AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ​ಗಾಂಧಿ ರಾಜ್ಯದಲ್ಲಿ ಎರಡು ದಿನ ಪ್ರವಾಸ, ರ‍್ಯಾಲಿ

ದಾವಣಗೆರೆ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್​ 7 ಮತ್ತು 8 ರಂದು ರಾಜ್ಯದಲ್ಲಿ ರ‍್ಯಾಲಿ ನಡೆಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ. ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ ವಿರೋಧಿಸಿ ರಾಹುಲ್​ ಗಾಂಧಿ ಕರ್ನಾಟಕದಲ್ಲಿ ಪಂಜಾಬ್​ ಮಾದರಿ ರಾಜ್ಯದಲ್ಲಿ ಟ್ರ್ಯಾಕ್ಟರ್​ ರ‍್ಯಾಲಿ ಹಮ್ಮಿಕೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು. ರೈತ ವಿರೋಧಿ ನೀತಿಗೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷರ ಸೂಚನೆ […]

ರಾಹುಲ್ ​ಗಾಂಧಿ ರಾಜ್ಯದಲ್ಲಿ ಎರಡು ದಿನ ಪ್ರವಾಸ, ರ‍್ಯಾಲಿ
ಸಾಧು ಶ್ರೀನಾಥ್​
| Updated By: KUSHAL V|

Updated on:Oct 20, 2020 | 4:17 PM

Share

ದಾವಣಗೆರೆ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್​ 7 ಮತ್ತು 8 ರಂದು ರಾಜ್ಯದಲ್ಲಿ ರ‍್ಯಾಲಿ ನಡೆಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.

ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ ವಿರೋಧಿಸಿ ರಾಹುಲ್​ ಗಾಂಧಿ ಕರ್ನಾಟಕದಲ್ಲಿ ಪಂಜಾಬ್​ ಮಾದರಿ ರಾಜ್ಯದಲ್ಲಿ ಟ್ರ್ಯಾಕ್ಟರ್​ ರ‍್ಯಾಲಿ ಹಮ್ಮಿಕೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು.

ರೈತ ವಿರೋಧಿ ನೀತಿಗೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಸಹಿ ಸಂಗ್ರಹ ಚಳುವಳಿಗೆ ಚಾಲನೆ ನೀಡಲಾಗುವುದು. ಹಾಗಾಗಿ, ನವೆಂಬರ್ 7-8 ರಂದು ಎರಡು ದಿನ ರಾಹುಲ್​ ಗಾಂಧಿ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದಾರೆ. ಸಹಿ ಸಂಗ್ರಹ ಚಳುವಳಿಯು ಹುಬ್ಬಳ್ಳಿಯಿಂದ ಹುಳಿಯಾಳ್ ಮೂಲಕ‌ ಬೆಳಗಾವಿಗೆ ಮತ್ತು ದಾವಣಗೆರೆಯಿಂದ ಚನ್ನಗಿರಿ ಮೂಲಕ ಶಿವಮೊಗ್ಗ ಜಿಲ್ಲೆಯ ಕಾಗೋಡು ತಲುಪುವುದು. ಈ ಎರಡು ಮಾರ್ಗಗಳಲ್ಲಿ ಒಂದು ಮಾರ್ಗವನ್ನು ರಾಹುಲ್​ ಗಾಂಧಿ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಇವೆರಡರಲ್ಲಿ ಒಂದು ಮಾರ್ಗವನ್ನು ಅಂತಿಮಗೊಳಿಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.

Published On - 4:12 pm, Tue, 20 October 20

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು