AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​ 2 ಸಾಂಗ್​ ಬಳಕೆ: ​ ಟ್ವಿಟರ್ ಖಾತೆ​ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಕಾಂಗ್ರೆಸ್

ಅನುಮತಿ ಇಲ್ಲದೆ ಭಾರತ್ ಜೋಡೋಗೆ ಕೆಜಿಎಫ್-2 ಚಿತ್ರದ ಹಾಡು ಬಳಸಿದ್ದ ಕಾಂಗ್ರೆಸ್ ಗೆ ಸಂಕಷ್ಟು ಎದುರಾಗಿದ್ದು, ಇದೀಗ ಈ ವಿಚಾರಕ್ಕೆ ಕಾಂಗ್ರೆಸ್ ಕೋರ್ಟ್ ಮೊರೆ ಹೋಗಿದೆ.

ಕೆಜಿಎಫ್​ 2 ಸಾಂಗ್​ ಬಳಕೆ: ​ ಟ್ವಿಟರ್ ಖಾತೆ​ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಕಾಂಗ್ರೆಸ್
Congress Flag
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Nov 08, 2022 | 4:34 PM

Share

ಬೆಂಗಳೂರು: ಕೆಜಿಎಫ್ 2 (KGF Chapter 2) ಹಾಡಿನ ದುರ್ಬಳಕೆ ಆರೋಪ ಮೇಲೆ . ಕಾಂಗ್ರೆಸ್ ನ ಭಾರತ್ ಜೋಡೋ (Bharat Jodo Yatra) ಟ್ವಿಟ್ಟರ್ (Twitter) ಖಾತೆಗೆ ನಿರ್ಬಂಧಿಸಿ ವಾಣಿಜ್ಯ ನ್ಯಾಯಾಲಯ ಆದೇಶಿಸಿದೆ, ಈ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದೆ.

ತುರ್ತು ವಿಚಾರಣೆಗೆ ಹಿರಿಯ ವಕೀಲ ಎ.ಎಸ್​.ಪೊನ್ನಣ್ಣ ಮನವಿ ಮಾಡಿದ್ದು, ಇದಕ್ಕೆ ಹೈಕೋರ್ಟ್ ಇಂದೇ(ಮಂಗಳವಾರ) ವಿಚಾರಣೆ ನಡೆಸಲು ಒಪ್ಪಿಗೆ ಸೂಚಿಸಿದೆ.

ಕೆಜಿಎಫ್​ 2 ಸಾಂಗ್​ ಬಳಕೆ: ಕಾಂಗ್ರೆಸ್​ ಟ್ವಿಟರ್ ಖಾತೆ​ಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಕೋರ್ಟ್​​ ಆದೇಶ

ಭಾರತ್‌ ಜೋಡೋ ಯಾತ್ರೆಯಲ್ಲಿ ಕೆಜಿಎಫ್‌ ಚಾಪ್ಟರ್‌ 2 ಸಂಗೀತವನ್ನು ಅನುಮತಿ ಇಲ್ಲದೇ ಬಳಸಿರುವುದು ಕಾಂಗ್ರೆಸ್‌ಗೆ (Congress) ಮುಳುವಾಗಿದೆ. ಈ ಬಗ್ಗೆ ವಿಚಾರಣೆ ನಡೆಸಿದ ಬೆಂಗಳೂರಿನ ವಾಣಿಜ್ಯ ನ್ಯಾಯಾಲಯ ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ ಮತ್ತು ಭಾರತ್‌ ಜೋಡೋ ಯಾತ್ರೆಯ ಟ್ವಿಟರ್‌ ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಟ್ವಿಟರ್‌ಗೆ ಆದೇಶಿಸಿತ್ತು.

ಪ್ರಕರಣ ಹಿನ್ನೆಲೆ

ಇತ್ತೀಚೆಗೆ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಗಾಗಿ ಕರ್ನಾಟಕಕ್ಕೆ ಬಂದಿದ್ದರು. ಅವರು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಾಲ್ನಡಿಗೆಯಲ್ಲಿ ಸಾಗಿದ್ದರು. ಈ ವೇಳೆ ರಾಹುಲ್ ಗಾಂಧಿ ಅವರ ಕಾಲ್ನಡಿಗೆಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗಿತ್ತು. ಈ ವಿಡಿಯೋಗೆ ‘ಕೆಜಿಎಫ್ 2’ ಚಿತ್ರದ ಹಿಂದಿ ಗೀತೆ ‘ಸುಲ್ತಾನ್​..’ ಹಾಡನ್ನು ಬಳಕೆ ಮಾಡಲಾಗಿತ್ತು. ಈ ಕಾರಣಕ್ಕೆ ರಾಹುಲ್ ಗಾಂಧಿ ವಿರುದ್ಧ ಈ ಹಾಡಿನ ಹಿಂದಿ ಹಕ್ಕನ್ನು ಹೊಂದಿರುವ ಎಂಆರ್​​ಟಿ ಮ್ಯೂಸಿಕ್​ನವರು ಫೋರ್ಜರಿ ಪ್ರಕರಣ ದಾಖಲು ಮಾಡಿದ್ದರು. ಯಶವಂತಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ರಾಹುಲ್ ಗಾಂಧಿ ಮಾತ್ರವಲ್ಲದೆ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು.

ಈ ಪ್ರಕರಣವನ್ನು ಬೆಂಗಳೂರಿನ ವಾಣಿಜ್ಯ ಕೋರ್ಟ್​ನಲ್ಲಿ ವಿಚಾರಣೆ ಮಾಡಲಾಗಿದೆ. ಈ ವೇಳೆ ದೂರುದಾರರು ನೀಡಿದ ದಾಖಲೆಗಳನ್ನು ಕೋರ್ಟ್​ ಪರಿಗಣಿಸಿದೆ. ಹೀಗಾಗಿ, ನವೆಂಬರ್ 21ರವರೆಗೆ ಕಾಂಗ್ರೆಸ್​ ಟ್ವಿಟರ್ ಖಾತೆಯನ್ನು ನಿರ್ಬಂಧಿಸುವಂತೆ ಕೋರ್ಟ್ ಸೂಚಿಸಿತ್ತು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ