AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ರಚನೆಗೆ ಯೋಗೇಶ್ವರ್ 9 ಕೋಟಿ ಸಾಲ ಮಾಡಿದ್ದರು -ರಮೇಶ್​ ಜಾರಕಿಹೊಳಿ ಅಂದು ಕೊಟ್ಟಿದ್ದ ಹೇಳಿಕೆ ಇಂದು ಕಂಟಕವಾಯ್ತಾ?

ಸಿ.ಪಿ.ಯೋಗೇಶ್ವರ್ 9 ಕೋಟಿ ರೂ. ಸಾಲ ಮಾಡಿದ್ದರು. ಸಿ.ಪಿ.ಯೋಗೇಶ್ವರ್ ಸಾಲ ಮಾಡಿದ್ದರು ಎಂದು ರಮೇಶ್ ಜಾರಕಿಹೊಳಿ ಈ ಹಿಂದೆ ಹೇಳಿದ್ದರು. ಸರ್ಕಾರ ರಚನೆಗೆ ಸಾಲ ಮಾಡಿದ್ದಾಗಿ ರಮೇಶ್ ಹೇಳಿದ್ದರು. ಇದರ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆಯಾದ ಹಿನ್ನೆಲೆಯಲ್ಲಿ ಇಡಿ ಜಂಟಿ ನಿರ್ದೇಶಕರಿಗೆ ಮನೋಹರ್ ದೂರು ನೀಡಿದ್ದಾರೆ.

ಸರ್ಕಾರ ರಚನೆಗೆ ಯೋಗೇಶ್ವರ್ 9 ಕೋಟಿ ಸಾಲ ಮಾಡಿದ್ದರು -ರಮೇಶ್​ ಜಾರಕಿಹೊಳಿ ಅಂದು ಕೊಟ್ಟಿದ್ದ ಹೇಳಿಕೆ ಇಂದು ಕಂಟಕವಾಯ್ತಾ?
ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು
KUSHAL V
| Edited By: ಸಾಧು ಶ್ರೀನಾಥ್​|

Updated on:Mar 23, 2021 | 6:01 PM

Share

ಬೆಂಗಳೂರು: ಹಣದ ವಹಿವಾಟಿನ ಬಗ್ಗೆ ಹೇಳಿಕೆ ನೀಡಿದ್ದ ವಿಚಾರವಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ನೀಡಲಾಗಿದೆ. ಕಾಂಗ್ರೆಸ್ ಮುಖಂಡ ಮನೋಹರ್‌ರಿಂದ ಇಡಿಗೆ ದೂರು ನೀಡಲಾಗಿದೆ. ಶಾಂತಿನಗರದಲ್ಲಿನ ಇಡಿ ಕಚೇರಿಗೆ ಮನೋಹರ್​ ದೂರು ಕೊಟ್ಟಿದ್ದಾರೆ. ಸಚಿವ ಸಿ.ಪಿ.ಯೋಗೇಶ್ವರ್ 9 ಕೋಟಿ ರೂ. ಸಾಲ ಮಾಡಿದ್ದರು. ಸಿ.ಪಿ.ಯೋಗೇಶ್ವರ್ ಸಾಲ ಮಾಡಿದ್ದರು ಎಂದು ರಮೇಶ್ ಜಾರಕಿಹೊಳಿ ಈ ಹಿಂದೆ ಹೇಳಿದ್ದರು. ಸರ್ಕಾರ ರಚನೆಗೆ ಸಾಲ ಮಾಡಿದ್ದಾಗಿ ರಮೇಶ್ ಹೇಳಿದ್ದರು. ಇದರ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆಯಾದ ಹಿನ್ನೆಲೆಯಲ್ಲಿ ಇಡಿ ಜಂಟಿ ನಿರ್ದೇಶಕರಿಗೆ ಮನೋಹರ್ ದೂರು ನೀಡಿದ್ದಾರೆ.

BNG CONGRESS ED COMPLAINT 1

ಶಾಂತಿನಗರದ ಇಡಿ ಕಚೇರಿಗೆ ಆಗಮಿಸಿ ದೂರು ಕೊಟ್ಟ ಕಾಂಗ್ರೆಸ್​ ಸದಸ್ಯರು

ಇತ್ತ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5-20 ಕೋಟಿ ಹಣದ ವಹಿವಾಟು ನಡೆದಿದರುವ ಆರೋಪದಡಿ ಬೆಂಗಳೂರು ಜಿಲ್ಲಾ ಕೇಂದ್ರ ಕಾಂಗ್ರೆಸ್​ನಿಂದ ಇಡಿಗೆ ದೂರು ನೀಡಲಾಗಿದೆ. ಆರೋಪ ಮಾಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಲಾಗಿದೆ. ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ಪುಟ್ಟರಾಜು ದೂರು ಕೊಟ್ಟಿದ್ದಾರೆ.

ದೃಶ್ಯದಲ್ಲಿರುವ ಯುವತಿಗೆ 2 ಫ್ಲ್ಯಾಟ್​ ನೀಡಿರುವುದಾಗಿ ಬಹಿರಂಗವಾಗಿ ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಆದ್ದರಿಂದ, 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿ. ದೂರು ದಾಖಲಿಸಿ ಆರೋಪಿಗಳ ವಿರುದ್ಧ ಕ್ರಮ ಜರುಗಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಕಾಂಗ್ರೆಸ್​ ಘಟಕದಿಂದ ದೂರು ನೀಡಲಾಗಿದೆ.

ಇದನ್ನೂ ಓದಿ: ದಯಮಾಡಿ ರೇಪ್ ಅನ್ನೋ ಶಬ್ದ ಬಳಸಬೇಡಿ.. ನಿಮಗೆ ಶೋಭೆ ತರಲ್ಲ -ಸಿದ್ದರಾಮಯ್ಯಗೆ ಬಾಲಚಂದ್ರ ಜಾರಕಿಹೊಳಿ ಮನವಿ

Published On - 5:51 pm, Tue, 23 March 21

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು