AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಜ್ವರ; ವೈದ್ಯರು ಸೂಚಿಸಿದರೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಸಿದ್ದರಾಮಯ್ಯ ತೆರಳಿದ್ದಾರೆ. ವೈದ್ಯರು ಸೂಚಿಸಿದರೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎಂದೂ ತಿಳಿದುಬಂದಿದೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಜ್ವರ; ವೈದ್ಯರು ಸೂಚಿಸಿದರೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ
ವಿಪಕ್ಷ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 14, 2021 | 12:50 PM

Share

ಬೆಂಗಳೂರು: ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯಗೆ ಜ್ವರ ಇದೆ ಎಂದು ಮಾಹಿತಿ ಲಭ್ಯವಾಗಿದೆ. ಹೀಗಾಗಿ, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಅವರು ತೆರಳಿದ್ದಾರೆ. ವೈದ್ಯರು ಸೂಚಿಸಿದರೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎಂದೂ ತಿಳಿದುಬಂದಿದೆ.

ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ತಪಾಸಣೆಗೆ ಒಳಪಡುತ್ತಿದ್ದಾರೆ. ಅಗತ್ಯ ಬಿದ್ದರೆ ವೈದ್ಯರ ಸಲಹೆ ಆಧರಿಸಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ.

ಕೊರೊನಾ ಸೋಂಕಿನಿಂದಾಗಿ ಸಿದ್ದರಾಮಯ್ಯ ಕಳೆದ ವರ್ಷ ಆಗಸ್ಟ್​ನಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ವಾರದ ಬಳಿಕ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದರು. ಸೋಂಕಿನಿಂದ ಗುಣಮಖರಾದ ಬಳಿಕ, ಕೊವಿಡ್‌ ಮಾರ್ಗಸೂತ್ರಗಳಂತೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ನಂತರ ನಿಯಮದಂತೆ ಮನೆಯಲ್ಲಿ ಕ್ವಾರಂಟೈನ್‌ ಆಗಿದ್ದರು.

ಸಿದ್ದರಾಮಯ್ಯ ಮಾರ್ಚ್​ನಲ್ಲಿ ಕೊರೊನಾ ಲಸಿಕೆಯನ್ನೂ ಪಡೆದುಕೊಂಡಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಸಿದ್ದರಾಮಯ್ಯ ಕೊವಿಡ್​ ಲಸಿಕೆ ಹಾಕಿಸಿಕೊಂಡಿದ್ದರು. ಲಸಿಕೆ ಪಡೆದ ಬಳಿಕ ಸ್ವಲ್ಪ ಹೊತ್ತು ಹಾಗೇ ಕುಳಿತಿದ್ದ ಸಿದ್ದರಾಮಯ್ಯಗೆ ನರ್ಸ್​ ಸರ್​ ವ್ಯಾಕ್ಸಿನ್​ ಹಾಕಿ ಆಯ್ತು ಎಂದು ಹೇಳಿದ್ದರು. ಅದಕ್ಕೆ ಕೊಂಚ ಆಶ್ಚರ್ಯಗೊಂಡ ಸಿದ್ದರಾಮಯ್ಯ, ಹೌದಾ?  ಗೊತ್ತೇ ಆಗಲಿಲ್ಲ ಎಂದು ನಗೆ ಚಟಾಕಿ ಹಾರಿಸಿದ್ದರು. 

ಇದನ್ನೂ ಓದಿ: ಸಿದ್ದರಾಮಯ್ಯ ಹೇಳಿದ ಮೆಡಿಸನ್‌ ತಗೊಂಡ್ರೆ 99.97 % ಕೊರೊನಾ ಬರಲ್ವಂತೆ

ರಾಜ್ಯದಲ್ಲಿ ಕೊರೊನಾ ನಿಯಂತ್ರಣ, ಚಿಕಿತ್ಸೆಗೆಂದು ಮುಖ್ಯಮಂತ್ರಿ ಯಡಿಯೂರಪ್ಪ- ಪ್ರಧಾನಿ ಮೋದಿಗೆ 11 ಸಲಹೆ ನೀಡಿದ ಸಿದ್ದರಾಮಯ್ಯ

Published On - 3:41 pm, Tue, 1 June 21

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!