ಬೆಂಗಳೂರು: ಹಣದ ವಹಿವಾಟಿನ ಬಗ್ಗೆ ಹೇಳಿಕೆ ನೀಡಿದ್ದ ವಿಚಾರವಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ನೀಡಲಾಗಿದೆ. ಕಾಂಗ್ರೆಸ್ ಮುಖಂಡ ಮನೋಹರ್ರಿಂದ ಇಡಿಗೆ ದೂರು ನೀಡಲಾಗಿದೆ. ಶಾಂತಿನಗರದಲ್ಲಿನ ಇಡಿ ಕಚೇರಿಗೆ ಮನೋಹರ್ ದೂರು ಕೊಟ್ಟಿದ್ದಾರೆ. ಸಚಿವ ಸಿ.ಪಿ.ಯೋಗೇಶ್ವರ್ 9 ಕೋಟಿ ರೂ. ಸಾಲ ಮಾಡಿದ್ದರು. ಸಿ.ಪಿ.ಯೋಗೇಶ್ವರ್ ಸಾಲ ಮಾಡಿದ್ದರು ಎಂದು ರಮೇಶ್ ಜಾರಕಿಹೊಳಿ ಈ ಹಿಂದೆ ಹೇಳಿದ್ದರು. ಸರ್ಕಾರ ರಚನೆಗೆ ಸಾಲ ಮಾಡಿದ್ದಾಗಿ ರಮೇಶ್ ಹೇಳಿದ್ದರು. ಇದರ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆಯಾದ ಹಿನ್ನೆಲೆಯಲ್ಲಿ ಇಡಿ ಜಂಟಿ ನಿರ್ದೇಶಕರಿಗೆ ಮನೋಹರ್ ದೂರು ನೀಡಿದ್ದಾರೆ.
ಶಾಂತಿನಗರದ ಇಡಿ ಕಚೇರಿಗೆ ಆಗಮಿಸಿ ದೂರು ಕೊಟ್ಟ ಕಾಂಗ್ರೆಸ್ ಸದಸ್ಯರು
ಇತ್ತ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5-20 ಕೋಟಿ ಹಣದ ವಹಿವಾಟು ನಡೆದಿದರುವ ಆರೋಪದಡಿ ಬೆಂಗಳೂರು ಜಿಲ್ಲಾ ಕೇಂದ್ರ ಕಾಂಗ್ರೆಸ್ನಿಂದ ಇಡಿಗೆ ದೂರು ನೀಡಲಾಗಿದೆ. ಆರೋಪ ಮಾಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಲಾಗಿದೆ. ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ಪುಟ್ಟರಾಜು ದೂರು ಕೊಟ್ಟಿದ್ದಾರೆ.
ದೃಶ್ಯದಲ್ಲಿರುವ ಯುವತಿಗೆ 2 ಫ್ಲ್ಯಾಟ್ ನೀಡಿರುವುದಾಗಿ ಬಹಿರಂಗವಾಗಿ ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಆದ್ದರಿಂದ, 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿ. ದೂರು ದಾಖಲಿಸಿ ಆರೋಪಿಗಳ ವಿರುದ್ಧ ಕ್ರಮ ಜರುಗಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಕಾಂಗ್ರೆಸ್ ಘಟಕದಿಂದ ದೂರು ನೀಡಲಾಗಿದೆ.
ಇದನ್ನೂ ಓದಿ: ದಯಮಾಡಿ ರೇಪ್ ಅನ್ನೋ ಶಬ್ದ ಬಳಸಬೇಡಿ.. ನಿಮಗೆ ಶೋಭೆ ತರಲ್ಲ -ಸಿದ್ದರಾಮಯ್ಯಗೆ ಬಾಲಚಂದ್ರ ಜಾರಕಿಹೊಳಿ ಮನವಿ
Published On - 5:51 pm, Tue, 23 March 21