AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ

ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರವನ್ನು ಸಿದ್ದರಾಮಯ್ಯ ಪ್ರತಿನಿಧಿಸುತ್ತಾರೆ. ತಮ್ಮ ಕ್ಷೇತ್ರದ ಆರೋಗ್ಯ ಸಿಬ್ಬಂದಿಗೆ 100 ಎನ್-95 ಮಾಸ್ಕ್ ವಿತರಿಸಿದ್ದಾರೆ. ಜೊತೆಗೆ, 50 ಪಿಪಿಇ ಕಿಟ್​ಗಳನ್ನು ಕೂಡ ಸಿದ್ದರಾಮಯ್ಯ ಬೆಂಗಲಿಗರು ವಿತರಿಸಿದ್ದಾರೆ.

ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Aug 23, 2021 | 12:27 PM

Share

ಬಾಗಲಕೋಟೆ: ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಸೋಂಕಿತರ ನೆರವಿಗೆ ಧಾವಿಸಿದ್ದಾರೆ. ಬಾದಾಮಿ ತಾಲೂಕು ಆಡಳಿತಕ್ಕೆ 3 ಆ್ಯಂಬುಲೆನ್ಸ್ ಹಸ್ತಾಂತರ ಮಾಡಿದ್ದಾರೆ. ಸಿದ್ದರಾಮಯ್ಯ ಬೆಂಬಲಿಗರು ಆ್ಯಂಬುಲೆನ್ಸ್ ಹಸ್ತಾಂತರಿಸಿದ್ದಾರೆ. ಬಾದಾಮಿ ತಹಸೀಲ್ದಾರ್ ಸುಹಾಸ ಇಂಗಳೆ, ಟಿಎಚ್​ಒ ಡಾ. ಎಂ.ಬಿ. ಪಾಟಿಲ್​ಗೆ ಸಿದ್ದರಾಮಯ್ಯ ಬೆಂಬಲಿಗರು ಆಂಬುಲೆನ್ಸ್ ಹಸ್ತಾಂತರಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರವನ್ನು ಸಿದ್ದರಾಮಯ್ಯ ಪ್ರತಿನಿಧಿಸುತ್ತಾರೆ. ತಮ್ಮ ಕ್ಷೇತ್ರದ ಆರೋಗ್ಯ ಸಿಬ್ಬಂದಿಗೆ 100 ಎನ್-95 ಮಾಸ್ಕ್ ವಿತರಿಸಿದ್ದಾರೆ. ಜೊತೆಗೆ, 50 ಪಿಪಿಇ ಕಿಟ್​ಗಳನ್ನು ಕೂಡ ಸಿದ್ದರಾಮಯ್ಯ ಬೆಂಗಲಿಗರು ವಿತರಿಸಿದ್ದಾರೆ.

ಬಾದಾಮಿ ತಾಲೂಕಿನಲ್ಲಿ ಪರಿಸ್ಥಿತಿ ಹೇಗಿದೆ? ಎರಡನೇ ಅಲೆ ಕಾಣಿಸಿಕೊಂಡ ಮೇಲೆ ಸಿದ್ದರಾಮಯ್ಯ ಇನ್ನೂ ತಮ್ಮ ಕ್ಷೇತ್ರಕ್ಕೆ ಬಂದಿಲ್ಲ. ಕಳೆದ ವಾರ ಕ್ಷೇತ್ರದಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಕ್ರಮ ತಡಗೆದುಕೊಂಡಿದ್ದ ಸಿದ್ದರಾಮಯ್ಯ, ಅಧಿಕಾರಿಗಳ ಜೊತೆ ಮೊಬೈಲ್​ನಲ್ಲಿ ಮಾತನಾಡಿ ನಿತ್ಯ 40 ಜಂಬೂ ಸಿಲಿಂಡರ್ ಪೂರೈಕೆಗೆ ಕ್ರಮ ಕೈಗೊಂಡಿದ್ದರು. ಬಳಿಕ, ಇಂದು ಮೂರು ಅಂಬುಲೆನ್ಸ್ ಒದಗಿಸಿದ್ದಾರೆ. ಆದರೆ, ಕ್ಷೇತ್ರಕ್ಕೆ ಸಿದ್ದರಾಮಯ್ಯ ಯಾವಾಗ ಬರ್ತಾರೆ ಎಂದು ಕ್ಷೇತ್ರದ ಜನರು ಕಾಯುತ್ತಿದ್ದಾರೆ.

ಟ್ವಿಟರ್​ನಲ್ಲಿ ಪ್ರೊಫೈಲ್​ ಪಿಕ್ಚರ್​ ಬದಲಿಸಿದ ಸಿದ್ದರಾಮಯ್ಯ ಕೊರೊನಾ ಎರಡನೇ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ವ್ಯಾಕ್ಸಿನ್ ನೀಡದ ವಿಚಾರಕ್ಕೆ ಸಿದ್ದರಾಮಯ್ಯ ಪ್ರೊಫೈಲ್ ಪಿಕ್ಚರ್​ ಬದಲಾವಣೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿಜೀ, ನಮ್ಮನೆ ಮಕ್ಕಳ ಲಸಿಕೆ ವಿದೇಶಕ್ಕೆ ರಫ್ತು ಮಾಡಿದ್ಯಾಕೆ? ಎಂದು ಪ್ರೊಫೈಲ್ ಪಿಕ್ಚರ್ ಬದಲಾಯಿಸಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಭಾರತ ಮತ್ತು ಬ್ರಿಟನ್​ನ​ಲ್ಲಿ ಕಂಡುಬರುವ ಕೊರೊನಾವೈರಸ್ ತಳಿಗಳ ವಿರುದ್ಧ ಕೊವಾಕ್ಸಿನ್ ಪರಿಣಾಮಕಾರಿ: ಭಾರತ್ ಬಯೋಟೆಕ್‌

ತಮಿಳುನಾಡಿನಲ್ಲಿ ಕೊರೊನಾ ಪ್ಯಾಕೇಜ್ ಘೋಷಣೆ; ಎಲ್ಲಾ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೊವಿಡ್​ಗೆ ಉಚಿತ ಚಿಕಿತ್ಸೆ

Published On - 6:27 pm, Sun, 16 May 21

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್