ಕೋಟಾ ಶ್ರೀನಿವಾಸ್ ಪೂಜಾರಿಯಿಂದ ತೆರವಾದ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಕೋಟಾ ಶ್ರೀನಿವಾಸ್ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಯ ವಿಧಾನಪರಿಷತ್​ ಉಪ ಚುನಾವಣೆಗೆ ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಕಿಶೋರ್ ಕುಮಾರ್ ಪುತ್ತೂರ್​ಗೆ ಬಿಜೆಪಿ ಹೈಕಮಾಂಡ್​ ಮಣೆ ಹಾಕಿದೆ. ಇದರ ಬೆನ್ನಲ್ಲೇ ಇತ್ತ ಕಾಂಗ್ರೆಸ್​ ಸಹ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಕೋಟಾ ಶ್ರೀನಿವಾಸ್ ಪೂಜಾರಿಯಿಂದ ತೆರವಾದ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
ರಾಜು ಪೂಜಾರಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Oct 02, 2024 | 8:46 PM

ನವದೆಹಲಿ, (ಅಕ್ಟೋಬರ್ 02):  ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ರಾಜು ಪೂಜಾರಿ ಬೈಂದೂರು ಅವರಿಗೆ ಟಿಕೆಟ್ ನೀಡಿ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಈಗಾಗಲೇ ಬಿಜೆಪಿ ಸಹ ತನ್ನ ಅಭ್ಯರ್ಥಿಯನ್ನು ಕಿಶೋರ್ ಕುಮಾರ್ ಪುತ್ತೂರ್​ಗೆ ಟಿಕೆಟ್ ನೀಡಲಾಗಿದ್ದು, ಇದೇ ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಮರು ಚುನಾವಣೆ ಅ.21 ರಂದು ಉಪಚುನಾವಣೆ ನಡೆಯಲಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ: ಕಟೀಲ್​ಗೆ ಶಾಕ್!

ಕೋಟಾ ಶ್ರೀನಿವಾಸ್ ಪೂಜಾರಿ ಅವರು ಉಡುಪಿ ಚಿಕ್ಕಮಗಳೂರು ಲೋಕಾಸಭಾ ಕ್ಷೇತ್ರದಿಂದ ಗೆದ್ದು ಸಂಸತ್​ ಪ್ರವೇಶ ಮಾಡಿದ್ದರಿಂದ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಈ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್​ನಿಂದ ಐವರ ಹೆಸರುಗಳು ಕೇಳಿಬಂದಿದ್ದವು. ಭುಜಂಗ ಶೆಟ್ಟಿ, ಬೈಂದೂರಿನ ರಾಜು ಪೂಜಾರಿ, ಹರಿಪ್ರಸಾದ್ ರೈ, ಡಿ.ಆರ್​.ರಾಜು ಮತ್ತು ಉದಯ್ ಕುಮಾರ್ ಶೆಟ್ಟು ಮುನಿಯಾಲು ಅವರ ಹೆಸರುಗಳು ಕೇಳಿಬಂದಿದ್ದವು. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್​ ರಾಜು ಪೂಜಾರಿ ಅವರಿಗೆ ಮಣೆ ಹಾಕಿದೆ. ರಾಜು ಪೂಜಾರಿ ಬೈಂದೂರು ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದಾರೆ.

ಇದು ದ್ವಿಸದಸ್ಯ ಕ್ಷೇತ್ರವಾಗಿದ್ದು, 2021ರಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್‌ನಿಂದ ಮಂಜುನಾಥ ಭಂಡಾರಿ ಅವರು ಗೆಲುವು ಸಾಧಿಸಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಕೋಟ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಗೆಲುವು ಸಾಧಿಸಿದ ಕಾರಣ ಈಗ ಉಪಚುನಾವಣೆ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆಗೆ ಅ. 3 ಕೊನೆ ದಿನವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Wed, 2 October 24

ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ