AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟು ಅಧಿಕಾರ ಪಡೆಯೋದು ಕಾಂಗ್ರೆಸ್ ಸಂಸ್ಕೃತಿ: ಸಚಿವ ಪ್ರಿಯಾಂಕ್ ಖರ್ಗೆ‌ಗೆ ವಿಪಕ್ಷ ನಾಯಕ ಆರ್​. ಅಶೋಕ್ ತಿರುಗೇಟು

ಎಷ್ಟು ಕೊಟ್ಟು ವಿಪಕ್ಷ ನಾಯಕರಾಗಿ ಬಂದ್ರಿ ಎಂಬ ಸಚಿವ ಪ್ರಿಯಾಂಕ್ ಖರ್ಗೆ‌ ಹೇಳಿಕೆಗೆ ವಿಪಕ್ಷ ನಾಯಕ ಆರ್​​ ಅಶೋಕ್​ ತಿರುಗೇಟು ನೀಡಿದ್ದು, ಸಚಿವ ಸ್ಥಾನ ಪಡೆಯಲು ನೀವು ಎಷ್ಟು ಕೊಟ್ಟಿದ್ದೀರಿ. ಕೊಟ್ಟು ಅಧಿಕಾರ ಪಡೆಯೋದು ಕಾಂಗ್ರೆಸ್ ಪಕ್ಷದ ಸಂಸ್ಕೃತಿ. ಕೊಟ್ಟು ಹೋಗುವ ಸಂಸ್ಕೃತಿ ಬಿಜೆಪಿಯದ್ದಲ್ಲ ಎಂದು ಹೇಳಿದ್ದಾರೆ.

ಕೊಟ್ಟು ಅಧಿಕಾರ ಪಡೆಯೋದು ಕಾಂಗ್ರೆಸ್ ಸಂಸ್ಕೃತಿ: ಸಚಿವ ಪ್ರಿಯಾಂಕ್ ಖರ್ಗೆ‌ಗೆ ವಿಪಕ್ಷ ನಾಯಕ ಆರ್​. ಅಶೋಕ್ ತಿರುಗೇಟು
ಸಚಿವ ಪ್ರಿಯಾಂಕ್ ಖರ್ಗೆ‌, ವಿಪಕ್ಷ ನಾಯಕ ಆರ್​​. ಅಶೋಕ್
ಕಿರಣ್​ ಹನಿಯಡ್ಕ
| Edited By: |

Updated on: Nov 18, 2023 | 3:39 PM

Share

ಬೆಂಗಳೂರು, ನವೆಂಬರ್​​​ 18: ಪ್ರಿಯಾಂಕ್ ತಂದೆ ಖರ್ಗೆ ಎಐಸಿಸಿ ಅಧ್ಯಕ್ಷರಾಗಲು ಎಷ್ಟು ಕೊಟ್ಟಿದ್ರು ಪ್ರಿಯಾಂಕ್ ಖರ್ಗೆ‌ (Priyank Kharge) ಸಚಿವ ಸ್ಥಾನ ಪಡೆಯಲು ಎಷ್ಟು ಕೊಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್​​ ಅಶೋಕ್​ ಪ್ರಶ್ನಿಸಿದ್ದಾರೆ. ಎಷ್ಟು ಕೊಟ್ಟು ವಿಪಕ್ಷ ನಾಯಕರಾಗಿ ಬಂದ್ರಿ ಎಂಬ ಸಚಿವ ಪ್ರಿಯಾಂಕ್ ಖರ್ಗೆ‌ ಹೇಳಿಕೆಗೆ ವಿಪಕ್ಷ ನಾಯಕ ಆರ್​​ ಅಶೋಕ್​ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಟ್ಟು ಅಧಿಕಾರ ಪಡೆಯೋದು ಕಾಂಗ್ರೆಸ್ ಪಕ್ಷದ ಸಂಸ್ಕೃತಿ. ಕೊಟ್ಟು ಹೋಗುವ ಸಂಸ್ಕೃತಿ ಬಿಜೆಪಿಯದ್ದಲ್ಲ ಎಂದು ಹೇಳಿದ್ದಾರೆ.

ಸಿಎಂ ಆಗಲು ಸಿದ್ದರಾಮಯ್ಯ ಎಷ್ಟು ಹಣ ಕೊಟ್ಟಿದ್ದಾರೆ? ರಾಜ್ಯದಲ್ಲಿ ಕಡಿಮೆ ಅಂದ್ರೆ, ದೆಹಲಿ ಮಟ್ಟಕ್ಕೆ ಎಷ್ಟು ಕೊಟ್ಟು ಹೋಗಿದ್ದಾರೆ? ಪ್ರಿಯಾಂಕ್‌ ಅವರ ಅಪ್ಪ ಸಾವಿರಾರು ಕೋಟಿ ರೂ. ಕೊಟ್ಟು ಹೋಗಿರಬಹುದು ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಸಿಎಂ ಆಗಿದ್ದಾಗ ವರ್ಗಾವಣೆಗೆ ನಿಖಲ್ ಶಿಫಾರಸು ಮಾಡಿ​ಲ್ಲವೇ? ಪ್ರಿಯಾಂಕ್​ ಆರೋಪ

ಜನ ನಮ್ಮನ್ನು ಗೆಲ್ಲಿಸಿರುವುದು ಸರ್ಕಾರದ ಕಿವಿ ಹಿಂಡಲು. ನಾವು ಕಿವಿ ಹಿಂಡುತ್ತೇವೆ, ಕಿವಿ ಹಿಂಡಿದ್ರೂ ಸರ್ಕಾರ ಕೆಲಸ ಮಾಡಿಲ್ಲ ಅಂದರೆ ಸರ್ಕಾರ ತೆಗೆಯಲು ಯೋಚನೆ ಮಾಡುತ್ತೇವೆ. ನಂತರ ಸರ್ಕಾರ ಬೀಳಿಸುವ ವ್ಯವಸ್ಥೆ ಅವರೇ ಮಾಡಿಕೊಳ್ಳುತ್ತಾರೆ ಎಂದು ಕಿಡಿಕಾರಿದ್ದಾರೆ.

ನಾನು ವಿರೋಧ ಪಕ್ಷದ ನಾಯಕನಾಗಬಾರದಾ? ಕಾಂಗ್ರೆಸ್​ ಆರ್​.ಅಶೋಕ್ ಪ್ರಶ್ನೆ 

ಕನಕಪುರದಲ್ಲಿ ಸೋತವರಿಗೆ ವಿಪಕ್ಷ ಸ್ಥಾನ ಎಂದು ಕಾಂಗ್ರೆಸ್​ ಟ್ವೀಟ್​ಗೆ ವಿಪಕ್ಷ ನಾಯಕ ಆರ್​.ಅಶೋಕ್​ ತಿರುಗೇಟು ನೀಡಿದ್ದು, ನಿಮ್ಮ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋತಿದ್ದಾರಲ್ವೇ? ಅವರನ್ನು ಎಐಸಿಸಿ ಅಧ್ಯಕ್ಷರಾಗಿ ಮಾಡಿದ್ದೀರಲ್ಲಾ. ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತಿದ್ದಾರೆ. ನಾನು ಕನಕಪುರ ಕ್ಷೇತ್ರದಲ್ಲಿ 55 ಸಾವಿರ ಮತಗಳನ್ನು ಪಡೆದಿದ್ದೇನೆ. ಅಂದರೆ ಸಿದ್ದರಾಮಯ್ಯಗಿಂತ 20 ಪಟ್ಟು ನಾನು ಮತ ಪಡೆದಿದ್ದೇನೆ. ನಾನು ವಿರೋಧ ಪಕ್ಷದ ನಾಯಕನಾಗಬಾರದಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರು ಬರಗಾಲ ಎದುರಿಸುತ್ತಿರುವುದಕ್ಕೆ ಇದು ನಿದರ್ಶನ: ವಿಪಕ್ಷ ನಾಯಕರಾಗಿ ಆರ್​.ಅಶೋಕ್​ ಆಯ್ಕೆಗೆ ಕಾಂಗ್ರೆಸ್ ಲೇವಡಿ

ಸ್ಮೃತಿ ಇರಾನಿ ವಿರುದ್ಧ ನಿಮ್ಮ ನಾಯಕ ರಾಹುಲ್ ಸೋತಿಲ್ಲವೇ? ಇಂತಹ ನಾಯಕರನ್ನೆಲ್ಲ ಇಟ್ಟುಕೊಂಡು ನನ್ನನ್ನು ಪ್ರಶ್ನೆ ಮಾಡ್ತೀರಾ? ಸಿದ್ದರಾಮಯ್ಯ ರೀತಿ ನಾನೇನು ಭಯದಿಂದ ಬಾದಾಮಿಗೆ ಓಡಿ ಹೋಗಿಲ್ಲ. ಪಕ್ಷ ಹೇಳಿದ್ದಕ್ಕೆ ನಾನು ಕನಕಪುರ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದು. ಪದ್ಮನಾಭನಗರ ಕ್ಷೇತ್ರದಲ್ಲಿ ನಾನು 7 ಬಾರಿ ಗೆದ್ದಿದ್ದೇನೆ. ಪದ್ಮನಾಭನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಡಿಪಾಸಿಟ್ ಬಂದಿಲ್ಲ. ನಾವು ಗೆದ್ದಿದ್ದೇವೆ, ಅದಕ್ಕಾಗಿ ನಾನು ವಿಪಕ್ಷ ನಾಯಕನಾಗಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ