AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂಗೆ ಶೋಕಾಸ್ ನೋಟಿಸ್​​ ಹುನ್ನಾರ ವಿರುದ್ಧ ಹೋರಾಡಲು ಕಾಂಗ್ರೆಸ್ ತೀರ್ಮಾನ: ವೇಣುಗೋಪಾಲ್​

ಇಂದು ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಚಿವರ ಜೊತೆ ಸಭೆ ಮಾಡಲಾಗಿದೆ. ರಾಜ್ಯದ ಗಂಭೀರ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಪ್ರತಿಕ್ರಿಯಿಸಿದ್ದು, ಸಿಎಂಗೆ ಶೋಕಾಸ್ ನೋಟಿಸ್​​ ಹುನ್ನಾರ ವಿರುದ್ಧ ಹೋರಾಡಲು ಕಾಂಗ್ರೆಸ್ ತೀರ್ಮಾನಿಸಿದೆ ಎಂದು ಹೇಳಿದ್ದಾರೆ.

ಸಿಎಂಗೆ ಶೋಕಾಸ್ ನೋಟಿಸ್​​ ಹುನ್ನಾರ ವಿರುದ್ಧ ಹೋರಾಡಲು ಕಾಂಗ್ರೆಸ್ ತೀರ್ಮಾನ: ವೇಣುಗೋಪಾಲ್​
ಸಿಎಂಗೆ ಶೋಕಾಸ್ ನೋಟಿಸ್​​ ಹುನ್ನಾರ ವಿರುದ್ಧ ಹೋರಾಡಲು ಕಾಂಗ್ರೆಸ್ ತೀರ್ಮಾನ: ವೇಣುಗೋಪಾಲ್​
ಪ್ರಸನ್ನ ಗಾಂವ್ಕರ್​
| Edited By: |

Updated on: Aug 04, 2024 | 7:20 PM

Share

ಬೆಂಗಳೂರು, ಆಗಸ್ಟ್​ 04: ಸಿಎಂ ಸಿದ್ದರಾಮಯ್ಯ (Siddaramaiah) ಶೋಕಾಸ್ ನೋಟಿಸ್ ನೀಡಲು ರಾಜಭವನ ಬಳಸಿಕೊಂಡಿದ್ದಾರೆ. ಈ ಹುನ್ನಾರದ ವಿರುದ್ಧ ಹೋರಾಡಲು ಕಾಂಗ್ರೆಸ್ ತೀರ್ಮಾನಿಸಿದೆ ಎಂದು ಎಐಸಿಸಿ  ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ (KC Venugopal)​ ಹೇಳಿದ್ದಾರೆ. ನಗರದಲ್ಲಿ ಸಿಎಂ ನಿವಾಸ ಕಾವೇರಿಯಲ್ಲಿ ಸಚಿವರ ಜೊತೆ ಸಭೆಯ ಬಳಿಕ ಪ್ರತಿಕ್ರಿಯಿಸಿದ ಅವರು, ರಾಜ್ಯದ ಜನತೆಗೆ ಎಲ್ಲವನ್ನೂ ತಿಳಿಸಿ ಎಂದು ಸಚಿವರಿಗೆ ಸೂಚಿಸಿದ್ದೇವೆ ಎಂದಿದ್ದಾರೆ.

ನಾವು ಭಯ ಪಡುತ್ತಿಲ್ಲ, ನಾವು ಎಲ್ಲವನ್ನೂ ಎದುರಿಸಲು ಸನ್ನದ್ದರಾಗಿದ್ದೇವೆ: ವೇಣುಗೋಪಾಲ್

ಭ್ರಷ್ಟಾಚಾರದ ಬಗ್ಗೆ ಬಿಜೆಪಿ ನಾಯಕರು ಮಾತಾಡುವುದು ದೊಡ್ಡ ಜೋಕ್. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ದ ಎಷ್ಟು ಪ್ರಕರಣಗಳಿಲ್ಲ? ಪ್ರಜ್ವಲ್ ರೇವಣ್ಣ ವಿರುದ್ದ ಎಷ್ಟು ಪ್ರಕರಣಗಳಿಲ್ಲ?  ಇದಕ್ಕಾಗಿಯೇ ಸಿಎಂ ವಿರುದ್ದ ಅವರು ಮಾತಾಡುತ್ತಿದ್ದಾರೆ. ನಾವು ಭಯ ಪಡುತ್ತಿಲ್ಲ, ನಾವು ಎಲ್ಲವನ್ನೂ ಎದುರಿಸಲು ಸನ್ನದ್ದರಾಗಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಿಎಸ್​ಐ ಅನುಮಾನಾಸ್ಪದ ಸಾವು: ಆಡಿಯೋ ಬಗ್ಗೆ ಸ್ನೇಹಿತನ ಸ್ಫೋಟಕ ಹೇಳಿಕೆ

ಬಿಜೆಪಿ ಹುನ್ನಾರದಿಂದಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಬಿದ್ದಿತ್ತು. ಇದೇ ಮಾದರಿಯಲ್ಲಿ ಕರ್ನಾಟಕ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ. ಪ್ರಜ್ವಲ್ ಪ್ರಕರಣದಲ್ಲಿ ಕಾಂಗ್ರೆಸ್​ ವಿರುದ್ಧ ಹುನ್ನಾರ ಆಗಿದ್ದನ್ನು ಗಮನಿಸಬಹುದು. ಅವರವರ ಮಕ್ಕಳ ರಕ್ಷಣೆ ಮಾಡಿಕೊಳ್ಳಲು ಕಾಂಗ್ರೆಸ್ ವಿರುದ್ಧ ಆರೋಪ ಹೊರಿಸಿದರು ಎಂದಿದ್ದಾರೆ.

ಸಿಎಂ ಪ್ರಾಮಾಣಿಕತೆ ಬಗ್ಗೆ ಎಲ್ಲರಿಗೂ ಗೊತ್ತಿದೆ, ಅವರು ಹೊಸಬರಲ್ಲ. ಎಲ್ಲಿ ಶುರು ಮಾಡಿ ಎಲ್ಲಿಗೆ ಬಂದು ತಲುಪಿದ್ದಾರೆ ಅಂತಾ ಗೊತ್ತಿದೆ. ಸಿದ್ದರಾಮಯ್ಯ ಚಾರಿತ್ರ್ಯದ ಬಗ್ಗೆ ಎಲ್ಲರಿಗೂ ಅರಿವಿದೆ. ಬಿಜೆಪಿ, ಜೆಡಿಎಸ್‌ಗೆ ಹಿನ್ನಡೆ ಆಗಬಹುದೆಂದು ಷಡ್ಯಂತ್ರ ಮಾಡಿ ಹುನ್ನಾರ ಮಾಡಲಾಗಿದೆ. ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸಲು ಹೀಗೆ ಪ್ರಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿಎಂ ಆದೇಶಕ್ಕೂ ಇಲ್ಲ ಕಿಮ್ಮತ್ತು, ನಿವೃತ್ತ ಅಧಿಕಾರಿಯನ್ನೇ 2 ವರ್ಷ ಮುಂದುವರಿಸಲು ಜಮೀರ್ ಸೂಚನೆ

ಸಭೆಯಲ್ಲಿ ಸಚಿವ ಎಂಬಿ ಪಾಟೀಲ್, ಸಚಿವ ಕೆಎನ್ ರಾಜಣ್ಣ, ಸಚಿವ ಎಸ್​ಎಸ್ ಮಲ್ಲಿಕಾರ್ಜುನ, ಡಿಸಿಎಂ ಡಿಕೆಶಿವಕುಮಾರ್, ಶರಣಪ್ರಕಾಶ್ ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗ ರೆಡ್ಡಿ, ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಕೆಸಿ ವೇಣುಗೋಪಾಲ್, ಭೈರತಿ ಸುರೇಶ್, ಚೆಲುವರಾಯಸ್ವಾಮಿ, ಹೆಚ್​ಕೆ ಪಾಟೀಲ್ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್