AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದೆ ಹೀಗೆ ಆದರೆ ಸಹಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ಬಳಿ ಹೈಕಮಾಂಡ್ ಖಡಕ್ ಸಂದೇಶ

ಶಾಸಕರ ಬಹಿರಂಗ ಅಸಮಾಧಾನಕರ ಹೇಳಿಕೆಗಳ ಬಗ್ಗೆ ಕಠಿಣ ನಿಲುವು ತಳೆಯಬೇಕಾಗಿ ಬರಬಹುದು ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ. ಬಹಿರಂಗ ಹೇಳಿಕೆ ನೀಡುವವರನ್ನು ಕರೆದು ಎಚ್ಚರಿಕೆ ನೀಡಿ. ಇಲ್ಲವಾದರೆ ಮುಂದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ದೆಹಲಿ ಭೇಟಿಯಲ್ಲಿರುವ ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ.

ಮುಂದೆ ಹೀಗೆ ಆದರೆ ಸಹಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ಬಳಿ ಹೈಕಮಾಂಡ್ ಖಡಕ್ ಸಂದೇಶ
ಸಿಎಂ ಸಿದ್ದರಾಮಯ್ಯ
ಪ್ರಮೋದ್​ ಶಾಸ್ತ್ರಿ ಜಿ.
| Edited By: |

Updated on: Jun 25, 2025 | 12:35 PM

Share

ಬೆಂಗಳೂರು, ಜೂನ್ 25: ‘ಮುಂದೆ ಹೀಗೆ ಆದರೆ ಸಹಿಸಲು ಸಾಧ್ಯವಿಲ್ಲ. ಕರೆದು ಮಾತನಾಡಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaih) ಕಾಂಗ್ರೆಸ್ ಹೈಕಮಾಂಡ್ (Congress High Command) ಖಡಕ್ ಸಂದೇಶ ರವಾನಿಸಿದೆ ಎಂಬುದು ತಿಳಿದುಬಂದಿದೆ. ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇದೇ ವೇಳೆ, ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಹಾಗೂ ಇತರರು ನೀಡಿರುವ ಬಹಿರಂಗ ಹೇಳಿಕೆಗಳ ಬಗ್ಗೆ ಚರ್ಚೆ ನಡೆದಿದೆ.

ಬಿಆರ್ ಪಾಟೀಲ್ ಎರಡನೇ ಬಾರಿ ಈ ರೀತಿಯಾದ ಹೇಳಿಕೆ ನೀಡಿದ್ದಾರೆ. ಅವರನ್ನು ಕರೆದು ಮಾತನಾಡಿ. ಮುಂದೆ ಇದೇ ರೀತಿ ಆದರೆ ಸಹಿಸಲು ಸಾಧ್ಯವಿಲ್ಲ. ಇನ್ನೊಮ್ಮೆ ಬಹಿರಂಗ ಹೇಳಿಕೆ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಸಿದ್ದರಾಮಯ್ಯನವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು​ ದೆಹಲಿಯ ಲೋದಿ ಎಸ್ಟೇಟ್​ನಲ್ಲಿರುವ ನಿವಾಸದಲ್ಲಿ ಭೇಟಿಯಾದರು. ಸಿಎಂಗೆ ಸಚಿವ ಮಹದೇವಪ್ಪ, ಶಾಸಕ ಅಶೋಕ್​ ಪಟ್ಟಣ್​ ಸಾಥ್​ ನೀಡಿದರು. ಶಾಸಕರ ಅಸಮಾಧಾನ ಸೇರಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಿತು.

ಇದನ್ನೂ ಓದಿ
Image
ತೆರಿಗೆ ಹಂಚಿಕೆ ಅಸಮತೋಲನ ಪರಿಶೀಲಿಸುವ ಭರವಸೆ ದೊರೆತಿದೆ: ಸಿಎಂ ಸಿದ್ದರಾಮಯ್ಯ
Image
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
Image
ಕಲಬುರಗಿ: ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ
Image
ಹಲವೆಡೆ ಮಳೆ ಅಬ್ಬರ: ಇಂದು ಎಲ್ಲೆಲ್ಲಿ ಶಾಲೆ ಕಾಲೇಜು ರಜೆ? ಇಲ್ಲಿದೆ ಮಾಹಿತಿ

ಮುಂದಿನ ವಾರ ಬೆಂಗಳೂರಿಗೆ ಸುರ್ಜೇವಾಲ

ಸರ್ಕಾರ ಬಗ್ಗೆ ಕಾಂಗ್ರೆಸ್​ ಶಾಸಕರಿಂದ ಬಹಿರಂಗ ಹೇಳಿಕೆ ವಿಚಾರವಾಗಿ ಚರ್ಚಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮುಂದಿನ ವಾರ ಬೆಂಗಳೂರಿಗೆ ಬರಲಿದ್ದಾರೆ. ರಾಜ್ಯ ನಾಯಕರ ಜತೆ ಸಭೆ ನಡೆಸುವ ರಣದೀಪ್ ಸುರ್ಜೇವಾಲ ಪಕ್ಷದ ಪದಾಧಿಕಾರಿಗಳು, ಮಂತ್ರಿಗಳ ಜತೆ ಪ್ರತ್ಯೇಕ ಸಭೆ ನಡೆಸುವ ಸಾಧ್ಯತೆ ಇದೆ. ಕಾಂಗ್ರೆಸ್ ಶಾಸಕರ ಬಹಿರಂಗ ಹೇಳಿಕೆಗೆ ಬ್ರೇಕ್ ಹಾಕಲು ಸೂಚನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಂಎಲ್​ಸಿ ಪಟ್ಟಿಯಲ್ಲಿ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಚರ್ಚೆ

ಎಂಎಲ್​ಸಿಗಳ ಪಟ್ಟಿಯಲ್ಲಿ ಹೆಸರು ಬದಲಾವಣೆ ಬಗ್ಗೆಯೂ ಹೈಕಾಂಡ್ ನಾಯಕರ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಾಲ್ಕರಲ್ಲಿ ಒಂದು ಹೆಸರು ಕೈ ಬಿಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ರಮೇಶ್ ಬಾಬು ಅಥವಾ ದಿನೇಶ್ ಅಮಿನ್ ಮಟ್ಟು ಹೆಸರು ಕೈ ಬಿಡುವ ಪ್ರಸ್ತಾಪವಿದೆ ಎನ್ನಲಾಗಿದೆ.

ಇದನ್ನೂ ಓದಿ: ವಸತಿ ಯೋಜನೆಯಲ್ಲಿ ಲಂಚಾವತಾರದ ಬಿ.ಆರ್ ಪಾಟೀಲ್ ಆಡಿಯೋ ಲೋಕಾಯುಕ್ತ ಅಂಗಳಕ್ಕೆ

ಎಂಎಲ್​ಸಿಗಳ ಪಟ್ಟಿಯಲ್ಲಿ ನೂತನ ಹೆಸರು ಸೇರ್ಪಡೆಗೊಳಿಸಿ ಶೀಘ್ರದಲ್ಲೇ ಪಟ್ಟಿ ರವಾನೆ ಮಾಡುವ ನಿರೀಕ್ಷೆ ಇದೆ. ಈ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ