸೂಫ್​ಗೆ ಕರ್ನಾಟಕದ ನಾಗಮಂಗಲದಲ್ಲಿ ಏನು ಕೆಲಸ ಎಂದು ಬಿಜೆಪಿ ಪ್ರಶ್ನಿಸಿದೆ.

ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ ಸಿದ್ದ: ಬಿಜೆಪಿ ಕಿಡಿ
ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ "ಸಿದ್ದ": ಬಿಜೆಪಿ ಕಿಡಿ
ಗಂಗಾಧರ​ ಬ. ಸಾಬೋಜಿ
|

Updated on: Sep 15, 2024 | 10:03 PM

Share

ಬೆಂಗಳೂರು, ಸೆಪ್ಟೆಂಬರ್​​ 15: ಮಂಡ್ಯ (Mandya Violence) ಜಿಲ್ಲೆಯ ನಾಗಮಂಗಲ ಗಲಭೆ ಹಿಂದೆ ನಿಷೇಧಿತ ಪಿಎಫ್​ಐ ಸಂಘಟನೆ ಕೈವಾಡ ಇದೆ ಎನ್ನಲಾಗುತ್ತಿದೆ. ಅರೆಸ್ಟ್ ಆಗಿರುವ 76 ಆರೋಪಿಗಳ ಪೈಕಿ, A 44ಯೂಸೂಫ್, A 61ನಾಸೀರ್ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ ಕಿಡಿಕಾರಿದೆ. ಸಿಎಂ ಸಿದ್ದರಾಮಯ್ಯ ಅವರೆ, ನಿಮ್ಮ ಓಲೈಕೆ ರಾಜಕಾರಣವನ್ನು ಸ್ವಲ್ಪ ಬದಿಗಿಟ್ಟು, ಕನ್ನಡಿಗರ ಹಿತದೃಷ್ಟಿಯಿಂದ ನಾಗಮಂಗಲ ಗಲಭೆ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಆಗ್ರಹಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಕರ್ನಾಟಕದ ಶಾಂತಿಯನ್ನು ಕದಡಲು ಸದಾ “ಸಿದ್ದ”ವಾಗಿವೆ. ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ನಾಸೀರ್ ಮತ್ತು ಯೂಸೂಫ್​ಗೆ ಕರ್ನಾಟಕದ ನಾಗಮಂಗಲದಲ್ಲಿ ಏನು ಕೆಲಸ ಎಂದು ಪ್ರಶ್ನಿಸಿದೆ.

ಬಿಜೆಪಿ ಟ್ವೀಟ್​ 

ಹಳೇ ಮೈಸೂರು ಭಾಗದಲ್ಲಿ ಕನ್ನಡಿಗರ ನೆಮ್ಮದಿ ಕೆಡಿಸಲು ದೊಡ್ಡದೊಂದು ಷಡ್ಯಂತ್ರ ರೂಪುಗೊಂಡಿರುವುದು ನಾಗಮಂಗಲದಲ್ಲಿ ನಡೆದ ಘಟನೆಯಿಂದ ಸಾಬೀತಾಗಿದೆ. ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿದರೆ ಮಾತ್ರ ಕರ್ನಾಟಕದಲ್ಲಿ ಮುಂದಾಗುವ ಅನಾಹುತಗಳನ್ನು ತಪ್ಪಿಸಬಹುದು ಎಂದು ಹೇಳಿದೆ.

ಇದನ್ನೂ ಓದಿ: ನಾಗಮಂಗಲ ಗಲಭೆಯಲ್ಲಿ ನಿಷೇಧಿತ PFI ಸದಸ್ಯರು ಭಾಗಿ?, ಇನ್ಸ್‌ಪೆಕ್ಟರ್ ಅಮಾನತು

ಸಿಎಂ ಸಿದ್ದರಾಮಯ್ಯ ಅವರೆ, ನಿಮ್ಮ ಓಲೈಕೆ ರಾಜಕಾರಣವನ್ನು ಸ್ವಲ್ಪ ಬದಿಗಿಟ್ಟು, ಕನ್ನಡಿಗರ ಹಿತದೃಷ್ಟಿಯಿಂದ ನಾಗಮಂಗಲ ಗಲಭೆ ಪ್ರಕರಣವನ್ನು ಎನ್ಐಎಗೆ ವಹಿಸಿ ಎಂದು ಬಿಜೆಪಿ ಆಗ್ರಹಿಸಿದೆ.

ಇದನ್ನೂ ಓದಿ: ಅಮಾಯಕರನ್ನು ಬಂಧಿಸಿರುವುದು‌ ನಿಜ, ಚಾರ್ಜ್​ಶೀಟ್​​ನಲ್ಲಿ ‌ಅವರ ಹೆಸರು ಕೈಬಿಡಲು ಸೂಚನೆ: ಚಲುವರಾಯಸ್ವಾಮಿ

ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಎಫ್‌ಐಆರ್ ಹಾಕಿರುವುದರಲ್ಲಿ ವಿಶೇಷವಾಗಿ ಇಬ್ಬರು ಕೇರಳ ಮೂಲದ ವ್ಯಕ್ತಿಗಳ ಹೆಸರಿದ್ದು, ಅವರು ಎಸ್‌ಡಿಪಿಐಗೆ ಸೇರಿದವರು ಎಂಬ ಅನುಮಾನವಿದೆ. ಕೇರಳ ಮೂಲದವರಿಗೆ ನಾಗಮಂಗಲದಲ್ಲಿ ಏನು ಕೆಲಸ? ಇಡೀ ಪ್ರಕರಣವೇ ಪೂರ್ವ ಯೋಜಿತ ಎಂಬ ಶಂಕೆ ಇದರಿಂದ ಸ್ಪಷ್ಟವಾಗುತ್ತದೆ. ಈ ಪ್ರಕರಣವನ್ನು ಸರ್ಕಾರ ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?