AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಗೆಲುವು: ಆದ್ರೆ ಸಂಭ್ರಮ ಇಲ್ಲ; ಸೂತಕವಷ್ಟೆ

ರಾಮನಗರ ನಗರಸಭೆ ಚುನಾವಣೆಗೆ ಫಲಿತಾಂಶ ಹೊರಬಿದ್ದಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರ ಪಡೆದಿದೆ. ಆದ್ರೆ ವಿಪರ್ಯಾಸವೆಂದರೆ ಗೆಲುವನ್ನು ಸಂಭ್ರಮಿಸಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿ ಕೊರೊನಾಗೆ ಬಲಿಯಾಗಿದ್ದಾರೆ.

ರಾಮನಗರ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಗೆಲುವು: ಆದ್ರೆ ಸಂಭ್ರಮ ಇಲ್ಲ; ಸೂತಕವಷ್ಟೆ
ಚುನಾವಣೆ ಸಮಯದ ದೃಶ್ಯ
ಆಯೇಷಾ ಬಾನು
|

Updated on: Apr 30, 2021 | 2:57 PM

Share

ರಾಮನಗರ: ಗೆಲುವಿನ ಸಂಭ್ರಮದಲ್ಲಿರಬೇಕಿದ್ದ ಮನೆ ಇಂದು ಮಹಾಮಾರಿ ಕೊರೊನಾದಿಂದ ಸೂತಕ ತುಂಬಿದ ಮನೆಯಾಗಿದೆ. ಸಂಭ್ರಮದಲ್ಲಿ ಕುಣಿದು ಕುಪ್ಪಳಿಸಬೇಕಿದ್ದ ಜನ, ಕಣ್ಣೀರಿಡುತ್ತ ಕೊರೊನಾಗೆ ಶಾಪ ಹಾಕಿದ್ದಾರೆ. ಹೌದು ರಾಮನಗರದಲ್ಲಿ ಇಂತಹದೊಂದು ದುರ್ಘಟನೆ ಸಂಭವಿಸಿದೆ.

ಇಂದು ರಾಮನಗರ ನಗರಸಭೆ ಚುನಾವಣೆಗೆ ಫಲಿತಾಂಶ ಹೊರಬಿದ್ದಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರ ಪಡೆದಿದೆ. ಆದ್ರೆ ವಿಪರ್ಯಾಸವೆಂದರೆ ಗೆಲುವನ್ನು ಸಂಭ್ರಮಿಸಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿ ಕೊರೊನಾಗೆ ಬಲಿಯಾಗಿದ್ದಾರೆ. ಹೌದು ಸಂತೋಷ ತುಂಬಿರಬೇಕಿದ್ದ ಮನೆಯಲ್ಲಿ ಇಂದು ಸೂತಕದ ಛಾಯೆ ಆವರಿಸಿದೆ. ಈ ಗೆಲುವನ್ನು ಸಂಭ್ರಮಿಸಬೇಕಿದ್ದ ಅಭ್ಯರ್ಥಿ ಮೃತಪಟ್ಟಿದ್ದಾರೆ. ರಾಮನಗರ 4ನೇ ವಾರ್ಡ್‌ನ ಕಾಂಗ್ರೆಸ್‌ ಅಭ್ಯರ್ಥಿ ಲೀಲಾ ಗೋವಿಂದರಾಜ್‌ ಚುನಾವಣೆಯಲ್ಲಿ ಜಯ ಸಾಧಿಸಿದ್ದರು. ಆದ್ರೆ ನಿನ್ನೆ ಕೊರೊನಾದಿಂದ ಮೃತಪಟ್ಟಿದ್ದಾರೆ.

917 ಮತಗಳನ್ನ ಪಡೆದು 810 ಮತಗಳ ಅಂತರದಿಂದ ಲೀಲಾ ಗೋಂವಿದರಾಜು ಗೆಲವು ಪಡೆದಿದ್ದಾರೆ. ಇವರ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಕೇವಲ 107 ಮತಗಳನ್ನಷ್ಟೆ ಪಡೆದು ಠೇವಣಿ ಕಳೆದುಕೊಂಡಿದ್ದಾರೆ. ಆದ್ರೆ ಈ ಪ್ರಚಂಡ ಗೆಲವು ಅನುಭವಿಸಲು ಅಭ್ಯರ್ಥಿಯೇ ಇಲ್ಲ. ಇನ್ನು ಒಟ್ಟು 31 ವಾರ್ಡುಗಳ ಪೈಕಿ ಕಾಂಗ್ರೆಸ್ 19 ಸ್ಥಾನ ಪಡೆದುಕೊಂಡಿದೆ. ಜೆಡಿಎಸ್ 11 ಸ್ಥಾನ ಗೆದ್ದಿದೆ. ಹಾಗೂ ಒಂದು ವಾರ್ಡ್ನಲ್ಲಿ ಎಸ್ಡಿಪಿಐ ಅಭ್ಯರ್ಥಿ ಗೆದ್ದಿದ್ದಾರೆ. ಆದ್ರೆ ಬಿಜೆಪಿ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: ತಮಿಳು ಚಿತ್ರರಂಗದ ಕಾಮಿಡಿ ನಟ ವಿವೇಕ್ ಅಸ್ಥಿ ಹುಟ್ಟೂರಿನ ಸ್ಮಶಾನದ ಮರಗಳಿಗೆ ಗೊಬ್ಬರವಾಯ್ತು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ