AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಎಂ ಬದಲಿಸಿದಾಗಲೆಲ್ಲ ಪಕ್ಷಕ್ಕೆ ಡ್ಯಾಮೇಜ್ ಆಗಿದೆ’: ಸಂಪುಟ ವಿಸ್ತರಣೆ ಬೆನ್ನಲ್ಲೇ ಮಾಜಿ ಸಚಿವ ಕೆಎನ್ ರಾಜಣ್ಣ ಅಚ್ಚರಿಯ ಮಾತು

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವೇಳೆ ಜಿಲ್ಲಾವಾರು ಪ್ರಾತಿನಿಧ್ಯ ನೀಡದ ಬಗ್ಗೆ ಮಾಜಿ ಸಚಿವ ಕೆಎನ್ ರಾಜಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಸಿಎಂ ಬದಲಾವಣೆ ಬಗ್ಗೆಯೂ ಮಹತ್ವದ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡಿದಾಗಲೆಲ್ಲ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಅವರು ಹೇಳಿದ್ದಾರೆ.

‘ಸಿಎಂ ಬದಲಿಸಿದಾಗಲೆಲ್ಲ ಪಕ್ಷಕ್ಕೆ ಡ್ಯಾಮೇಜ್ ಆಗಿದೆ’: ಸಂಪುಟ ವಿಸ್ತರಣೆ ಬೆನ್ನಲ್ಲೇ ಮಾಜಿ ಸಚಿವ ಕೆಎನ್ ರಾಜಣ್ಣ ಅಚ್ಚರಿಯ ಮಾತು
ಕೆಎನ್ ರಾಜಣ್ಣ ಹಾಗೂ ಡಿಕೆ ಶಿವಕುಮಾರ್ (ಸಂಗ್ರಹ ಚಿತ್ರ)Image Credit source: tv9
Anil Kalkere
| Edited By: |

Updated on:Aug 04, 2026 | 12:24 PM

Share

ಮುಖ್ಯಾಂಶಗಳು

  • ಸಿಎಂ ಬದಲಾವಣೆ ಕಾಂಗ್ರೆಸ್‌ಗೆ ಡ್ಯಾಮೇಜ್ ಆಗಬಹುದು ಎಂದ ರಾಜಣ್ಣ
  • ಡಿಕೆಶಿ ಒಳ್ಳೆಯ ಸಂಘಟಕ ಎಂದ ರಾಜಣ್ಣ
  • ಜಿಲ್ಲಾವಾರು ಸಚಿವ ಸ್ಥಾನಕ್ಕೆ ರಾಜಣ್ಣ ಆಗ್ರಹ

ಬೆಂಗಳೂರು, ಆಗಸ್ಟ್ 4: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಬೆನ್ನಲ್ಲೇ ಮಾಜಿ ಸಚಿವ ಕೆಎನ್ ರಾಜಣ್ಣ (KN Rajanna) ಮಹತ್ವದ ಮಾತುಗಳನ್ನಾಡಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಗಳನ್ನು ಬದಲಿಸಿದ ಸಂದರ್ಭಗಳಲ್ಲಿ ಪಕ್ಷಗಳಿಗೆ ಆಗಿರುವ ಪರಿಣಾಮ ಎಲ್ಲರಿಗೂ ಗೊತ್ತಿದೆ. ಸಿದ್ದರಾಮಯ್ಯ ಅವರನ್ನು ಬದಲಿಸಿರುವುದು ಕಾಂಗ್ರೆಸ್‌ಗೆ ಡ್ಯಾಮೇಜ್ ಆಗಬಹುದು ಎಂಬರ್ಥದಲ್ಲಿ ಅವರು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ (Siddaramaiah) ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿರುವುದೇ ಈಗಾಗಲೇ ದೊಡ್ಡ ಡ್ಯಾಮೇಜ್. ಈ ಹಿಂದೆ ಮುಖ್ಯಮಂತ್ರಿ ಬದಲಾವಣೆಯಾದ ಸಂದರ್ಭಗಳಲ್ಲಿ ಪಕ್ಷಗಳಿಗೆ ಉಂಟಾದ ಪರಿಣಾಮವನ್ನು ಗಮನಿಸಬೇಕಿದೆ ಎಂದು ರಾಜಣ್ಣ ಹೇಳಿದ್ದಾರೆ.

ಡಿಕೆಶಿ ಒಳ್ಳೆಯ ಸಂಘಟಕ: ರಾಜಣ್ಣ

ಸಿಎಂ ಡಿಕೆ ಶಿವಕುಮಾರ್ ಅವರ ಕಾರ್ಯವೈಖರಿಯ ಬಗ್ಗೆಯೂ ರಾಜಣ್ಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಒಳ್ಳೆಯ ಸಂಘಟಕ. ಯಾವ ಸಂದರ್ಭದಲ್ಲಿ ಏನು ಮಾಡಬೇಕೋ ಅದನ್ನು ಅವರು ಮಾಡುತ್ತಾರೆ. ಅದನ್ನು ನಾನು ಮ್ಯಾನಿಪ್ಯುಲೇಷನ್ ಎಂದು ಹೇಳುವುದಿಲ್ಲ ಎಂದು ರಾಜಣ್ಣ ಹೇಳಿದ್ದಾರೆ.

ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ರಾಜೀನಾಮೆ ನೀಡಿದರೆ ಅದನ್ನು ಅಂಗೀಕರಿಸುವಂತೆ ಹೈಕಮಾಂಡ್ ಸೂಚನೆ ನೀಡಿರುವ ವಿಚಾರಕ್ಕೂ ಅವರು ಪ್ರತಿಕ್ರಿಯಿಸಿದ್ದಾರೆ. ಹೈಕಮಾಂಡ್ ಅಂತಹ ಸೂಚನೆ ನೀಡಿದ್ದರೆ, ಅದರಂತೆ ಮುಖ್ಯಮಂತ್ರಿ ನಡೆದುಕೊಳ್ಳಬೇಕು. ಹೈಕಮಾಂಡ್‌ನ ತೀರ್ಮಾನವನ್ನು ನಾವು ಪ್ರಶ್ನಿಸಲು ಸಾಧ್ಯವೇ ಎಂದು ರಾಜಣ್ಣ ಹೇಳಿದ್ದಾರೆ.

ಜಿಲ್ಲಾವಾರು ಸಚಿವ ಸ್ಥಾನ ನೀಡದಿರುವುದಕ್ಕೆ ಅಸಮಾಧಾನ

ಸಚಿವ ಸಂಪುಟ ವಿಸ್ತರಣೆಯಲ್ಲಿ ಜಿಲ್ಲಾವಾರು ಪ್ರಾತಿನಿಧ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿತ್ತು ಎಂದು ರಾಜಣ್ಣ ಹೇಳಿದ್ದಾರೆ. ಕೋಲಾರ ಜಿಲ್ಲೆಗೆ ಯಾರಿಗೂ ಸಚಿವ ಸ್ಥಾನ ನೀಡಲಾಗಿಲ್ಲ. ಕೆಲವು ಜಿಲ್ಲೆಗಳಿಗೂ ಪ್ರಾತಿನಿಧ್ಯ ಸಿಕ್ಕಿಲ್ಲ. ಇದರಿಂದ ಆ ಜಿಲ್ಲೆಗಳ ಅಭಿವೃದ್ಧಿ ಹಾಗೂ ಆಡಳಿತದ ಮೇಲೂ ಪರಿಣಾಮ ಬೀರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಒಂದು ಜಿಲ್ಲೆಯ ಸಚಿವರಿಗೆ ಮತ್ತೊಂದು ಜಿಲ್ಲೆಯ ಉಸ್ತುವಾರಿ ನೀಡುವುದಕ್ಕಿಂತ, ಸಾಧ್ಯವಾದಷ್ಟು ಜಿಲ್ಲಾವಾರು ಪ್ರಾತಿನಿಧ್ಯ ನೀಡುವುದು ಉತ್ತಮ. ಸಂಪುಟದಲ್ಲಿ ಸಂಪೂರ್ಣ ಸಮಾಧಾನ ತರುವಂತಹ ರಚನೆ ಯಾರಿಗೂ ಸಾಧ್ಯವಿಲ್ಲ. ಆದರೆ ಜಿಲ್ಲಾವಾರು ಅಸಮತೋಲನ ಮಾಡಬಾರದು ಎಂದು ರಾಜಣ್ಣ ಹೇಳಿದ್ದಾರೆ.

ಸಿದ್ದರಾಮಯ್ಯ ಪ್ರಮಾಣವಚನಕ್ಕೆ ಗೈರಾಗಿದ್ದರ ಬಗ್ಗೆಯೂ ಪ್ರತಿಕ್ರಿಯಿಸಿದ ರಾಜಣ್ಣ, ಅವರು ಉದ್ದೇಶಪೂರ್ವಕವಾಗಿ ಗೈರಾಗಿದ್ದಾರೆಯೇ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ತಡವಾದರೂ ಕೊನೆಗೂ ನಡೆದಿದೆ. ನೂತನ ಸಚಿವರಿಗೆ ಅಭಿನಂದನೆಗಳು. ರಾಜ್ಯದಲ್ಲಿನ ಬರ ಪರಿಸ್ಥಿತಿ ಎದುರಿಸಲು ಎಲ್ಲರೂ ಸಕ್ರಿಯವಾಗಿ ಕೆಲಸ ಮಾಡಬೇಕು ಎಂದು ರಾಜಣ್ಣ ಹೇಳಿದ್ದಾರೆ.

ನಾನು ಸಚಿವ ಸ್ಥಾನ ಕೇಳಿರಲಿಲ್ಲ: ರಾಜಣ್ಣ

ತಮಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, ನಾನು ಮೊದಲಿನಿಂದಲೂ ಸಚಿವ ಸ್ಥಾನ ಕೇಳಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಚಿವರ ಪಟ್ಟಿಯಲ್ಲಿ ಗೊಂದಲವಾಗಿದ್ದು, ಮೂರು ಬಾರಿ ಪಟ್ಟಿಯನ್ನು ತಿದ್ದುಪಡಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಲಾರ–ಚಿಕ್ಕಬಳ್ಳಾಪುರ ಶಾಸಕರ ಪ್ರತ್ಯೇಕ ಸಭೆ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ, ಮುಂದಿನ ನಡೆ ಬಗ್ಗೆ ಚರ್ಚೆ

ಸಚಿವ ಸ್ಥಾನ ವಂಚಿತರಾದ ಶಾಸಕರು ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿರುವುದು ಸಹಜ. ಆದರೆ ಅಸಮಾಧಾನ ಅಥವಾ ಬಂಡಾಯ ಪಕ್ಷದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಎಲ್ಲರೂ ಪಕ್ಷದ ಹಿತದೃಷ್ಟಿಯಿಂದ ನಡೆದುಕೊಳ್ಳಬೇಕು ಎಂಬ ಸಂದೇಶವನ್ನೂ ರಾಜಣ್ಣ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:16 pm, Tue, 4 August 26

Follow Us
ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ!
ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು