AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್ ಮುಖಂಡ ಮನೋಹರ್ ತಹಶೀಲ್ದಾರ್

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಮುಖಂಡ ಮನೋಹರ್ ತಹಶೀಲ್ದಾರ್​ ಶನಿವಾರ​ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರೊಂದಿಗೆ ಮಾತುಕತೆ ಬಳಿಕ ಮನೋಹರ್‌ ತಹಸೀಲ್ದಾರ್‌ ಅವರು ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆ ಆಗಿದ್ದಾರೆ ಎನ್ನಲಾಗುತ್ತಿದೆ. ಆ ಮೂಲಕ ಹಾವೇರಿ ಕ್ಷೇತ್ರವನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿದೆ. ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬೊಮ್ಮಾಯಿ ಉಪಸ್ಥಿತರಿದ್ದರು. 

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್ ಮುಖಂಡ ಮನೋಹರ್ ತಹಶೀಲ್ದಾರ್
ಕಾಂಗ್ರೆಸ್ ಮುಖಂಡ ಮನೋಹರ್ ತಹಸೀಲ್ದಾರ್ ಬಿಜೆಪಿ ಸೇರ್ಪಡೆ
ಕಿರಣ್​ ಹನಿಯಡ್ಕ
| Edited By: |

Updated on: Mar 02, 2024 | 3:01 PM

Share

ಬೆಂಗಳೂರು, ಮಾರ್ಚ್​ 2: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಸಮ್ಮುಖದಲ್ಲಿ ಕಾಂಗ್ರೆಸ್ ಮುಖಂಡ ಮನೋಹರ್ ತಹಶೀಲ್ದಾರ್​ ಶನಿವಾರ​ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡಿದ್ದಾರೆ. 50 ವರ್ಷಗಳಿಂದ ಕಾಂಗ್ರೆಸ್​ನಲ್ಲಿದ್ದ ಅವರು ಕಳೆದ ಚುನಾವಣೆಯಲ್ಲಿ ಟಿಕೆಟ್‌ ಕೈತಪ್ಪಿದ್ದರಿಂದ ಜೆಡಿಎಸ್‌ ಸೇರ್ಪಡೆಕೊಂಡಿದ್ದರು. ಇದೀಗ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣಾ ಸಿದ್ಧತೆಯಲ್ಲಿರುವ ಬಿಜೆಪಿ ಆ ಮೂಲಕ ಹಾವೇರಿ ಕ್ಷೇತ್ರವನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿದೆ. ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬೊಮ್ಮಾಯಿ ಉಪಸ್ಥಿತರಿದ್ದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರೊಂದಿಗೆ ಮಾತುಕತೆ ಬಳಿಕ ಮನೋಹರ್‌ ತಹಸೀಲ್ದಾರ್‌ ಅವರು ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆ ಆಗಿದ್ದಾರೆ ಎನ್ನಲಾಗುತ್ತಿದೆ. ಮನೋಹರ್‌ ತಹಸೀಲ್ದಾರ್‌ ಅವರು ನಾಗರಿಕ ಸ್ನೇಹಿ ನಾಯಕರಾಗಿದ್ದಲ್ಲದೆ, ಸಾಕಷ್ಟು ಜನಪ್ರಿಯತೆಯನ್ನು ಹೊಂದಿದ್ದಾರೆ. ಜೊತೆಗೆ ಅವರದ್ದೇ ಆದ ವೋಟ್‌ ಬ್ಯಾಂಕ್‌ ಹೊಂದಿದ್ದಾರೆ. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕರೆತರಲಾಗಿದೆ.

ಬಸವರಾಜ ಬೊಮ್ಮಾಯಿ ಹಾವೇರಿಯ ಬಿಜೆಪಿ ಅಭ್ಯರ್ಥಿ ಆಗಬೇಕು: ಮನೋಹರ್ ತಹಶೀಲ್ದಾರ್

ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಮನೋಹರ್ ತಹಶೀಲ್ದಾರ್​, ಹಾವೇರಿಗೆ ಒಳ್ಳೆ ಅಭ್ಯರ್ಥಿ ಬೇಕು ಎನ್ನುವ ಮಾತು ಇದೆ. ಹೀಗಾಗಿ ಬಸವರಾಜ ಬೊಮ್ಮಾಯಿ ಅವರು ಒಳ್ಳೆ ಕೆಲಸ ಮಾಡಿದಾರೆ. ಅವರು ಹಾವೇರಿಯ ಬಿಜೆಪಿ ಅಭ್ಯರ್ಥಿ ಆಗಬೇಕು. ಇದು ಜನರ ಅಭಿಪ್ರಾಯ ನಮ್ಮ ಅಭಿಪ್ರಾಯವೂ ಹೌದು. ನಾವು ಬೊಮ್ಮಾಯಿ ಅವರನ್ನ ಲೋಕಸಭಾ ಸದಸ್ಯರನ್ನಾಗಿ ಮಾಡಿ ಕಳಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ 2024: 3ನೇ ಬಾರಿಗೆ ಹೊರಟು ನಿಂತಿದೆ ಮೋದಿ ಕುದುರೆ, ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಅಭ್ಯರ್ಥಿಗಳ ಆಯ್ಕೆ

ಎಲ್ಲರೂ ಒಪ್ಪಿದ್ದಕ್ಕೆ ಬಿಜೆಪಿಗೆ ಬಂದಿದ್ದೇನೆ. ಬಸವರಾಜ ಬೊಮ್ಮಾಯಿ ಅವರು ಇರುವಷ್ಟು ಕಾಲ ಅವರೊಂದಿಗೆ ಇರೋಣ ಅಂತ ಬಂದಿದ್ದೇನೆ. ಯಾವುದೇ ಟಿಕೆಟ್‌ಗೆ ಬೇಡಿಕೆ ಇಟ್ಟಿಲ್ಲ. ಪಕ್ಷದಲ್ಲಿ ಗೌರವ ಕೊಡಿ ಅಂತ ಅಷ್ಟೇ ಕೇಳಿದ್ದೇನೆ ಎಂದರು.

ಕಾಂಗ್ರೆಸ್ ಸೇರಲಿದ್ದಾರಾ ಕೆ.ಸಿ.ನಾರಾಯಣಗೌಡ?

ಕೆ.ಸಿ.ನಾರಾಯಣಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ. JDS-ಬಿಜೆಪಿ ಮೈತ್ರಿ ವಿರುದ್ಧ ನಾರಾಯಣಗೌಡ ಸಿಡಿದೆದ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ಜತೆ ರಹಸ್ಯ ಚರ್ಚೆ ನಡೆಸಿದ್ದಾರಂತೆ. ಮಂಡ್ಯ ಕ್ಷೇತ್ರವನ್ನ JDS​ಗೆ ಬಿಟ್ಟು ಕೊಡುವ ಬಗ್ಗೆ ನಾರಾಯಣಗೌಡ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ತೊರೆಯಲಿದ್ದಾರೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ