ಲಸಿಕೆ ಅಭಿಯಾನ ಯಶಸ್ವಿಯಾಗಲಿ ಎಂದು ಶುಭ ನುಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ

ಕೊವಿಡ್ ವಿರುದ್ಧ ಆರಂಭವಾಗಿರುವ ಲಸಿಕೆ ವಿತರಣಾ ಅಭಿಯಾನಕ್ಕೆ ಸಿದ್ದರಾಮಯ್ಯ ಶುಭಕೋರಿದ್ದಾರೆ. ಲಸಿಕೆ ಅಭಿಯಾನವು ಯಶಸ್ವಿಯಾಗಲಿ. ಜನರ ಜೀವಗಳನ್ನು ಉಳಿಸಲಿ ಎಂದಿದ್ದಾರೆ.

ಲಸಿಕೆ ಅಭಿಯಾನ ಯಶಸ್ವಿಯಾಗಲಿ ಎಂದು ಶುಭ ನುಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
ಸಿದ್ದರಾಮಯ್ಯ
Edited By:

Updated on: Apr 06, 2022 | 8:54 PM

ಬೆಂಗಳೂರು: ದೇಶಾದ್ಯಂತ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿಯಿಂದ ಚಾಲನೆ ದೊರೆತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲಸಿಕೆ ಅಭಿಯಾನಕ್ಕೆ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಿದ್ದಾರೆ. ಮೊದಲ ಹಂತದಲ್ಲಿ ದೇಶಾದ್ಯಂತ 3 ಕೋಟಿ ಜನರಿಗೆ ಲಸಿಕೆ ವಿತರಿಸಲಾಗುತ್ತದೆ. ಕೊವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗುತ್ತದೆ.

ಈ ಬಗ್ಗೆ ಕಾಂಗ್ರೆಸ್ ಧುರೀಣ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕೊವಿಡ್-19 ವಿರುದ್ಧ ಆರಂಭವಾಗಿರುವ ಲಸಿಕೆ ವಿತರಣಾ ಅಭಿಯಾನಕ್ಕೆ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. ಲಸಿಕೆ ಅಭಿಯಾನವು ಯಶಸ್ವಿಯಾಗಲಿ. ಜನರ ಜೀವಗಳನ್ನು ಉಳಿಸಲಿ. ಆ ಮೂಲಕ, ಭಾರತೀಯರಿಗೆ ಹೊಸ ಬದುಕು ಆರಂಭವಾಗಲಿ ಎಂದು ಶುಭ ಹಾರೈಸಿದ್ದಾರೆ.

ಆತಂಕ ಬಿಟ್ಟು ಲಸಿಕೆ ತೆಗೆದುಕೊಳ್ಳಿ: ಡಾ. ಎಂ.ಕೆ. ಸುದರ್ಶನ್ ಅಭಯ

 

Published On - 1:40 pm, Sat, 16 January 21

Web contact

TV9 Kannada

Read More
Follow Us