AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ​ಗಾಂಧಿ ರಾಜ್ಯದಲ್ಲಿ ಎರಡು ದಿನ ಪ್ರವಾಸ, ರ‍್ಯಾಲಿ

ದಾವಣಗೆರೆ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್​ 7 ಮತ್ತು 8 ರಂದು ರಾಜ್ಯದಲ್ಲಿ ರ‍್ಯಾಲಿ ನಡೆಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ. ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ ವಿರೋಧಿಸಿ ರಾಹುಲ್​ ಗಾಂಧಿ ಕರ್ನಾಟಕದಲ್ಲಿ ಪಂಜಾಬ್​ ಮಾದರಿ ರಾಜ್ಯದಲ್ಲಿ ಟ್ರ್ಯಾಕ್ಟರ್​ ರ‍್ಯಾಲಿ ಹಮ್ಮಿಕೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು. ರೈತ ವಿರೋಧಿ ನೀತಿಗೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷರ ಸೂಚನೆ […]

ರಾಹುಲ್ ​ಗಾಂಧಿ ರಾಜ್ಯದಲ್ಲಿ ಎರಡು ದಿನ ಪ್ರವಾಸ, ರ‍್ಯಾಲಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Oct 20, 2020 | 4:17 PM

Share

ದಾವಣಗೆರೆ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್​ 7 ಮತ್ತು 8 ರಂದು ರಾಜ್ಯದಲ್ಲಿ ರ‍್ಯಾಲಿ ನಡೆಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.

ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ ವಿರೋಧಿಸಿ ರಾಹುಲ್​ ಗಾಂಧಿ ಕರ್ನಾಟಕದಲ್ಲಿ ಪಂಜಾಬ್​ ಮಾದರಿ ರಾಜ್ಯದಲ್ಲಿ ಟ್ರ್ಯಾಕ್ಟರ್​ ರ‍್ಯಾಲಿ ಹಮ್ಮಿಕೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು.

ರೈತ ವಿರೋಧಿ ನೀತಿಗೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಸಹಿ ಸಂಗ್ರಹ ಚಳುವಳಿಗೆ ಚಾಲನೆ ನೀಡಲಾಗುವುದು. ಹಾಗಾಗಿ, ನವೆಂಬರ್ 7-8 ರಂದು ಎರಡು ದಿನ ರಾಹುಲ್​ ಗಾಂಧಿ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದಾರೆ. ಸಹಿ ಸಂಗ್ರಹ ಚಳುವಳಿಯು ಹುಬ್ಬಳ್ಳಿಯಿಂದ ಹುಳಿಯಾಳ್ ಮೂಲಕ‌ ಬೆಳಗಾವಿಗೆ ಮತ್ತು ದಾವಣಗೆರೆಯಿಂದ ಚನ್ನಗಿರಿ ಮೂಲಕ ಶಿವಮೊಗ್ಗ ಜಿಲ್ಲೆಯ ಕಾಗೋಡು ತಲುಪುವುದು. ಈ ಎರಡು ಮಾರ್ಗಗಳಲ್ಲಿ ಒಂದು ಮಾರ್ಗವನ್ನು ರಾಹುಲ್​ ಗಾಂಧಿ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಇವೆರಡರಲ್ಲಿ ಒಂದು ಮಾರ್ಗವನ್ನು ಅಂತಿಮಗೊಳಿಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.

Published On - 4:12 pm, Tue, 20 October 20

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ