AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ

ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರವನ್ನು ಸಿದ್ದರಾಮಯ್ಯ ಪ್ರತಿನಿಧಿಸುತ್ತಾರೆ. ತಮ್ಮ ಕ್ಷೇತ್ರದ ಆರೋಗ್ಯ ಸಿಬ್ಬಂದಿಗೆ 100 ಎನ್-95 ಮಾಸ್ಕ್ ವಿತರಿಸಿದ್ದಾರೆ. ಜೊತೆಗೆ, 50 ಪಿಪಿಇ ಕಿಟ್​ಗಳನ್ನು ಕೂಡ ಸಿದ್ದರಾಮಯ್ಯ ಬೆಂಗಲಿಗರು ವಿತರಿಸಿದ್ದಾರೆ.

ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Updated By: ganapathi bhat|

Updated on:Aug 23, 2021 | 12:27 PM

Share

ಬಾಗಲಕೋಟೆ: ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಸೋಂಕಿತರ ನೆರವಿಗೆ ಧಾವಿಸಿದ್ದಾರೆ. ಬಾದಾಮಿ ತಾಲೂಕು ಆಡಳಿತಕ್ಕೆ 3 ಆ್ಯಂಬುಲೆನ್ಸ್ ಹಸ್ತಾಂತರ ಮಾಡಿದ್ದಾರೆ. ಸಿದ್ದರಾಮಯ್ಯ ಬೆಂಬಲಿಗರು ಆ್ಯಂಬುಲೆನ್ಸ್ ಹಸ್ತಾಂತರಿಸಿದ್ದಾರೆ. ಬಾದಾಮಿ ತಹಸೀಲ್ದಾರ್ ಸುಹಾಸ ಇಂಗಳೆ, ಟಿಎಚ್​ಒ ಡಾ. ಎಂ.ಬಿ. ಪಾಟಿಲ್​ಗೆ ಸಿದ್ದರಾಮಯ್ಯ ಬೆಂಬಲಿಗರು ಆಂಬುಲೆನ್ಸ್ ಹಸ್ತಾಂತರಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರವನ್ನು ಸಿದ್ದರಾಮಯ್ಯ ಪ್ರತಿನಿಧಿಸುತ್ತಾರೆ. ತಮ್ಮ ಕ್ಷೇತ್ರದ ಆರೋಗ್ಯ ಸಿಬ್ಬಂದಿಗೆ 100 ಎನ್-95 ಮಾಸ್ಕ್ ವಿತರಿಸಿದ್ದಾರೆ. ಜೊತೆಗೆ, 50 ಪಿಪಿಇ ಕಿಟ್​ಗಳನ್ನು ಕೂಡ ಸಿದ್ದರಾಮಯ್ಯ ಬೆಂಗಲಿಗರು ವಿತರಿಸಿದ್ದಾರೆ.

ಬಾದಾಮಿ ತಾಲೂಕಿನಲ್ಲಿ ಪರಿಸ್ಥಿತಿ ಹೇಗಿದೆ? ಎರಡನೇ ಅಲೆ ಕಾಣಿಸಿಕೊಂಡ ಮೇಲೆ ಸಿದ್ದರಾಮಯ್ಯ ಇನ್ನೂ ತಮ್ಮ ಕ್ಷೇತ್ರಕ್ಕೆ ಬಂದಿಲ್ಲ. ಕಳೆದ ವಾರ ಕ್ಷೇತ್ರದಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಕ್ರಮ ತಡಗೆದುಕೊಂಡಿದ್ದ ಸಿದ್ದರಾಮಯ್ಯ, ಅಧಿಕಾರಿಗಳ ಜೊತೆ ಮೊಬೈಲ್​ನಲ್ಲಿ ಮಾತನಾಡಿ ನಿತ್ಯ 40 ಜಂಬೂ ಸಿಲಿಂಡರ್ ಪೂರೈಕೆಗೆ ಕ್ರಮ ಕೈಗೊಂಡಿದ್ದರು. ಬಳಿಕ, ಇಂದು ಮೂರು ಅಂಬುಲೆನ್ಸ್ ಒದಗಿಸಿದ್ದಾರೆ. ಆದರೆ, ಕ್ಷೇತ್ರಕ್ಕೆ ಸಿದ್ದರಾಮಯ್ಯ ಯಾವಾಗ ಬರ್ತಾರೆ ಎಂದು ಕ್ಷೇತ್ರದ ಜನರು ಕಾಯುತ್ತಿದ್ದಾರೆ.

ಟ್ವಿಟರ್​ನಲ್ಲಿ ಪ್ರೊಫೈಲ್​ ಪಿಕ್ಚರ್​ ಬದಲಿಸಿದ ಸಿದ್ದರಾಮಯ್ಯ ಕೊರೊನಾ ಎರಡನೇ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ವ್ಯಾಕ್ಸಿನ್ ನೀಡದ ವಿಚಾರಕ್ಕೆ ಸಿದ್ದರಾಮಯ್ಯ ಪ್ರೊಫೈಲ್ ಪಿಕ್ಚರ್​ ಬದಲಾವಣೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿಜೀ, ನಮ್ಮನೆ ಮಕ್ಕಳ ಲಸಿಕೆ ವಿದೇಶಕ್ಕೆ ರಫ್ತು ಮಾಡಿದ್ಯಾಕೆ? ಎಂದು ಪ್ರೊಫೈಲ್ ಪಿಕ್ಚರ್ ಬದಲಾಯಿಸಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಭಾರತ ಮತ್ತು ಬ್ರಿಟನ್​ನ​ಲ್ಲಿ ಕಂಡುಬರುವ ಕೊರೊನಾವೈರಸ್ ತಳಿಗಳ ವಿರುದ್ಧ ಕೊವಾಕ್ಸಿನ್ ಪರಿಣಾಮಕಾರಿ: ಭಾರತ್ ಬಯೋಟೆಕ್‌

ತಮಿಳುನಾಡಿನಲ್ಲಿ ಕೊರೊನಾ ಪ್ಯಾಕೇಜ್ ಘೋಷಣೆ; ಎಲ್ಲಾ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೊವಿಡ್​ಗೆ ಉಚಿತ ಚಿಕಿತ್ಸೆ

Published On - 6:27 pm, Sun, 16 May 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ