AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ವಿಡಿಯೋ ಹರಿಬಿಟ್ಟ ಕಾಂಗ್ರೆಸ್​​ ಮುಖಂಡ, ಗುತ್ತಿಗೆದಾರ ಸುಜೀತ್: ಮತ್ತೆ ಅಧಿಕಾರಿಗಳ ವಿರುದ್ಧ ಅಸಮಾಧಾನ

ನನ್ನ ಸಾವಿಗೆ ಎಮ್​​ಡಿ ಸಣ್ಣ ಚಿತ್ತಪ್ಪ ಕಾರಣ ಎಂದು ನಿನ್ನೆ ರಾತ್ರಿ ವಿಡಿಯೋ ಮಾಡಿ ಹರಿಬಿಟ್ಟಿದ್ದ ಪಾವಗಡ ತಾಲ್ಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಸುಚೀತ್​​ ಇದೀಗ ಮತ್ತೊಂದು ವಿಡಿಯೋ ವೈರಲ್​ ಮಾಡಿದ್ದಾರೆ. ನನ್ನನ್ನು ಕರೆಸಿ ಒತ್ತಾಯಪೂರ್ವಕವಾಗಿ ಅಧಿಕಾರಿಗಳು ವಿಡಿಯೋ ಮಾಡಿಸಿದ್ದಾರೆಂದು ಹೇಳಿದ್ದಾರೆ.

ಮತ್ತೊಂದು ವಿಡಿಯೋ ಹರಿಬಿಟ್ಟ ಕಾಂಗ್ರೆಸ್​​ ಮುಖಂಡ, ಗುತ್ತಿಗೆದಾರ ಸುಜೀತ್: ಮತ್ತೆ ಅಧಿಕಾರಿಗಳ ವಿರುದ್ಧ ಅಸಮಾಧಾನ
ಮತ್ತೊಂದು ವಿಡಿಯೋ ಹರಿಬಿಟ್ಟ ಕೈ ಮುಖಂಡ, ಗುತ್ತಿಗೆದಾರ ಸುಜೀತ್: ಮತ್ತೆ ಅಧಿಕಾರಿಗಳ ವಿರುದ್ಧ ಅಸಮಾಧಾನ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Jun 05, 2024 | 4:14 PM

Share

ತುಮಕೂರು, ಜೂನ್​ 05: ಪ್ರಥಮ ದರ್ಜೆ ಗುತ್ತಿಗೆದಾರ (Contractor) ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಹರಿ ಬಿಟ್ಟ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಪಾವಗಡ ತಾಲ್ಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಸುಜೀತ್​ ಇದೀಗ ಮತ್ತೊಂದು ವಿಡಿಯೋ ರಿಲೀಸ್ ಮಾಡಿದ್ದಾರೆ. ಬಿಲ್ ಪಾಸ್ ಮಾಡಿ ಕೊಡುತ್ತೇನೆ ಸಣ್ಣಚಿತ್ತಪ್ಪ ಏನು ತಪ್ಪಿಲ್ಲ ಅಂತಾ ಹೇಳು ಎಂದು ಒತ್ತಾಯಪೂರ್ವಕವಾಗಿ ಅಧಿಕಾರಿಗಳು ವಿಡಿಯೋ ಮಾಡಿಸಿದ್ದಾರೆಂದು ಹೇಳಿದ್ದಾರೆ.

ನನ್ನ ಸಾವಿಗೆ ಎಮ್​​ಡಿ ಸಣ್ಣ ಚಿತ್ತಪ್ಪ ಕಾರಣ ಎಂದು ನಿನ್ನೆ ರಾತ್ರಿ ವಿಡಿಯೋ ಮಾಡಿ ಹರಿಬಿಟ್ಟಿದ್ದ ಸುಚೀತ್​​ ಇದೀಗ ಮತ್ತೊಂದು ವಿಡಿಯೋ ವೈರಲ್​ ಮಾಡಿದ್ದಾರೆ. ಈ ವಿಡಿಯೋದಲ್ಲಿ ಮತ್ತೆ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ವಿಶ್ವೇಶ್ವರಯ್ಯ ಜಲ ನಿಗಮದಿಂದ ಬಿಲ್​ ಬಾಕಿ: ಕಾಂಗ್ರೆಸ್​ ಮುಖಂಡ, ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ

ವಿಶ್ವೇಶ್ವರಯ್ಯ ಜಲನಿಗಮ ಮಂಡಳಿ ಎಮ್​​ಡಿ ಸಣ್ಣಚಿತ್ತಪ್ಪ ವಿರುದ್ಧ ಕಾಮಗಾರಿ ಬಿಲ್​ ನೀಡುತ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಇದನ್ನು ಗಮನಿಸಿದ ಜಲಮಂಡಳಿ ವಿಭಾಗದ ಅಧಿಕಾರಿಗಳು ಸುಚೀತ್​ ನನ್ನು ಶಿರಾಗೆ ಕರೆಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಬಿಲ್‌ ಮಾಡಿಕೊಡುತ್ತೇವೆ ಆದರೆ ಸಣ್ಣ ಚಿತ್ತಪ್ಪರದ್ದು ಏನು ತಪ್ಪಿಲ್ಲ ಅಂತಾ ಹೇಳು ಎಂದು ಒತ್ತಾಯಪೂರ್ವಕವಾಗಿ ಮತ್ತೊಂದು ವಿಡಿಯೋ ಮಾಡಿಕೊಂಡಿರುವುದಾಗಿ ಸುಚೀತ್ ಹೇಳಿದ್ದಾರೆ.

ಇದನ್ನೂ ಓದಿ: ಕೆಆರ್​ಐಡಿಎಲ್​ನಿಂದ ಬಿಲ್​ ಬಾಕಿ: ಗುತ್ತಿಗೆದಾರ ನೇಣಿಗೆ ಶರಣು

ಎಸ್​ಸಿಪಿ ಅಡಿ ಸುಜೀತ್ ರಸ್ತೆ ಹಾಗೂ ಚೆಕ್ ಡ್ಯಾಮ್​​​ಗಳನ್ನು ಮಾಡಿಸಿದ್ದರು. ಕಾಮಗಾರಿ ಸರಿಯಿಲ್ಲ ಎಂದು ತನಿಖೆಯೂ ಮಾಡಿದ್ದ ಸಣ್ಣಚಿತ್ತಪ್ಪ, ಬಳಿಕ ತನಿಖೆಯಲ್ಲಿ ಕಾಮಗಾರಿ ಪೂರ್ಣ ಅಂತಾಲೂ ಸಾಬೀತಾಗಿತ್ತು. ಆದರೂ ಸುಮಾರು 45 ಲಕ್ಷ ರೂ. ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ್ದರು. ರಾಜಕೀಯ ದುರುದ್ದೇಶದಿಂದ ಹಣ ಬಿಡುಗಡೆ ಆಗಿಲ್ಲ ಎನ್ನೋ ಆರೋಪ ಮಾಡಿದ್ದು, ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಹರಿ ಬಿಟ್ಟಿದ್ದರು. ನಾನು ಎಸ್​ಸಿ ಆದ ಕಾರಣ ನನ್ನನ್ನು ತುಳಿಯುತ್ತಿರುವ ಆರೋಪ ಮಾಡಿರುವ ಸುಜೀತ್​, ಸಣ್ಣಚಿತ್ತಪ್ಪಗೆ ಗಲ್ಲು ಶಿಕ್ಷೆ ಆಗಬೇಕೆಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:11 pm, Wed, 5 June 24

ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್