AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗ್ಯತೆ ಇಲ್ಲವೆಂದಾದರೆ ಚುನಾವಣೆಗೆ ಹೋಗುವುದು ವಾಸಿ: ಕೆಎನ್ ರಾಜಣ್ಣ ವಿರುದ್ಧ ಡಿಕೆ ಸುರೇಶ್ ಆಕ್ರೋಶ

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರ ಕರ್ನಾಟಕ ಕಾಂಗ್ರೆಸ್​ನಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಈ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬಿಟ್ಟುಕೊಡಬೇಕೆಂಬ ಸಚಿವ ಕೆಎನ್​ ರಾಜಣ್ಣ ಹೇಳಿಕೆಯಿಂದ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಕೆರಳಿದ್ದಾರೆ. ಅವರು ನೀಡಿರುವ ತಿರುಗೇಟಿನ ವಿವರ ಇಲ್ಲಿದೆ.

ಯೋಗ್ಯತೆ ಇಲ್ಲವೆಂದಾದರೆ ಚುನಾವಣೆಗೆ ಹೋಗುವುದು ವಾಸಿ: ಕೆಎನ್ ರಾಜಣ್ಣ ವಿರುದ್ಧ ಡಿಕೆ ಸುರೇಶ್ ಆಕ್ರೋಶ
ಡಿಕೆ ಸುರೇಶ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on:Jun 29, 2024 | 10:48 AM

Share

ರಾಮನಗರ, ಜೂನ್ 29: ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಬೇಕೆಂಬ ಹೇಳಿಕೆ ವಿಚಾರವಾಗಿ ಸಚಿವ ಕೆಎನ್ ರಾಜಣ್ಣ ವಿರುದ್ಧ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಉತ್ತಮ ಆಡಳಿತ ನಡೆಸಲಿ ಎಂದು ಹೈಕಮಾಂಡ್ ಜವಾಬ್ದಾರಿ ನೀಡಿದೆ. ಅವರಿಗೆ (ಡಿಕೆಶಿಗೆ) ಯೋಗ್ಯತೆ ಇಲ್ಲ ಎನ್ನುವುದಾದರೆ ಚುನಾವಣೆಗೆ ಹೋಗುವುದು ವಾಸಿ. ನಾವೆಲ್ಲರೂ ಚುನಾವಣೆಗೆ ಹೋಗೋಣ ಎಂದಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಜವಾಬ್ದಾರಿ ಕೊಟ್ಟಿರುವುದು ಪಕ್ಷದ ವರಿಷ್ಠರು. ವರಿಷ್ಠರ ಮುಂದೆ ಡಿಕೆ ಶಿವಕುಮಾರ್ ಎಲ್ಲವನ್ನೂ ತಿಳಿಸಿದ್ದಾರೆ. ವರಿಷ್ಠರ ಬಳಿ ನೀಡಿದ ಮಾಹಿತಿ ಬೇರೆಯವರಿಗೆ ತಿಳಿಸಲಾಗಲ್ಲ ಎಂದು ಅವರು ಹೇಳಿದರು.

ಯಾರೂ ಶಾಶ್ವತ ಅಲ್ಲ, ಯಾವ ಹುದ್ದೆ ಕೂಡ ಶಾಶ್ವತ ಅಲ್ಲ. ಹೇಳಿಕೆ ಕೊಡುವವರೂ ಹಿಂದೆ ತಿರುಗಿ ನೋಡಿಕೊಳ್ಳಬೇಕು. ಹಿಂದೆ ತಿರುಗಿ ಅವರ ಬೆನ್ನನ್ನು ನೋಡಿಕೊಳ್ಳಬೇಕಾಗುತ್ತದೆ ಎಂದು ರಾಜಣ್ಣ ವಿರುದ್ಧ ವಾಗ್ದಾಳಿ ನಡೆಸಿದರು.

ಡಿಕೆ ಶಿವಕುಮಾರ್​​​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ಸ್ವಾಮೀಜಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ಸ್ವಾಮೀಜಿಗಳ ಅಭಿಪ್ರಾಯ. ಸ್ವಾಮೀಜಿ ಅವರ ವೈಯಕ್ತಿಕ ಅಭಿಪ್ರಾಯವನ್ನು ತಿಳಿಸಿದ್ದಾರೆ. ಸಿಎಂ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಈಗ ರಾಜ್ಯದ ಸಿಎಂ ಆಗಿ ಸಿದ್ದರಾಮಯ್ಯನವರು ಇದ್ದಾರೆ. ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ. ಸಿಎಂ ಸ್ಥಾನ‌ ಖಾಲಿಯಾದಾಗ ಇದು ಚರ್ಚೆಗೆ ಬರುತ್ತದೆ ಎಂದರು.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ಸಹಕಾರ ಸಚಿವ ಕೆಎನ್ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರಂತೆ!

ಡಿಕೆ ಶಿವಕುಮಾರ್​ರನ್ನು ಯಾರೂ ಟಾರ್ಗೆಟ್‌ ಮಾಡಲು ಆಗಲ್ಲ. ಅವರನ್ನು ಟಾರ್ಗೆಟ್ ಮಾಡುತ್ತೇನೆ ಅಂದರೆ ಅದು ಅವರ ಭ್ರಮೆ. ಡಿಕೆ ಶಿವಕುಮಾರ್ ಅವರದ್ದೇ ವ್ಯಕ್ತಿತ್ವದಲ್ಲಿ ಹೋರಾಟದ ಮಾಡುತ್ತಿದ್ದಾರೆ. 35 ವರ್ಷಗಳ ಸುದೀರ್ಘ ರಾಜಕಾರಣ ಮಾಡಿದ್ದಾರೆ. ಯಾರದ್ದೋ ಹೆಸರಿನಲ್ಲಿ ರಾಜಕೀಯಕ್ಕೆ ಬಂದವರಲ್ಲ. ಹೋರಾಟದ ಮೂಲಕ ರಾಜಕಾರಣ ಮಾಡಿಕೊಂಡು ಬಂದವರು ಎಂದು ರಾಜಣ್ಣಗೆ ಸುರೇಶ್ ಪರೋಕ್ಷ ಟಾಂಗ್ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:40 am, Sat, 29 June 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!