AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಕಾಂಗ್ರೆಸ್ ನಾಯಕರ ಜತೆ ರಣದೀಪ್ ಸುರ್ಜೇವಾಲ ವಿಡಿಯೊ ಸಂವಾದ: ಕೆಪಿಸಿಸಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸಲಹೆ

Randeep Surjewala: ರಾಜ್ಯದಲ್ಲಿ 14 ದಿನಗಳ ಕಾಲ ಬಿಗಿಕ್ರಮ ಜಾರಿ ಹಿನ್ನೆಲೆಯಲ್ಲಿ ಕೆಪಿಸಿಸಿಯಿಂದ ಏನು ಕೆಲಸಗಳಾಗಬೇಕೆಂಬುದರ ಬಗ್ಗೆ ಇಲ್ಲಿ ಮಾತುಕತೆ ನಡೆದಿದ್ದು, ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರ ಜತೆ ರಣದೀಪ್ ಸುರ್ಜೇವಾಲ ವಿಡಿಯೊ ಸಂವಾದ: ಕೆಪಿಸಿಸಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸಲಹೆ
ರಣ​ದೀಪ್ ಸುರ್ಜೇವಾಲಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 27, 2021 | 4:12 PM

Share

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ಜತೆ ಕೆಪಿಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ ವಿಡಿಯೊ ಸಂವಾದ ನಡೆಸಿದ್ದಾರೆ. ಈ ಸಂವಾದದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ. ರಾಜ್ಯದಲ್ಲಿ 14 ದಿನಗಳ ಕಾಲ ಬಿಗಿಕ್ರಮ ಜಾರಿ ಹಿನ್ನೆಲೆಯಲ್ಲಿ ಕೆಪಿಸಿಸಿಯಿಂದ ಏನು ಕೆಲಸಗಳಾಗಬೇಕೆಂಬುದರ ಬಗ್ಗೆ ಇಲ್ಲಿ ಮಾತುಕತೆ ನಡೆದಿದ್ದು, ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.

ಅದೇ ವೇಳೆ ಶವಸಂಸ್ಕಾರಕ್ಕೆ ವಾಹನ ,ಕಟ್ಟಿಗೆ ಸೇರಿ ಅಗತ್ಯ ನೆರವು ಒದಗಿಸುವುದು, ಸಾಧ್ಯವಾದ ಕಡೆ ಬಡವರಿಗೆ ಉಚಿತವಾಗಿ ಆಹಾರ ವಿತರಣೆ ಮಾಡಲಾಗುವುದು. ಇದಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸೇವಾದಳದ ಕಾರ್ಯಕರ್ತರ ಬಳಕೆ ಮಾಡಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ರಾಜ್ಯ ಕಾಂಗ್ರೆಸ್ ನಾಯಕರ ಜತೆ ಸುರ್ಜೇವಾಲ ವಿಡಿಯೊ ಸಂವದ ನಡೆಸಿದ ನಂತರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಕೆಪಿಸಿಸಿ, ನಮಗೆ ಮತ್ತು ಕಾರ್ಯಕರ್ತರಿಗೆ ಸುರ್ಜೇವಾಲ ಸಲಹೆ ನೀಡಿದ್ದಾರೆ. ಕೊವಿಡ್ ವಿರುದ್ಧ ಹೋರಾಟದ ಹೊತ್ತಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸಲಹೆ ನೀಡಿದ್ದಾರೆ. ಅದೇ ವೇಳೆ ಸಾಮಾಜಿಕ ಜಾಲತಾಣಗಳ ಮೂಲಕ ಅರಿವು ಮೂಡಿಸಬೇಕು. ಮುಂಚೂಣಿ ಘಟಕಗಳ ಸಹಕಾರದಿಂದ ಕೆಲಸ ಮಾಡಬೇಕು. ಜಿಲ್ಲಾ ಮಟ್ಟದಲ್ಲೂ ಕೂಡ ಸಹಾಯವಾಣಿ ಆರಂಭಿಸಬೇಕು. ಆಕ್ಸಿಜನ್, ಆಂಬುಲೆನ್ಸ್, ಔಷಧ, ಸೋಂಕಿತರಿಗೆ ಬೆಡ್ ವ್ಯವಸ್ಥೆ ಮಾಡಬೇಕು. ಕೆಪಿಸಿಸಿಯಲ್ಲಿರುವ ವೈದ್ಯರ ಪಟ್ಟಿ ಮಾಡಬೇಕು ಎಂದಿದ್ದಾರೆ.

ಅಷ್ಟೇ ಅಲ್ಲದೆ ಬ್ಲಡ್ ಟೆಸ್ಟ್ ಮಾಡುವ ಕೇಂದ್ರ ತೆರೆಯಲು ಅವರು ಸೂಚಿಸಿದ್ದಾರೆ. ಕಟ್ಟಡ ಕಾರ್ಮಿಕರಿಗೆ ಕೆಲಸಕ್ಕೆ ಸರ್ಕಾರ ಅವಕಾಶ ಕೊಟ್ಟಿದೆ. ಆದರೆ ಬೆಂಗಳೂರು ಸಹವಾಸ ಬೇಡ ಎಂದು ಹೊರಟಿದ್ದಾರೆ. ಗಂಟು ಮೂಟೆ ಸಮೇತ ಜನರು ಬೆಂಗಳೂರಿಂದ ಹೊರಟಿದ್ದಾರೆ. ಐಸೋಲೇಷನ್ನಲ್ಲಿ ಇರುವವರಿಗೆ ಆಹಾರ ವಿತರಿಸಬೇಕು. ಗುಂಪು ಸೇರುವ ಕಡೆ ಕಾಂಗ್ರೆಸ್ ಚಿಹ್ನೆ ಇರುವ ಮಾಸ್ಕ್ ನೀಡಿ. ಕೊರೊನಾದಿಂದ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಎಂದಿದ್ದಾರೆ.

ಕೊರೊನಾ ಲಸಿಕೆ ಬಗ್ಗೆ ಗೊಂದಲ ಬೇಡ, 18 ವರ್ಷ ಮೇಲ್ಪಟ್ಟವರು ಕೂಡಾ 2 ಡೋಸ್ ಲಸಿಕೆ ಪಡೆಯಬೇಕು: ಆರೋಗ್ಯ ಸಚಿವ ಸುಧಾಕರ್

ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲರಿಗೂ ಲಸಿಕೆ ನೀಡುವತ್ತ ಸರಕಾರ ಮುಂದಾಗಿದೆ. ರಾಜ್ಯದಲ್ಲಿ ಕೊವಿಡ್​ ಲಸಿಕೆ ಕೊರತೆ ಇಲ್ಲ. 18 ವರ್ಷ ಮೇಲ್ಪಟ್ಟವರು ಕೂಡಾ 2 ಡೋಸ್​ ಲಸಿಕೆ​ ಪಡೆಯಬೇಕು. ಎಲ್ಲರಿಗೂ ಕೊವಿಡ್​ ಲಸಿಕೆ ನೀಡುವುದನ್ನು ಮುಂದುವರಿಸುತ್ತೇವೆ ಯಾರಿಗೂ ಈ ಬಗ್ಗೆ ಗೊಂದಲ ಬೇಡ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಲಸಿಕೆ ಒಂದೇ ನಮ್ಮ ಜನರನ್ನು ಕಾಪಾಡಲು ಸಾಧ್ಯ. ಕೊರೊನಾ 3ನೇ ಅಲೆಯನ್ನು ತಡೆಯಬೆಕಾದರೆ ಲಸಿಕೆ ಪಡೆಯಬೇಕು. ಕಡ್ಡಾಯವಾಗಿ 2 ಡೋಸ್ ಲಸಿಕೆಯನ್ನು ಪಡೆಯಿರಿ ಎಂದು ರಾಜ್ಯದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕೊವಿಡ್​ ಹಿನ್ನೆಲೆಯಲ್ಲಿ ಕೋಲಾರಕ್ಕೆ 40 ವೆಂಟಿಲೇಟರ್‌ಗಳನ್ನು ನೀಡಲಾಗಿತ್ತು. ಅದರಲ್ಲಿ 20 ವೆಂಟಿಲೇಟರ್‌ಗಳನ್ನು ಮಾತ್ರ ಬಳಸುತ್ತಿದ್ದರು. ಇನ್ನುಳಿದ ವೆಂಟಿಲೇಟರ್ ಬಳಸದಿರುವುದು ಗಮನಕ್ಕೆ ಬಂತು. ಈ ನಿಟ್ಟಿನಲ್ಲಿ ಕೋಲಾರದ ಆಸ್ಪತ್ರೆಗೆ ಭೇಟಿ ನೀಡಿದ್ದೆ. ಈ ಕುರಿತಾಗಿ ಕೋಲಾರ ಜಿಲ್ಲಾ ಸರ್ಜನ್, ಆರ್‌ಎಂಒ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದ್ದೇನೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Siddu Supporters : ಸಿದ್ದರಾಮಯ್ಯ ಅಭಿಮಾನಿಗಳಿಂದ ಇಂದಿರಾ ಕ್ಯಾಂಟೀನ್ ಬಳಿ ಮಾಸ್ಕ್, ಊಟ ವಿತರಣೆ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು