AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ “ಸಿದ್ದ”: ಬಿಜೆಪಿ ಕಿಡಿ

ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಎಫ್‌ಐಆರ್ ಹಾಕಿರುವುದರಲ್ಲಿ ವಿಶೇಷವಾಗಿ ಇಬ್ಬರು ಕೇರಳ ಮೂಲದ ವ್ಯಕ್ತಿಗಳ ಹೆಸರಿದ್ದು, ಅವರು ಎಸ್‌ಡಿಪಿಐಗೆ ಸೇರಿದವರು ಎಂಬ ಅನುಮಾನವಿದೆ. ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಕರ್ನಾಟಕದ ಶಾಂತಿಯನ್ನು ಕದಡಲು ಸದಾ "ಸಿದ್ದ"ವಾಗಿವೆ. ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ನಾಸೀರ್ ಮತ್ತು ಯೂಸೂಫ್​ಗೆ ಕರ್ನಾಟಕದ ನಾಗಮಂಗಲದಲ್ಲಿ ಏನು ಕೆಲಸ ಎಂದು ಬಿಜೆಪಿ ಪ್ರಶ್ನಿಸಿದೆ.

ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ ಸಿದ್ದ: ಬಿಜೆಪಿ ಕಿಡಿ
ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ "ಸಿದ್ದ": ಬಿಜೆಪಿ ಕಿಡಿ
ಗಂಗಾಧರ​ ಬ. ಸಾಬೋಜಿ
|

Updated on: Sep 15, 2024 | 10:03 PM

Share

ಬೆಂಗಳೂರು, ಸೆಪ್ಟೆಂಬರ್​​ 15: ಮಂಡ್ಯ (Mandya Violence) ಜಿಲ್ಲೆಯ ನಾಗಮಂಗಲ ಗಲಭೆ ಹಿಂದೆ ನಿಷೇಧಿತ ಪಿಎಫ್​ಐ ಸಂಘಟನೆ ಕೈವಾಡ ಇದೆ ಎನ್ನಲಾಗುತ್ತಿದೆ. ಅರೆಸ್ಟ್ ಆಗಿರುವ 76 ಆರೋಪಿಗಳ ಪೈಕಿ, A 44ಯೂಸೂಫ್, A 61ನಾಸೀರ್ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ ಕಿಡಿಕಾರಿದೆ. ಸಿಎಂ ಸಿದ್ದರಾಮಯ್ಯ ಅವರೆ, ನಿಮ್ಮ ಓಲೈಕೆ ರಾಜಕಾರಣವನ್ನು ಸ್ವಲ್ಪ ಬದಿಗಿಟ್ಟು, ಕನ್ನಡಿಗರ ಹಿತದೃಷ್ಟಿಯಿಂದ ನಾಗಮಂಗಲ ಗಲಭೆ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಆಗ್ರಹಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಕರ್ನಾಟಕದ ಶಾಂತಿಯನ್ನು ಕದಡಲು ಸದಾ “ಸಿದ್ದ”ವಾಗಿವೆ. ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ನಾಸೀರ್ ಮತ್ತು ಯೂಸೂಫ್​ಗೆ ಕರ್ನಾಟಕದ ನಾಗಮಂಗಲದಲ್ಲಿ ಏನು ಕೆಲಸ ಎಂದು ಪ್ರಶ್ನಿಸಿದೆ.

ಬಿಜೆಪಿ ಟ್ವೀಟ್​ 

ಹಳೇ ಮೈಸೂರು ಭಾಗದಲ್ಲಿ ಕನ್ನಡಿಗರ ನೆಮ್ಮದಿ ಕೆಡಿಸಲು ದೊಡ್ಡದೊಂದು ಷಡ್ಯಂತ್ರ ರೂಪುಗೊಂಡಿರುವುದು ನಾಗಮಂಗಲದಲ್ಲಿ ನಡೆದ ಘಟನೆಯಿಂದ ಸಾಬೀತಾಗಿದೆ. ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿದರೆ ಮಾತ್ರ ಕರ್ನಾಟಕದಲ್ಲಿ ಮುಂದಾಗುವ ಅನಾಹುತಗಳನ್ನು ತಪ್ಪಿಸಬಹುದು ಎಂದು ಹೇಳಿದೆ.

ಇದನ್ನೂ ಓದಿ: ನಾಗಮಂಗಲ ಗಲಭೆಯಲ್ಲಿ ನಿಷೇಧಿತ PFI ಸದಸ್ಯರು ಭಾಗಿ?, ಇನ್ಸ್‌ಪೆಕ್ಟರ್ ಅಮಾನತು

ಸಿಎಂ ಸಿದ್ದರಾಮಯ್ಯ ಅವರೆ, ನಿಮ್ಮ ಓಲೈಕೆ ರಾಜಕಾರಣವನ್ನು ಸ್ವಲ್ಪ ಬದಿಗಿಟ್ಟು, ಕನ್ನಡಿಗರ ಹಿತದೃಷ್ಟಿಯಿಂದ ನಾಗಮಂಗಲ ಗಲಭೆ ಪ್ರಕರಣವನ್ನು ಎನ್ಐಎಗೆ ವಹಿಸಿ ಎಂದು ಬಿಜೆಪಿ ಆಗ್ರಹಿಸಿದೆ.

ಇದನ್ನೂ ಓದಿ: ಅಮಾಯಕರನ್ನು ಬಂಧಿಸಿರುವುದು‌ ನಿಜ, ಚಾರ್ಜ್​ಶೀಟ್​​ನಲ್ಲಿ ‌ಅವರ ಹೆಸರು ಕೈಬಿಡಲು ಸೂಚನೆ: ಚಲುವರಾಯಸ್ವಾಮಿ

ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಎಫ್‌ಐಆರ್ ಹಾಕಿರುವುದರಲ್ಲಿ ವಿಶೇಷವಾಗಿ ಇಬ್ಬರು ಕೇರಳ ಮೂಲದ ವ್ಯಕ್ತಿಗಳ ಹೆಸರಿದ್ದು, ಅವರು ಎಸ್‌ಡಿಪಿಐಗೆ ಸೇರಿದವರು ಎಂಬ ಅನುಮಾನವಿದೆ. ಕೇರಳ ಮೂಲದವರಿಗೆ ನಾಗಮಂಗಲದಲ್ಲಿ ಏನು ಕೆಲಸ? ಇಡೀ ಪ್ರಕರಣವೇ ಪೂರ್ವ ಯೋಜಿತ ಎಂಬ ಶಂಕೆ ಇದರಿಂದ ಸ್ಪಷ್ಟವಾಗುತ್ತದೆ. ಈ ಪ್ರಕರಣವನ್ನು ಸರ್ಕಾರ ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ