AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವಕಲ್ಯಾಣಕ್ಕೆ ಮಲ್ಲಮ್ಮ, ಮಸ್ಕಿಗೆ ಬಸವನಗೌಡ: ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರು ಪ್ರಕಟ

ರಾಜ್ಯದ ಎರಡು ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಗುರುವಾರ ರಾತ್ರಿ ಘೋಷಿಸಲಾಗಿದೆ. ಆದರೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ. 

ಬಸವಕಲ್ಯಾಣಕ್ಕೆ ಮಲ್ಲಮ್ಮ, ಮಸ್ಕಿಗೆ ಬಸವನಗೌಡ: ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರು ಪ್ರಕಟ
ಕಾಂಗ್ರೆಸ್​ ಧ್ವಜ (ಪ್ರಾತಿನಿಧಿಕ ಚಿತ್ರ)
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 18, 2021 | 8:56 PM

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಗುರುವಾರ ರಾತ್ರಿ ಘೋಷಿಸಲಾಗಿದೆ. ಆದರೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ದಿವಂಗತ ಬಿ.ನಾರಾಯಣರಾವ್ ಪತ್ನಿ ಮಲ್ಲಮ್ಮ, ಮಸ್ಕಿ ಕ್ಷೇತ್ರದಲ್ಲಿ ಬಸವನಗೌಡ ತುರವಿಹಾಳಗೆ ಟಿಕೆಟ್ ಘೋಷಿಸಲಾಗಿದೆ. ಸಿಂದಗಿ ಕ್ಷೇತ್ರದ ಉಪ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಆದರೆ ಕಾಂಗ್ರೆಸ್​ ಅಭ್ಯರ್ಥಿಯಾಗಿ ಅಶೋಕ್ ಮನಗೂಳಿಗೆ ಟಿಕೆಟ್‌ ಘೋಷಿಸಿದೆ.

ಏಪ್ರಿಲ್ 17 ರಂದು ಉಪಚುನಾವಣೆಗಳ ಮತದಾನ ನಡೆಯಲಿದೆ. ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಮಾರ್ಚ್ 31 ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 2 ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿತ್ತು. ಕೊರೊನಾ ಸೋಂಕಿಗೆ ತುತ್ತಾಗಿದ್ದ 65 ವರ್ಷದ ಸುರೇಶ್ ಅಂಗಡಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ 10 ದಿನಗಳ ಕಾಲ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆದಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಕಾರಣ ವೆಂಟಿಲೇಟರ್ ತೆಗೆದು ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದರು.

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಜಗದೀಶ್ ಶೆಟ್ಟರ್, ಶ್ರದ್ಧಾ ಶೆಟ್ಟರ್ (ಸುರೇಶ್ ಅಂಗಡಿ ಪುತ್ರಿ), ಡಾ.ಗಿರೀಶ್ ಸೋನವಾಲ್ಕರ್, ಮಹಾಂತೇಶ್ ಕವಟಗಿಮಠ್, ಪ್ರಮೋದ್ ಮುತಾಲಿಕ್, ಮಾಜಿ ಸಂಸದ ರಮೇಶ್ ಕತ್ತಿ, ಡಾ.ರವಿ ಪಾಟೀಲ್, ರಮೇಶ್ ದೇಶಪಾಂಡೆ, ವಕೀಲ ಎಂ.ಬಿ.ಜಿರಲಿ, ಉದ್ಯಮಿ ಮಹಾಂತೇಶ್ ವಕ್ಕುಂದ, ಉಜ್ವಲಾ ಬಡವನಾಚೆ, ದೀಪಾ ಕುಡಚಿ ಆಕಾಂಕ್ಷಿಗಳಾಗಿದ್ದಾರೆ.

ಕಾಂಗ್ರೆಸ್ ಪಾಳಯದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌, ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ, ಚನ್ನರಾಜ ಹಟ್ಟಿಹೊಳಿ (ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ), ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಟಿಕೆಟ್ ಘೋಷಿಸುವ ಸಾಧ್ಯತೆಗಳಿವೆ.

ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯಿಂದ ಶರಣು ಸಲಗಾರ್, ಮಾಜಿ ಶಾಸಕ ಮಲ್ಲಿಕಾರ್ಜುನ್ ಖೂಬಾ, ಬಸವಕಲ್ಯಾಣ ತಾಲೂಕಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಜಿಲ್ಲಾ ಪಂಚಾಯತ್ ಸದಸ್ಯ ಗುಂಡೂರೆಡ್ಡಿ, ಭಾರತೀಯ ಆಹಾರ ನಿಗಮದ ಸದಸ್ಯ ಉಮೇಶ್ ಬಿರಬಿಟ್ಟೆ, ಪ್ರದೀಪ್ ವಾತಡೆ ಆಕಾಂಕ್ಷಿಗಳಾಗಿದ್ದಾರೆ. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ.

ಉಪ ಚುನಾವಣೆ ಘೋಷಣೆಯಾದ ಈ ಹೊತ್ತಲ್ಲಿ ರಾಜ್ಯದಲ್ಲಿ ಸಿಡಿ ರಾಜಕೀಯದ ಧ್ವನಿ ಜೋರಾಗಿದೆ. ಕಾಂಗ್ರೆಸ್​ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಂಗಡಿಗರು ಸಿಡಿ ವಿಷಯ ಇಟ್ಟುಕೊಂಡು ಬಿಜೆಪಿಯ ಅಭ್ಯರ್ಥಿಗಳನ್ನು ಮಣಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವುದು ಈಗಾಗಲೇ ಖಚಿತವಾಗಿದೆ. ಆದರೆ ಬಿಜೆಪಿ ಸಿಡಿ ರಾಜಕೀಯ ಮಾಡಲು ಅವಕಾಶ ನೀಡದೇ, ಕಮಲದ ಧ್ವಜ ಹಾರಿಸುವ ಸಿದ್ಧತೆಯಲ್ಲಿದೆ. ಈ ಕಾರಣಗಳಿಂದ ಬೆಳಗಾವಿ ಲೋಕಸಭಾ ಉಪ ಚುನಾವಣೆ ಕಣ ಅತ್ಯಂತ ರೋಚಕ ಘಟ್ಟದತ್ತ ಮುಖಮಾಡುವುದಂತೂ ಗ್ಯಾರಂಟಿ.

ಉಳಿದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯವಿರುವುದರಿಂದ ಆಡಳಿತಾರೂಢ ಬಿಜೆಪಿಗೆ ಸವಾಲಾಗಿದೆ. ಆದರೂ, ಮೇಲ್ನೋಟಕ್ಕೆ ಜಾತಿ ಸಮೀಕರಣವನ್ನು ಗಮನಿಸಿದರೆ ಬಿಜೆಪಿಗೆ ಸ್ವಲ್ಪ ಮುನ್ನಡೆ ಸಿಗಬಹುದು ಎನ್ನುವ ಅಂದಾಜು ಮಾಡಲಾಗುತ್ತಿದೆ.

ಇದನ್ನೂ ಓದಿ: ವಿಶ್ಲೇಷಣೆ | ಕರ್ನಾಟಕದ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗವು ಘೋಷಿಸಲಿಲ್ಲ ಏಕೆ?

ಇದನ್ನೂ ಓದಿ: ಉಪ ಚುನಾವಣೆಯನ್ನು ದಾಖಲೆ ಮತಗಳ ಅಂತರದಿಂದ ಗೆಲ್ಲುತ್ತೇವೆ: ಬಸವರಾಜ ಬೊಮ್ಮಾಯಿ

Published On - 8:53 pm, Thu, 18 March 21

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ