AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವ್ಯಾಪಕ ಬೆಂಬಲ ಸಿಗುತ್ತಿದೆ, ಬಿಜೆಪಿ ಹಣ ಹಂಚಿಕೆ ಮಾಡುತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕಾಂಗ್ರೆಸ್​ಗೆ ವ್ಯಾಪಕ ಬೆಂಬಲ ಸಿಗುತ್ತಿದೆ ಎಂಬ ಕಾರಣಕ್ಕೆ ಬಿಜೆಪಿ ಹಣ ಹಂಚಿಕೆ ಮಾಡಲು ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವ್ಯಾಪಕ ಬೆಂಬಲ ಸಿಗುತ್ತಿದೆ, ಬಿಜೆಪಿ ಹಣ ಹಂಚಿಕೆ ಮಾಡುತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
shruti hegde
| Edited By: |

Updated on: Apr 09, 2021 | 4:31 PM

Share

ಕಲಬುರಗಿ: ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ 3 ಕ್ಷೇತ್ರಗಳ ಉಪಚುನಾವಣೆ ಬಗ್ಗೆ ಬಿಜೆಪಿ ಧೃತಿಗೆಟ್ಟಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವ್ಯಾಪಕ ಬೆಂಬಲ ಸಿಗುತ್ತಿದೆ. ಇದನ್ನು ನೋಡಿ ಬಿಜೆಪಿಯವರು ಹಣ ಹಂಚುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಕೂಡಲೇ ಚುನಾವಣಾ ಆಯೋಗ ಮಧ್ಯಪ್ರವೇಶಿಸಲಿ. ಹಣ ಹಂಚಿಕೆ ವಿಡಿಯೋಗಿಂತ ದೊಡ್ಡ ಸಾಕ್ಷಿ ಬೇಕಾಗಿಲ್ಲ. ನಮ್ಮ ಕಾರ್ಯಕರ್ತರು ಈ ಬಗ್ಗೆ ದೂರು ನೀಡುತ್ತಾರೆ. ಈ ಹಿಂದೆ ನನ್ನ ಮತವನ್ನೇ ಅನರ್ಹ ಮಾಡಿದ್ದರು ಎಂದು ಕಿಡಿಕಾರಿದ್ದಾರೆ. ಈ ಚುನಾವಣೆ ಮುಗಿದ ಮೇಲೆ ಏನಾಗುತ್ತೆಂದು ಗೊತ್ತಿಲ್ಲ. ಆಗ ಈ ಎಲ್ಲಾ ಅಧಿಕಾರಿಗಳು ತೊಂದರೆಗೆ ಸಿಲುಕಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಾರಕೊಡದಲ್ಲಿ ಡಿ.ಕೆ.ಶಿವಕುಮಾರ್ ಪತ್ರಿಕಾಗೋಷ್ಠಿ 30 ಕೋಟಿ ಹಣ ಕೊಟ್ಟು ಬಿಜೆಪಿಯವರು ಎಂಎಲ್​ಎಗಳನ್ನು ಖರೀದಿ ಮಾಡಿದರು. ಆಗ ಬಿ.ನಾರಾಯಣರಾವ್ ಅವರ ಮೇಲೆ ಒತ್ತಡ ಇತ್ತು. ಆದರೆ ಅವರು ಆಪರೇಷನ್ ಕಮಲಕ್ಕೆ ಒಳಗಾಲಿಲ್ಲ. ಬಸವಕಲ್ಯಾಣ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿದರು. ಬಿಜೆಪಿಯವರು ಕಲ್ಯಾಣ ಕರ್ನಾಟಕ ಅಂತಾ ಹೆಸರು ‌ಮಾತ್ರ ಬದಲಾವಣೆ ಮಾಡಿದರು. ಆದರೆ ಈ ಭಾಗದ ಅಭಿವೃದ್ಧಿ ಬಗ್ಗೆ ಅವರು ತೆಲೆಕೆಡಿಸಿಕೊಂಡಿಲ್ಲ. ಸಮಾಜವನ್ನು ಒಡೆಯಲು ಬಿಜೆಪಿ ನಿಂತಿದೆ ಎಂದು ಹೇಳಿದ್ದಾರೆ.

ರಾಯಚೂರಿನಲ್ಲಿ ಮತದಾರರಿಗೆ ಬಿಜೆಪಿಯಿಂದ ಹಣ ಹಂಚಿಕೆ ಆರೋಪ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದಿಂದ ಹಣ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಸ್ಕಿಯಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆಗೆ ಮುಂದಾಗಿದ್ದಾರೆ. ಧ್ರುವನಾರಾಯಣ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆದಿದ್ದು, ಚುನಾವಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ ಮಾಡಲಾಗಿದೆ. ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರನ್ನು ಅನರ್ಹಗೊಳಿಸುವಂತೆ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಬಿಜೆಪಿ ಸರ್ಕಾರ ಅವೈಜ್ಞಾನಿಕ ಕಾನೂನುಗಳನ್ನು ತರುತ್ತಿದೆ; ಎಂ.ಲಕ್ಷ್ಮಣ್ ಅವೈಜ್ಞಾನಿಕವಾದ ಕಾನೂನುಗಳನ್ನ ಬಿಜೆಪಿ ಸರ್ಕಾರ ತರಲು ಪ್ರಯತ್ನಿಸುತ್ತಿದೆ. ಚುನಾವಣೆ ಪ್ರಚಾರಕ್ಕೆ ಸಾವಿರಾರು ಜನ ಸೇರುತ್ತಾರೆ. ಆಗ ಕೊರೊನಾದ ಆತಂಕ ಇರುವುದಿಲ್ಲವೇ? ಜಿಮ್‌ಗಳನ್ನ ಬಂದ್​ ಮಾಡುತ್ತಾರೆ. ಜಿಮ್‌ಗೆ ಹೋದರೆ ಫಿಟ್ನೆಸ್ ಚೆನ್ನಾಗಿರುತ್ತದೆ. ತಲೆಬುಡ ಇರದ ಆದೇಶ ಜಾರಿಗೆ ತರುತ್ತಿದ್ದಾರೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮಸ್ಕಿ ವಿಧಾನಸಭಾ ಉಪಚುನಾವಣೆ; ಪ್ರಚಾರದ ವೇಳೆ ಹಣ ಹಂಚಿಕೆ ಆರೋಪ, ಬಿಜೆಪಿ-ಕಾಂಗ್ರೆಸ್ ನಡುವೆ ಮಾರಾಮಾರಿ

ಕೆಪಿಸಿಸಿ ಕಚೇರಿಯಿಂದಲೇ ಲೈಂಗಿಕ ಸಿಡಿ ಕೇಸ್​ ನಿರ್ವಹಣೆಯಾಗುತ್ತಿದೆ: ಬಿಜೆಪಿ ಟ್ವೀಟ್

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್