AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ವಿಡಿಯೋ ಹರಿಬಿಟ್ಟ ಕಾಂಗ್ರೆಸ್​​ ಮುಖಂಡ, ಗುತ್ತಿಗೆದಾರ ಸುಜೀತ್: ಮತ್ತೆ ಅಧಿಕಾರಿಗಳ ವಿರುದ್ಧ ಅಸಮಾಧಾನ

ನನ್ನ ಸಾವಿಗೆ ಎಮ್​​ಡಿ ಸಣ್ಣ ಚಿತ್ತಪ್ಪ ಕಾರಣ ಎಂದು ನಿನ್ನೆ ರಾತ್ರಿ ವಿಡಿಯೋ ಮಾಡಿ ಹರಿಬಿಟ್ಟಿದ್ದ ಪಾವಗಡ ತಾಲ್ಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಸುಚೀತ್​​ ಇದೀಗ ಮತ್ತೊಂದು ವಿಡಿಯೋ ವೈರಲ್​ ಮಾಡಿದ್ದಾರೆ. ನನ್ನನ್ನು ಕರೆಸಿ ಒತ್ತಾಯಪೂರ್ವಕವಾಗಿ ಅಧಿಕಾರಿಗಳು ವಿಡಿಯೋ ಮಾಡಿಸಿದ್ದಾರೆಂದು ಹೇಳಿದ್ದಾರೆ.

ಮತ್ತೊಂದು ವಿಡಿಯೋ ಹರಿಬಿಟ್ಟ ಕಾಂಗ್ರೆಸ್​​ ಮುಖಂಡ, ಗುತ್ತಿಗೆದಾರ ಸುಜೀತ್: ಮತ್ತೆ ಅಧಿಕಾರಿಗಳ ವಿರುದ್ಧ ಅಸಮಾಧಾನ
ಮತ್ತೊಂದು ವಿಡಿಯೋ ಹರಿಬಿಟ್ಟ ಕೈ ಮುಖಂಡ, ಗುತ್ತಿಗೆದಾರ ಸುಜೀತ್: ಮತ್ತೆ ಅಧಿಕಾರಿಗಳ ವಿರುದ್ಧ ಅಸಮಾಧಾನ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Jun 05, 2024 | 4:14 PM

Share

ತುಮಕೂರು, ಜೂನ್​ 05: ಪ್ರಥಮ ದರ್ಜೆ ಗುತ್ತಿಗೆದಾರ (Contractor) ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಹರಿ ಬಿಟ್ಟ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಪಾವಗಡ ತಾಲ್ಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಸುಜೀತ್​ ಇದೀಗ ಮತ್ತೊಂದು ವಿಡಿಯೋ ರಿಲೀಸ್ ಮಾಡಿದ್ದಾರೆ. ಬಿಲ್ ಪಾಸ್ ಮಾಡಿ ಕೊಡುತ್ತೇನೆ ಸಣ್ಣಚಿತ್ತಪ್ಪ ಏನು ತಪ್ಪಿಲ್ಲ ಅಂತಾ ಹೇಳು ಎಂದು ಒತ್ತಾಯಪೂರ್ವಕವಾಗಿ ಅಧಿಕಾರಿಗಳು ವಿಡಿಯೋ ಮಾಡಿಸಿದ್ದಾರೆಂದು ಹೇಳಿದ್ದಾರೆ.

ನನ್ನ ಸಾವಿಗೆ ಎಮ್​​ಡಿ ಸಣ್ಣ ಚಿತ್ತಪ್ಪ ಕಾರಣ ಎಂದು ನಿನ್ನೆ ರಾತ್ರಿ ವಿಡಿಯೋ ಮಾಡಿ ಹರಿಬಿಟ್ಟಿದ್ದ ಸುಚೀತ್​​ ಇದೀಗ ಮತ್ತೊಂದು ವಿಡಿಯೋ ವೈರಲ್​ ಮಾಡಿದ್ದಾರೆ. ಈ ವಿಡಿಯೋದಲ್ಲಿ ಮತ್ತೆ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ವಿಶ್ವೇಶ್ವರಯ್ಯ ಜಲ ನಿಗಮದಿಂದ ಬಿಲ್​ ಬಾಕಿ: ಕಾಂಗ್ರೆಸ್​ ಮುಖಂಡ, ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ

ವಿಶ್ವೇಶ್ವರಯ್ಯ ಜಲನಿಗಮ ಮಂಡಳಿ ಎಮ್​​ಡಿ ಸಣ್ಣಚಿತ್ತಪ್ಪ ವಿರುದ್ಧ ಕಾಮಗಾರಿ ಬಿಲ್​ ನೀಡುತ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಇದನ್ನು ಗಮನಿಸಿದ ಜಲಮಂಡಳಿ ವಿಭಾಗದ ಅಧಿಕಾರಿಗಳು ಸುಚೀತ್​ ನನ್ನು ಶಿರಾಗೆ ಕರೆಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಬಿಲ್‌ ಮಾಡಿಕೊಡುತ್ತೇವೆ ಆದರೆ ಸಣ್ಣ ಚಿತ್ತಪ್ಪರದ್ದು ಏನು ತಪ್ಪಿಲ್ಲ ಅಂತಾ ಹೇಳು ಎಂದು ಒತ್ತಾಯಪೂರ್ವಕವಾಗಿ ಮತ್ತೊಂದು ವಿಡಿಯೋ ಮಾಡಿಕೊಂಡಿರುವುದಾಗಿ ಸುಚೀತ್ ಹೇಳಿದ್ದಾರೆ.

ಇದನ್ನೂ ಓದಿ: ಕೆಆರ್​ಐಡಿಎಲ್​ನಿಂದ ಬಿಲ್​ ಬಾಕಿ: ಗುತ್ತಿಗೆದಾರ ನೇಣಿಗೆ ಶರಣು

ಎಸ್​ಸಿಪಿ ಅಡಿ ಸುಜೀತ್ ರಸ್ತೆ ಹಾಗೂ ಚೆಕ್ ಡ್ಯಾಮ್​​​ಗಳನ್ನು ಮಾಡಿಸಿದ್ದರು. ಕಾಮಗಾರಿ ಸರಿಯಿಲ್ಲ ಎಂದು ತನಿಖೆಯೂ ಮಾಡಿದ್ದ ಸಣ್ಣಚಿತ್ತಪ್ಪ, ಬಳಿಕ ತನಿಖೆಯಲ್ಲಿ ಕಾಮಗಾರಿ ಪೂರ್ಣ ಅಂತಾಲೂ ಸಾಬೀತಾಗಿತ್ತು. ಆದರೂ ಸುಮಾರು 45 ಲಕ್ಷ ರೂ. ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ್ದರು. ರಾಜಕೀಯ ದುರುದ್ದೇಶದಿಂದ ಹಣ ಬಿಡುಗಡೆ ಆಗಿಲ್ಲ ಎನ್ನೋ ಆರೋಪ ಮಾಡಿದ್ದು, ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಹರಿ ಬಿಟ್ಟಿದ್ದರು. ನಾನು ಎಸ್​ಸಿ ಆದ ಕಾರಣ ನನ್ನನ್ನು ತುಳಿಯುತ್ತಿರುವ ಆರೋಪ ಮಾಡಿರುವ ಸುಜೀತ್​, ಸಣ್ಣಚಿತ್ತಪ್ಪಗೆ ಗಲ್ಲು ಶಿಕ್ಷೆ ಆಗಬೇಕೆಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:11 pm, Wed, 5 June 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ