AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವ್ಯಾಪಕ ಬೆಂಬಲ ಸಿಗುತ್ತಿದೆ, ಬಿಜೆಪಿ ಹಣ ಹಂಚಿಕೆ ಮಾಡುತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕಾಂಗ್ರೆಸ್​ಗೆ ವ್ಯಾಪಕ ಬೆಂಬಲ ಸಿಗುತ್ತಿದೆ ಎಂಬ ಕಾರಣಕ್ಕೆ ಬಿಜೆಪಿ ಹಣ ಹಂಚಿಕೆ ಮಾಡಲು ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವ್ಯಾಪಕ ಬೆಂಬಲ ಸಿಗುತ್ತಿದೆ, ಬಿಜೆಪಿ ಹಣ ಹಂಚಿಕೆ ಮಾಡುತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
shruti hegde
| Edited By: |

Updated on: Apr 09, 2021 | 4:31 PM

Share

ಕಲಬುರಗಿ: ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ 3 ಕ್ಷೇತ್ರಗಳ ಉಪಚುನಾವಣೆ ಬಗ್ಗೆ ಬಿಜೆಪಿ ಧೃತಿಗೆಟ್ಟಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವ್ಯಾಪಕ ಬೆಂಬಲ ಸಿಗುತ್ತಿದೆ. ಇದನ್ನು ನೋಡಿ ಬಿಜೆಪಿಯವರು ಹಣ ಹಂಚುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಕೂಡಲೇ ಚುನಾವಣಾ ಆಯೋಗ ಮಧ್ಯಪ್ರವೇಶಿಸಲಿ. ಹಣ ಹಂಚಿಕೆ ವಿಡಿಯೋಗಿಂತ ದೊಡ್ಡ ಸಾಕ್ಷಿ ಬೇಕಾಗಿಲ್ಲ. ನಮ್ಮ ಕಾರ್ಯಕರ್ತರು ಈ ಬಗ್ಗೆ ದೂರು ನೀಡುತ್ತಾರೆ. ಈ ಹಿಂದೆ ನನ್ನ ಮತವನ್ನೇ ಅನರ್ಹ ಮಾಡಿದ್ದರು ಎಂದು ಕಿಡಿಕಾರಿದ್ದಾರೆ. ಈ ಚುನಾವಣೆ ಮುಗಿದ ಮೇಲೆ ಏನಾಗುತ್ತೆಂದು ಗೊತ್ತಿಲ್ಲ. ಆಗ ಈ ಎಲ್ಲಾ ಅಧಿಕಾರಿಗಳು ತೊಂದರೆಗೆ ಸಿಲುಕಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಾರಕೊಡದಲ್ಲಿ ಡಿ.ಕೆ.ಶಿವಕುಮಾರ್ ಪತ್ರಿಕಾಗೋಷ್ಠಿ 30 ಕೋಟಿ ಹಣ ಕೊಟ್ಟು ಬಿಜೆಪಿಯವರು ಎಂಎಲ್​ಎಗಳನ್ನು ಖರೀದಿ ಮಾಡಿದರು. ಆಗ ಬಿ.ನಾರಾಯಣರಾವ್ ಅವರ ಮೇಲೆ ಒತ್ತಡ ಇತ್ತು. ಆದರೆ ಅವರು ಆಪರೇಷನ್ ಕಮಲಕ್ಕೆ ಒಳಗಾಲಿಲ್ಲ. ಬಸವಕಲ್ಯಾಣ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿದರು. ಬಿಜೆಪಿಯವರು ಕಲ್ಯಾಣ ಕರ್ನಾಟಕ ಅಂತಾ ಹೆಸರು ‌ಮಾತ್ರ ಬದಲಾವಣೆ ಮಾಡಿದರು. ಆದರೆ ಈ ಭಾಗದ ಅಭಿವೃದ್ಧಿ ಬಗ್ಗೆ ಅವರು ತೆಲೆಕೆಡಿಸಿಕೊಂಡಿಲ್ಲ. ಸಮಾಜವನ್ನು ಒಡೆಯಲು ಬಿಜೆಪಿ ನಿಂತಿದೆ ಎಂದು ಹೇಳಿದ್ದಾರೆ.

ರಾಯಚೂರಿನಲ್ಲಿ ಮತದಾರರಿಗೆ ಬಿಜೆಪಿಯಿಂದ ಹಣ ಹಂಚಿಕೆ ಆರೋಪ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದಿಂದ ಹಣ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಸ್ಕಿಯಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆಗೆ ಮುಂದಾಗಿದ್ದಾರೆ. ಧ್ರುವನಾರಾಯಣ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆದಿದ್ದು, ಚುನಾವಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ ಮಾಡಲಾಗಿದೆ. ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರನ್ನು ಅನರ್ಹಗೊಳಿಸುವಂತೆ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಬಿಜೆಪಿ ಸರ್ಕಾರ ಅವೈಜ್ಞಾನಿಕ ಕಾನೂನುಗಳನ್ನು ತರುತ್ತಿದೆ; ಎಂ.ಲಕ್ಷ್ಮಣ್ ಅವೈಜ್ಞಾನಿಕವಾದ ಕಾನೂನುಗಳನ್ನ ಬಿಜೆಪಿ ಸರ್ಕಾರ ತರಲು ಪ್ರಯತ್ನಿಸುತ್ತಿದೆ. ಚುನಾವಣೆ ಪ್ರಚಾರಕ್ಕೆ ಸಾವಿರಾರು ಜನ ಸೇರುತ್ತಾರೆ. ಆಗ ಕೊರೊನಾದ ಆತಂಕ ಇರುವುದಿಲ್ಲವೇ? ಜಿಮ್‌ಗಳನ್ನ ಬಂದ್​ ಮಾಡುತ್ತಾರೆ. ಜಿಮ್‌ಗೆ ಹೋದರೆ ಫಿಟ್ನೆಸ್ ಚೆನ್ನಾಗಿರುತ್ತದೆ. ತಲೆಬುಡ ಇರದ ಆದೇಶ ಜಾರಿಗೆ ತರುತ್ತಿದ್ದಾರೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮಸ್ಕಿ ವಿಧಾನಸಭಾ ಉಪಚುನಾವಣೆ; ಪ್ರಚಾರದ ವೇಳೆ ಹಣ ಹಂಚಿಕೆ ಆರೋಪ, ಬಿಜೆಪಿ-ಕಾಂಗ್ರೆಸ್ ನಡುವೆ ಮಾರಾಮಾರಿ

ಕೆಪಿಸಿಸಿ ಕಚೇರಿಯಿಂದಲೇ ಲೈಂಗಿಕ ಸಿಡಿ ಕೇಸ್​ ನಿರ್ವಹಣೆಯಾಗುತ್ತಿದೆ: ಬಿಜೆಪಿ ಟ್ವೀಟ್

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ