AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕಾಂಗ್ರೆಸ್ ಎದ್ದು ಕುಳಿತಿದೆ, ಬಿಜೆಪಿ ನಾಯಕರನ್ನು ಡಿಕೆ ಶಿವಕುಮಾರ್ ಸಂಪರ್ಕಿಸಿದ್ದಾರೆ; ಯಡಿಯೂರಪ್ಪ

BS Yediyurappa: ಅನೇಕ ಬಿಜೆಪಿ ಮುಖಂಡರನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿರುವುದರಿಂದ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ದಾವಣಗೆರೆಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಎದ್ದು ಕುಳಿತಿದೆ, ಬಿಜೆಪಿ ನಾಯಕರನ್ನು ಡಿಕೆ ಶಿವಕುಮಾರ್ ಸಂಪರ್ಕಿಸಿದ್ದಾರೆ; ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ
TV9 Web
| Edited By: |

Updated on:Sep 19, 2021 | 12:48 PM

Share

ದಾವಣಗೆರೆ: ಮುಂದೆ ನಿರಂತರ ಚುನಾವಣೆಗಳು ಬರುತ್ತಿವೆ. ಪ್ರತಿಪಕ್ಷಗಳನ್ನು ಎಂದಿಗೂ ಹಗುರವಾಗಿ ತೆಗೆದುಕೊಳ್ಳಬೇಡಿ. ವಿರೋಧ ಪಕ್ಷಗಳು ಅವರದೇ ತಂತ್ರಗಾರಿಕೆ ಮಾಡ್ತಿದ್ದಾರೆ. ಅನೇಕ ಬಿಜೆಪಿ ಮುಖಂಡರನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡುತ್ತಿದ್ದಾರೆ. ಹೀಗಾಗಿ, 140 ಸ್ಥಾನಗಳನ್ನು ಗೆಲ್ಲುವ ಪ್ರಾಮಾಣಿಕ ಪ್ರಯತ್ನವನ್ನು ನಾವೆಲ್ಲರೂ ಮಾಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿರುವುದರಿಂದ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ದಾವಣಗೆರೆಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪಕ್ಷದ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ.

ಪಕ್ಷ ಸಂಘಟನೆಗೆ ಯಡಿಯೂರಪ್ಪ ಪ್ರವಾಸಕ್ಕೆ ಒಬ್ಬನೇ ಹೋಗುವ ಪರಿಸ್ಥಿತಿ ಇನ್ನೂ ಬಂದಿಲ್ಲ. ಯಡಿಯೂರಪ್ಪ ಪ್ರವಾಸ ಹೊರಟರೇ ಒಬ್ಬನೇ ಹೋಗ್ತಾನೇನು? ನಾನು ಪ್ರವಾಸ ಹೊರಟರೆ ಶಾಸಕರು, ಸಂಸದರು, ಕಾರ್ಯಕರ್ತರು ಎಲ್ಲರೂ ಬರ್ತಾರೆ. ನಾನು ಒಬ್ಬನೇ ಪ್ರವಾಸ ಹೊರಡುವ ಸ್ಥಿತಿ ಬಂದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿದೆ. ಹೀಗಾಗಿ ನಮ್ಮ ಸಂಘಟನೆ, ಶ್ರಮ, ಪ್ರಾಮಾಣಿಕ ಪ್ರಯತ್ನದ ಅಗತ್ಯವಿದೆ. ನಮಗೆ ಕೇಂದ್ರದ ಲೋಕಸಭಾ ಚುನಾವಣೆ ಕಷ್ಟವಲ್ಲ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿರುವುದರಿಂದ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಮುಖಂಡರನ್ನು ಮಾಜಿ ಸಿಎಂ ಯಡಿಯೂರಪ್ಪ ಎಚ್ಚರಿಸಿದ್ದಾರೆ.

ದಾವಣಗೆರೆಯಲ್ಲಿ ಯಾವತ್ತೇ ಕಾರ್ಯಕ್ರಮ ಮಾಡಿದರೂ 40ರಿಂದ 50 ಸಾವಿರ ಜನರು ಸೇರುತ್ತಿದ್ದರು. ವಿಧಾನಸಭೆಯಲ್ಲಿ ಒಬ್ಬರೇ ಇದ್ದಾಗಲೂ ಹಿಂತಿರುಗಿ ನೋಡಲಿಲ್ಲ. ಜನರ ಸಂಕಷ್ಟಕ್ಕೆ ಸ್ಪಂದಿಸಿದ ಪರಿಣಾಮವಾಗಿ ಇಂದು ನಾವು ಅಧಿಕಾರದಲ್ಲಿ ಇದ್ದೇವೆ. ವಿಶ್ವವೇ ಅಚ್ಚರಿಯಿಂದ ನೋಡುವ ನರೇಂದ್ರ ಮೋದಿ ನಾಯಕತ್ವ ನಮಗೆ ಸಿಕ್ಕಿದ್ದು ನಮ್ಮ ಸೌಭಾಗ್ಯ. ನರೇಂದ್ರ ಮೋದಿ ಯುಗ ಉತ್ಸವ ಕಾರ್ಯಕ್ರಮವನ್ನು ರಾಮದಾಸ್ ಮೈಸೂರಿನಲ್ಲಿ ಅರ್ಥಪೂರ್ಣವಾಗಿ ನಡೆಸಿದ್ದರು. ಇದೇ ತರದ ಕಾರ್ಯಕ್ರಮಗಳನ್ನು ರಾಜ್ಯದ ಉದ್ದಗಲಕ್ಕೂ ನಡೆಸಬೇಕು. ಒಂದು ತಿಂಗಳ ಕಾಲ ನಿರಂತರ ಪ್ರವಾಸ ಮಾಡಿ ಸಂಘಟನೆ ಬಲ ಪಡಿಸಬೇಕು.

ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗದ ಮುಖಂಡರನ್ನು ಬಲಪಡಿಸಬೇಕು. ಪ್ರತಿ ಬೂತ್​ಗಳಲ್ಲಿ 20ರಿಂದ 25 ಮಹಿಳೆಯರ ತಂಡ, ಯುವಮೋರ್ಚಾ ತಂಡ ನಮ್ಮ ಜೊತೆ ಗಟ್ಟಿಯಾಗಿ ನಿಲ್ಲಬೇಕು. ಈಗಿನಿಂದಲೇ ಸಂಘಟನೆ ಮಾಡಲು ಕಾರ್ಯತತ್ಪರರಾಗಬೇಕು. ರಾಜ್ಯದ ಚುನಾವಣೆ ಸುಲಭವಿಲ್ಲ. ಹಾನಗಲ್, ಸಿಂಧಗಿ ಉಪ ಚುನಾವಣೆ ಸುಲಭವಿಲ್ಲ. ಮಂದಿರ ಕೆಡವಿದ ಬಗ್ಗೆ ಚರ್ಚೆ ಆಗ್ತಿದೆ. ಯಾವುದೇ ಕಾರಣಕ್ಕೆ ಮಂದಿರ ಒಡೆಯಲು ಅವಕಾಶ ಕೊಡುವುದಿಲ್ಲ. ಈಗ ಇರುವ ಆದೇಶ ಸರಿ ಇಲ್ಲ ಅಂತ ಸುಪ್ರಿಂ ಕೋರ್ಟ್ ಗೆ ಮೊರೆ ಹೋಗೋದಕ್ಕೂ ತೀರ್ಮಾನ ಮಾಡಿದ್ದೇವೆ. ಕಾರ್ಯಕರ್ತರು ಯಾರೂ ಮನಸ್ಸಿಗೆ ನೋವು ಮಾಡಿಕೊಳ್ಳುವುದು ಬೇಡ. 25 ಎಂಎಲ್​ಸಿ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನ ಗೆಲ್ಲಬೇಕಿದೆ. ಮುಂದಿನ ವರ್ಷ ಚುನಾವಣೆ ವರ್ಷವಾಗಿರುವುದರಿಂದ ಹೆಚ್ಚು ಎಚ್ಚರಿಕೆಯಿಂದ ಇರಬೇಕಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ನಮ್ಮ‌ ಶಾಸಕರನ್ನು ಸಂಪರ್ಕಿಸಲು ಡಿಕೆ ಶಿವಕುಮಾರ್ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಯ ಒಂದಿಬ್ಬರು ಶಾಸಕರನ್ನು ಅವರು ಸಂಪರ್ಕ ಮಾಡಿದ್ದಾರೆ. ಡಿಕೆಶಿ ಈ ರೀತಿಯ ಯಾವುದೇ ಪ್ರಯತ್ನ ಮಾಡಿದರೂ ಯಾರೂ ಬಿಜೆಪಿ ತೊರೆದು ಕಾಂಗ್ರೆಸ್​ಗೆ ಹೋಗುವುದಿಲ್ಲ. ಹಾನಗಲ್, ಸಿಂಧಗಿ ಚುನಾವಣೆ ಸುಲಭವಲ್ಲ. ನಮ್ಮ ಕಾರ್ಯಕರ್ತರು ಕೆಲಸ ಮಾಡಬೇಕೆಂದು ಹೇಳಿದ್ದೇನಷ್ಟೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಇದನ್ನೂ ಓದಿ: ದಾವಣಗೆರೆಯಲ್ಲಿಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ; ಮೂರು ಪ್ರಮುಖ ನಿರ್ಣಯ ಸಾಧ್ಯತೆ

ತೋರಿಕೆಗೆ ಗಾಂಧಿ ಆದರ್ಶವನ್ನಿಟ್ಟುಕೊಂಡಿರುವ ಕಾಂಗ್ರೆಸ್​ನಿಂದ ದೇಶಕ್ಕೆ ದೊಡ್ಡ ಹಾನಿಯಾಗಿದೆ; ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಟೀಕೆ

(Congress Contacting BJP Leaders in Karnataka Dont Neglect our Opposition Party BS Yediyurappa Warning in Davanagere)

Published On - 12:22 pm, Sun, 19 September 21

Follow Us
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ