AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka ByElection 2021: ಕಾಂಗ್ರೆಸ್​ಗೆ ಬೈ ಬೈ, ಬಿಜೆಪಿಗೆ ಜೈಜೈ ಎಂದ ಕಾಂಗ್ರೆಸ್​ ಮುಖಂಡ ಲಖನ್ ಜಾರಕಿಹೊಳಿ

ಬಿಜೆಪಿ ನಾಯಕರ ಭೇಟಿಯ ನಂತರ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಲಖನ್ ಜಾರಕಿಹೊಳಿ‌, ದೊಡ್ಡವರು ಮನೆಗೆ ಬಂದು ಆಹ್ವಾನ ನೀಡಿದ್ದಾರೆ. ನಾನು ಆಯ್ತು ಅಂತಾ ಹೇಳಿದ್ದೇನೆ. ಅಂತಿಮವಾಗಿ ಬೆಂಬಲಿಗರ ಜೊತೆ ಚರ್ಚಿಸಿದ ಮೇಲೆ ಅಧಿಕೃತವಾಗಿ ಘೋಷಿಸುತ್ತೇನೆ ಎಂದಿದ್ದಾರೆ.

Karnataka ByElection 2021: ಕಾಂಗ್ರೆಸ್​ಗೆ ಬೈ ಬೈ, ಬಿಜೆಪಿಗೆ ಜೈಜೈ ಎಂದ ಕಾಂಗ್ರೆಸ್​ ಮುಖಂಡ ಲಖನ್ ಜಾರಕಿಹೊಳಿ
ಲಖನ್​ ಜಾರಕಿಹೊಳಿ
Skanda
|

Updated on:Apr 05, 2021 | 2:08 PM

Share

ಬೆಳಗಾವಿ: ರಾಜ್ಯದಲ್ಲಿ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಬೆಳಗಾವಿ ಭಾಗದಲ್ಲಿ ಭಾರೀ ಪ್ರಭಾವ ಬೀರಬಲ್ಲ ಜಾರಕಿಹೊಳಿ ಸಹೋದರರು ಗೋಕಾಕ ಉಪಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ನಡುವೆಯೇ ಕಾಂಗ್ರೆಸ್​ ನಾಯಕ ಲಖನ್ ಜಾರಕಿಹೊಳಿಯನ್ನು ಬಿಜೆಪಿಗೆ ಸೇರಿಸಿಕೊಳ್ಳಲು ನಿರ್ಧರಿಸಲಾಗಿದ್ದು ಆಹ್ವಾನವನ್ನೂ ನೀಡಲಾಗಿದೆ. ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಉಮೇಶ್ ಕತ್ತಿ, ಭೈರತಿ ಬಸವರಾಜ್ ಗೋಕಾಕದಲ್ಲಿರುವ ಲಖನ್​ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿ ಬಿಜೆಪಿಗೆ ಬನ್ನಿ ಎಂದು ಸ್ವಾಗತಿಸಿದ್ದಾರೆ.

ಬಿಜೆಪಿ ನಾಯಕರ ಭೇಟಿಯ ನಂತರ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಲಖನ್ ಜಾರಕಿಹೊಳಿ‌, ಬಿಜೆಪಿ ನಾಯಕರು ಬಂದು ಆಹ್ವಾನ ನೀಡಿದ್ದಾರೆ. ಬಿಜೆಪಿಗೆ ಸೇರುವ ಕುರಿತು ಸಹೋದರರಾದ ಬಾಲಚಂದ್ರ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್​ನಲ್ಲಿ ಈಸ್ಟ್, ವೆಸ್ಟ್, ನಾರ್ತ್, ಸೌತ್ ಎಂದು 4 ಹೈಕಮಾಂಡ್ ಇದೆ ಏ.17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆಯಲ್ಲಿ ನಾನು ಬಿಜೆಪಿಗೆ ಬೆಂಬಲ ಸೂಚಿಸುತ್ತೇನೆ. ಕಾಂಗ್ರೆಸ್​ನಿಂದ ಸತೀಶ್​ ಜಾರಕಿಹೊಳಿಗೆ ಟಿಕೆಟ್​ ನೀಡಿದ್ದು ಏಕೆಂದು ಅರ್ಥವಾಗಿಲ್ಲ. ನನಗೆ ಅವರ ಪರ ಪ್ರಚಾರಕ್ಕೆ ಹೋಗಲು ಮುಜುಗರವಾಗುತ್ತದೆ ಎಂದು ಹೇಳಿರುವ ಲಖನ್​, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯ ಕಾಂಗ್ರೆಸ್​ನಲ್ಲಿಯೂ ನಾಲ್ಕು ಜನರ ಹೈಕಮಾಂಡ್ ಇದೆ. ಈಸ್ಟ್, ವೆಸ್ಟ್, ನಾರ್ತ್, ಸೌತ್ ಎಂದು 4 ಹೈಕಮಾಂಡ್ ಆಗಿದೆ. ಒಳ್ಳೆಯವರಿಗೆ ಕಾಂಗ್ರೆಸ್​ನಲ್ಲಿ ಬೆಲೆ ಇಲ್ಲ. ಹೀಗಾಗಿ ಪಕ್ಷದಲ್ಲಿ ಸಂಪರ್ಕ ಕಡಿಮೆ ಮಾಡಿಕೊಂಡಿದ್ದೇನೆ. ದೊಡ್ಡವರು ಮನೆಗೆ ಬಂದು ಆಹ್ವಾನ ನೀಡಿದ್ದಾರೆ. ನಾನು ಆಯ್ತು ಅಂತಾ ಹೇಳಿದ್ದೇನೆ. ಅಂತಿಮವಾಗಿ ಬೆಂಬಲಿಗರ ಜೊತೆ ಚರ್ಚಿಸಿದ ಮೇಲೆ ಅಧಿಕೃತವಾಗಿ ಘೋಷಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಬಗ್ಗೆ ಕೆಲ ದಿನಗಳಿಂದ ಅಸಮಾಧಾನಗೊಂಡಂತೆ ಕಾಣುತ್ತಿರುವ ಲಖನ್​ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಬಗ್ಗೆ ಹೈಕಮಾಂಡ್​ ಮಟ್ಟದಲ್ಲೇ ಹರಿಹಾಯ್ದಿದ್ದರು. ಅಲ್ಲದೇ, ಡಿ.ಕೆ.ಶಿವಕುಮಾರ್​ ವಿಚಾರದಲ್ಲಿ ಜಾಗರೂಕರಾಗಿರುವಂತೆ ಸಹೋದರ ಸತೀಶ್​ ಜಾರಕಿಹೊಳಿಗೆ ತಿಳಿಸಿದ್ದರು ಎಂಬ ವಿಚಾರಗಳು ಹೊರಬಿದ್ದಿದ್ದವು. ಅದಾಗಿ ಕೆಲ ದಿನಗಳ ಅಂತರದಲ್ಲೇ ಲಖನ್​ ಜಾರಕಿಹೊಳಿ ಕಾಂಗ್ರೆಸ್​ ತೊರೆದು ಬಿಜೆಪಿ ಸೇರುವ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Ramesh Jarkiholi Corona Positive​: ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​; ಗೋಕಾಕ್​ ಆರೋಗ್ಯಾಧಿಕಾರಿ ಸ್ಪಷ್ಟನೆ 

ಹೈಕಮಾಂಡ್​ ಡಿಕೆಶಿ​ ರಾಜೀನಾಮೆ ಪಡೆಯಲಿ: ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಆಗ್ರಹ

Published On - 2:06 pm, Mon, 5 April 21

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್