AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಜನಾಂದೋಲನ, ಬಿಜೆಪಿ-ಜೆಡಿಎಸ್ ಸಮಾವೇಶ: ಅಪರೂಪದ ರಾಜಕೀಯ ವಿದ್ಯಮಾನಕ್ಕೆ ಸಾಕ್ಷಿಯಾದ ಮೈಸೂರು

ರಾಜ್ಯ ರಾಜಕಾರಣದಲ್ಲಿ ಮೈಸೂರು ಚಲೋ Vs ಜನಾಂದೋಲ ಸಮರ ಜೋರಾಗಿದೆ. ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ ಸಮರ ಸಾರಿರುವ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಆ. 10ರಂದು ಸಮಾರೋಪ ಮಾಡಲು ನಿರ್ಧರಿಸಿದರೆ, ನಾಳೆ ಕಾಂಗ್ರೆಸ್​ ಜನಾಂದೋಲ ಸಮಾರೋಪ ನಡೆಯಲಿದೆ. ಇಂತಹ ರಾಜಕೀಯ ವಿದ್ಯಮಾನಕ್ಕೆ ಮೈಸೂರು ಸಾಕ್ಷಿಯಾಗುತ್ತಿದೆ.

ಕಾಂಗ್ರೆಸ್​ ಜನಾಂದೋಲನ, ಬಿಜೆಪಿ-ಜೆಡಿಎಸ್ ಸಮಾವೇಶ: ಅಪರೂಪದ ರಾಜಕೀಯ ವಿದ್ಯಮಾನಕ್ಕೆ ಸಾಕ್ಷಿಯಾದ ಮೈಸೂರು
ಕಾಂಗ್ರೆಸ್​ ಜನಾಂದೋಲನ, ಬಿಜೆಪಿ-ಜೆಡಿಎಸ್ ಸಮಾವೇಶ: ಅಪರೂಪದ ರಾಜಕೀಯ ವಿದ್ಯಮಾನಕ್ಕೆ ಸಾಕ್ಷಿಯಾದ ಮೈಸೂರು
ದಿಲೀಪ್​, ಚೌಡಹಳ್ಳಿ
| Edited By: |

Updated on: Aug 08, 2024 | 8:23 PM

Share

ಮೈಸೂರು, ಆಗಸ್ಟ್​ 08: ರಾಜ್ಯ ರಾಜಕಾರಣದಲ್ಲಿ ಹಗರಣಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿವೆ. ಅದರಲ್ಲೂ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ರಾಜಪಾಲರಿಂದ ಶೋಕಾಸ್​ ನೋಟಿಸ್​ ನೀಡಿದ್ದು ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಮುಡಾ ಸೈಟ್​ ಹಂಚಿಕೆಯಲ್ಲಿ ಅಕ್ರಮ ಆಗಿದೆ ಅನ್ನೋದನ್ನೇ ಅಸ್ತ್ರವನ್ನಾಗಿಟ್ಟುಕೊಂಡಿರುವ ಬಿಜೆಪಿ-ಜೆಡಿಎಸ್ (bjp-jds)​ ಪಕ್ಷಗಳು ಬೆಂಗಳೂರು ಟು ಮೈಸೂರು ಪಾದಯಾತ್ರೆ ಈಗಾಗಲೇ ಆರಂಭಿಸಲಾಗಿದೆ. ಬಿಜೆಪಿ-ಜೆಡಿಎಸ್​ಗೆ ಟಾಂಗ್​ ಕೊಡಲು ಕಾಂಗ್ರೆಸ್​​ ಕೂಡ ಜನಾಂದೋಲನ ಕಾರ್ಯಕ್ರಮವನ್ನು ಮಾಡುತ್ತಿದೆ. ಇದೀಗ ಎಲ್ಲಾ ಪಕ್ಷಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ನಾಳೆ ಕಾಂಗ್ರೆಸ್, ನಾಡಿದ್ದು ಮೈತ್ರಿ ಸಮಾವೇಶ ನಡೆಯಲಿದೆ.

ಮೈಸೂರು ಅಪರೂಪದ ರಾಜಕೀಯ ವಿದ್ಯಮಾನಕ್ಕೆ ಸಾಕ್ಷಿಯಾಗುತ್ತಿದೆ. ಒಂದೇ ಊರು, ಒಂದೇ ಮೈದಾನ, ಒಂದೇ ವೇದಿಕೆಯಲ್ಲಿ ಎರಡೆರಡೆ ಕಾರ್ಯಕ್ರಮಗಳು ನಡೆಯಲಿದೆ. ನಾಳೆ ಕಾಂಗ್ರೆಸ್​ನಿಂದ ಬಿಜೆಪಿ ವಿರುದ್ಧ ಜನಾಂದೋಲನ ಸಮಾವೇಶ ನಡೆದರೆ, ಆಗಸ್ಟ್​ 10ರಂದು ಬಿಜೆಪಿ-ಜೆಡಿಎಸ್​ನಿಂದ ಮೈಸೂರು ಛಲೋ ಸಮಾರೋಪ ನಡೆಯಲಿದೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಯಲ್ಲೂ ಸುಳಿವಿಲ್ಲ: ರಾಜಕೀಯ ನೇಪಥ್ಯಕ್ಕೆ ಸರಿದ ಸುಮಲತಾ ಅಂಬರೀಶ್?

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಒಬ್ಬರೆ ಗುತ್ತಿಗೆದಾರರಿಂದ ವೇದಿಕೆ ನಿರ್ಮಿಸಲಾಗಿದೆ. ಕಾಂಗ್ರೆಸ್, ಮೈತ್ರಿಕೂಟಗಳಿಂದ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ತಲಾ ಒಂದು ಲಕ್ಷ ಜನ ಸೇರಿಸಲು ಎರಡೂ ಪಕ್ಷಗಳು ಪ್ಲ್ಯಾನ್ ನಡೆಸಿದ್ದಾರೆ.

ಈಗಾಗಲೇ ಬಿಜೆಪಿ-ಜೆಡಿಎಸ್​​ ಪಾದಯಾತ್ರೆ ಶುರುವಾಗಿ ಇಂದಿಗೆ ಆರು ದಿನವಾಗಿದೆ. ಬಿಜೆಪಿ-ಜೆಡಿಎಸ್​ ಪಕ್ಷದ ಎಲ್ಲಾ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಪಾದಯಾತ್ರೆ ಇಂದು ಭದ್ರಕೋಟೆ ಮಂಡ್ಯದಲ್ಲಿ ಪ್ರೀತಂಗೌಡ ಬೆಂಬಲಿಗರು, ಜೆಡಿಎಸ್​ ಕಾರ್ಯಕರ್ತರ ಮಧ್ಯೆ ತಳ್ಳಾಟ, ನೂಕಾಟವೂ ನಡೀತು. ಇದೀಗ ಶ್ರೀರಂಗಪಟ್ಟಣಕ್ಕೆ ಬಂದು ತಲುಪಿದ್ದು ಆ ಮೂಲಕ ಆರನೇ ದಿನದ ಪಾದಯಾತ್ರೆ ಅಂತ್ಯವಾಗಿದೆ.

ಇದನ್ನೂ ಓದಿ: ಎಲ್ಲವೂ 10ನೇ ತಾರೀಕಿನ ನಂತರ ನೋಡ್ತಿರಿ: ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಚಲುವರಾಯಸ್ವಾಮಿ

ಪಾದಯಾತ್ರೆ ಬರುವ ದಾರಿಯಲ್ಲೇ ಜನಾಂದೋಲನ ಸಮಾವೇಶ ನಡೆಸಿ ಕೌಂಟರ್ ಕೊಟ್ಟಿದ್ದ ಕಾಂಗ್ರೆಸ್, ಮತ್ತೊಂದು ಮಾಸ್ಟರ್ ಪ್ಲ್ಯಾನ್ ಮಾಡಿದೆ. ಶನಿವಾರ ಮೈಸೂರಿನಲ್ಲಿ ಬಿಜೆಪಿ ಪಾದಯಾತ್ರೆ ಸಮಾರೋಪ ಸಮಾರಂಭ ನಡೆಯುತ್ತೆ. ಅದಕ್ಕೂ ಒಂದು ದಿನ ಮುಂಚಿತವಾಗಿ ಮೈಸೂರಿನಲ್ಲೇ ಸಿದ್ದರಾಮೋತ್ಸವ ಮಾದರಿಯಲ್ಲಿ ಬೃಹತ್ ಸಮಾವೇಶ ನಡೆಸಲು ಕಾಂಗ್ರೆಸ್ ಸ್ಕೆಚ್ ಹಾಕಿದೆ.

ಕಾಂಗ್ರೆಸ್‌ನ ಎಲ್ಲಾ ಶಾಸಕರು, ಸಚಿವರಿಗೆ ಭಾಗವಹಿಸಲು ಸೂಚಿಸಲಾಗಿದೆ. ನಾಳೆ ಮೈಸೂರಿನಲ್ಲಿ ಸಮಾವೇಶ ನಡೆಯಲಿದ್ದು, ಬಿಜೆಪಿ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಲು ಕೈ ನಾಯಕರು ಪ್ಲ್ಯಾನ್ ಮಾಡಿದ್ದಾರೆ. ಹೀಗಾಗಿಯೇ ಇಂದು ಮೈಸೂರಿಗೆ ತೆರಳುತ್ತಿರುವ ಸಿಎಂ ಸಿದ್ದರಾಮಯ್ಯ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ರಾಜ್ಯದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ